ಪ್ರಧಾನ ಮಂತ್ರಿ ನರೇಂದ್ರ ಏಪ್ರಿಲ್ 5 ರಂದು ರಾತ್ರಿ 9ಗಂಟೆಗೆ 9 ನಿಮಿಷಗಳ ಕಾಲ ಮನೆಯ ಮುಂದೆ ಅಥಾವ ಬಾಲ್ಕನಿಯಲ್ಲಿ ನಿಂತು ದೀಪ ಬೆಳಗಿಸಿ ಎಂದು ಕರೆ ನೀಡಿದ್ದರು. ಮೇಣದ ಬತ್ತಿ, ಮೊಬೈಲ್ ಲೈಟ್, ದೀಪ ಬೆಳಗಿಸಿ ಎಂದು ಕರೆ ನೀಡಿದ್ದರು. ಇದೀಗ ಈ ಕರೆಗೆ ದೇಶದಾದ್ಯಂತ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಮೋದಿ ಅವರ ವಿರುದ್ದ ಕಿಡಿಕಾರಿದ್ದಾರೆ. ಮನೆಯಲ್ಲಿ ಕ್ಯಾಂಡಲ್ ಲೈಟ್ ಅಥವಾ ಮೊಬೈಲ್ ಟಾರ್ಚ್ ಬೆಳಗಿಸುವುದರಿಂದ ಕೊರೊನಾ ಸಮಸ್ಯೆ ಬಗೆಹರಿಸಲು ಆಗುವುದಿಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಬೇರೆ ದೇಶಗಳಿಗೆ ಹೋಲಿಸಿದಾಗ ಭಾರತದಲ್ಲಿ ಹೆಚ್ಚು ಕೊರೊನಾ ಟೆಸ್ಟ್ ನಡೆಯುತ್ತಿಲ್ಲ. ಚಪ್ಪಾಳೆ ಹೊಡೆದರೆ, ಆಕಾಶಕ್ಕೆ ಟಾರ್ಚ್ ಬಿಟ್ಟರೆ ದೇಶದಲ್ಲಿ ಈ ಕೊರೊನಾ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಅರವಿಂದ ಅವೇಂಜರ್ಸ್ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ
ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...








