ಮೈಸೂರು: ಕತ್ತಲಲ್ಲಿ ದೀಪ ಹಚ್ಚಿದ್ರೆ ಕೊರೊನಾ ವೈರಸ್ ದೀಪದ ಬಳಿ ಬಂದು ಶಾಖಕ್ಕೆ ಸಾಯುತ್ತೆ ಎಂದು ಬಿಜೆಪಿ ಶಾಸಕ ರಾಮದಾಸ್ ಹೇಳಿದ್ದಾರೆ. ಮೈಸೂರಿನ ಎಂಜಿ ಮಾರುಕಟ್ಟೆಯಲ್ಲಿ ಶಾಸಕರು ಕ್ಯಾಂಡಲ್, ಮಾಸ್ಕ್ ಹಾಗೂ ದೀಪ ವಿತರಣೆ ಮಾಡುತ್ತಿದ್ದ ವೇಳೆಯಲ್ಲಿ ನಾಗರೀಕರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಕತ್ತಲಿನಲ್ಲಿ ದೀಪ ಹಚ್ಚಿದರೆ ಎಲ್ಲೆ ಇದ್ದರೂ ವೈರಸ್ ದೀಪದ ಬಳಿ ಬರುತ್ತೆ. ಆಗ ದೀಪದ ಶಾಖಕ್ಕೆ ವೈರಸ್ ಸಾವನ್ನ ಕಾಣುತ್ತೆ. ಈ ಕಾರಣಕ್ಕೆ ಪ್ರಧಾನಿ ಮೋದಿಯವರು ದೀಪ ಹಚ್ಚಲು ದೇಶಾದ್ಯಾಂತ ಕರೆ ನೀಡಿದ್ದಾರೆ ಎಂದರು..
ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!
ದೇಶದ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ (BJP) ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದೆ. ಪ್ರಸ್ತುತ, ಬಿಜೆಪಿ ದೇಶಾದ್ಯಂತ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇರವಾಗಿ ಅಥವಾ...








