ಪ್ರಧಾನ ಮಂತ್ರಿ ನರೇಂದ್ರ ಏಪ್ರಿಲ್ 5 ರಂದು ರಾತ್ರಿ 9ಗಂಟೆಗೆ 9 ನಿಮಿಷಗಳ ಕಾಲ ಮನೆಯ ಮುಂದೆ ಅಥಾವ ಬಾಲ್ಕನಿಯಲ್ಲಿ ನಿಂತು ದೀಪ ಬೆಳಗಿಸಿ ಎಂದು ಕರೆ ನೀಡಿದ್ದರು. ಮೇಣದ ಬತ್ತಿ, ಮೊಬೈಲ್ ಲೈಟ್, ದೀಪ ಬೆಳಗಿಸಿ ಎಂದು ಕರೆ ನೀಡಿದ್ದರು. ಇದೀಗ ಈ ಕರೆಗೆ ದೇಶದಾದ್ಯಂತ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಮೋದಿ ಅವರ ವಿರುದ್ದ ಕಿಡಿಕಾರಿದ್ದಾರೆ. ಮನೆಯಲ್ಲಿ ಕ್ಯಾಂಡಲ್ ಲೈಟ್ ಅಥವಾ ಮೊಬೈಲ್ ಟಾರ್ಚ್ ಬೆಳಗಿಸುವುದರಿಂದ ಕೊರೊನಾ ಸಮಸ್ಯೆ ಬಗೆಹರಿಸಲು ಆಗುವುದಿಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಬೇರೆ ದೇಶಗಳಿಗೆ ಹೋಲಿಸಿದಾಗ ಭಾರತದಲ್ಲಿ ಹೆಚ್ಚು ಕೊರೊನಾ ಟೆಸ್ಟ್ ನಡೆಯುತ್ತಿಲ್ಲ. ಚಪ್ಪಾಳೆ ಹೊಡೆದರೆ, ಆಕಾಶಕ್ಕೆ ಟಾರ್ಚ್ ಬಿಟ್ಟರೆ ದೇಶದಲ್ಲಿ ಈ ಕೊರೊನಾ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್ಶಿಪ್ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...








