ಮುತ್ತಿನ ನಗರಿಯಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ಸಲಾರ್’ ..!
ಹೈದರಾಬಾದ್: ಕಿಂಗ್ ಮೇಕರ್ ಪ್ರಶಾಂತ್ ನೀಲ್ ಆಕ್ಷನ್ ಕಟ್ ಹೇಳ್ತಿರುವ ಬಹುನಿರೀಕ್ಷೆ ಪ್ಯಾನ್ ಇಂಡಿಯಾ ಸಿನಿಮಾ ಸಲಾರ್ ನ ಮೊದಲ ಹಂತದ ಚಿತ್ರೀಕರಣ ಪೂರ್ತಿಯಾಗಿದೆ. ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿರುವ ಚಿತ್ರದಲ್ಲಿ ಬಾಹುಬಲಿ ನಟ ಪ್ರಭಾಸ್ ನಾಯಕರಾಗಿ ನಟಿಸುತ್ತಿದ್ದು ಬಹುಭಾಷಾ ನಟಿ ಶ್ರುತಿ ಹಾಸನ್ ನಾಯಕಿಯಾಗಿದ್ದಾರೆ. ಕಳೆದ ವಾರವಷ್ಟೇ ತೆಲಂಗಾಣದಲ್ಲಿ ವಿಶೇಷ ಸೆಟ್ ಹಾಕಿ ಚಿತ್ರೀಕರಣ ಪ್ರಾರಂಭಿಸಲಾಗಿತ್ತು. ಪ್ರಭಾಸ್ ಇಂಟ್ರಡಕ್ಷನ್ ದೃಶ್ಯವನ್ನು ಚಿತ್ರೀಕರಿಸಲಾಗಿತ್ತು. ಇದೀಗ ಮೊದಲ ಹಂತದ ಶೂಟಿಂಗ್ ಮುಕ್ತಾಯವಾಗಿರುವುದಾಗಿ ತಿಳಿದುಬಂದಿದೆ. ಈ ಸಲಾರ್ ಕನ್ನಡ, ತೆಲುಗು, ಹಿಂದಿ, ತಮಿಳು, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಕೆಜಿಎಫ್ ಚಿತ್ರದ ಬಳಿಕ ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿರುವ ಮತ್ತೊಂದು ಬಹುನಿರೀಕ್ಷಿತ ಹೈ ಬಜೆಟ್ ಸಿನಿಮಾ ಇದಾಗಿದೆ.
‘ಸಲಾರ್’ ಗೆ ಕನ್ನಡದ ‘ಖಳನಾಯಕ’..!
ಇನ್ನೂ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲೇ ಇರುವ ಸಲಾರ್ ವಿಲ್ಲನ್ ವಿಚಾರದಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡ್ತಾಯಿದೆ. ಹೇಳಿ ಕೇಳಿ ಈ ಸಿನಿಮಾ ಆಕ್ಷನ್ ಹಿಟ್ ಎಂದೇ ಹೇಳಲಾಗ್ತಿದ್ದು, ವಿಲ್ಲನ್ ಯಾರಾಗ್ತಾರೆ ಎಂಬ ಕ್ಯೂರಿಯಾಸಿಟಿ ಇದ್ದೇ ಇರುತ್ತೆ. ಅದ್ರಲ್ಲೂ ನಮ್ಮ ಕನ್ನಡದ ನಟ ಈ ಚಿತ್ರದಲ್ಲಿ ‘ಬಾಹುಬಲಿ’ಗೆ ಕೌಂಟರ್ ಕೊಡೊಲು ಸಜ್ಜಾಗ್ತಿದ್ದಾರೆ ಅನ್ನೋ ಸುದ್ದಿ ಕನ್ನಡಾಭಿಮಾನಿಗಳ ನಿರೀಕ್ಷೆ ಸಂತಸವನ್ನ ಹೆಚ್ಚಿಸಿದೆ.
ಭಜರಂಗಿ, ವಜ್ರಕಾಯ, ಮಫ್ತಿ ಸಿನಿಮಾಗಳಲ್ಲಿ ಮಿಂಚಿರುವ ಮಧು ಗುರುಸ್ವಾಮಿ, ತೆಲುಗು ಸಿನಿಮಾರಂಗದಲ್ಲೂ ಈಗಾಗಲೇ ಗುರುತಿಸಿಕೊಂಡಿದ್ದಾರೆ. ಇದೀಗ ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸ್ವತಃ ಮಧು ಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.
video : ವರ್ಕೌಟ್ ವಿಡಿಯೋ ಹಂಚಿಕೊಂಡ ‘ಬಾಹುಬಲಿಯ ಬಲ್ಲಾಳದೇವ’..!
ಹೌದು ಪ್ರಭಾಸ್ ಎದುರು ಅಬ್ಬರಿಸಲು ಕನ್ನಡದ ಖ್ಯಾತ ನಟ ಮಧು ಗುರುಸ್ವಾಮಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಗುರುಸ್ವಾಮಿ ‘ನನ್ನ ಮುಂದಿನ ಸಿನಿಮಾ ಸಲಾರ್ ಎಂದು ಹೇಳಲು ತುಂಬಾ ಸಂತೋಷವಾಗುತ್ತಿದೆ. ಸಲಾರ್ ಸಿನಿಮಾದಲ್ಲಿ ನಟಿಸಲು ಸಖತ್ ಎಕ್ಸಾಯಿಟ್ ಆಗಿದ್ದೀನಿ. ಅವಕಾಶ ನೀಡಿದ್ದಕ್ಕೆ ಪ್ರಶಾಂತ್ ನೀಲ್ ಮತ್ತು ವಿಜಯ್ ಕಿರಗಂದೂರ್ ಅವರಿಗೆ ಧನ್ಯವಾದಗಳು’ ಎಂದು ಹೇಳಿದ್ದಾರೆ.
ಇನ್ನೂ ಇತ್ತೀಚೆಗೆ ಹರಿದಾಡಿದ್ದ ವದಂತಿಗಳ ಪ್ರಕಾರ ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಈ ಸಿನಿಮಾದಲ್ಲಿ ವಿಲ್ಲನ್ ಆಗಲಿದ್ದಾರೆ ಎನ್ನಲಾಗಿತ್ತು. ಆದರೀಗ ಮಧು ಸ್ವಾಮಿ ಆಯ್ಕೆ ಆಯ್ಕೆಯಾಗುವ ಮೂಲಕ ಕುತೂಹಲಕ್ಕೆ ತೆರೆ ಬಿದ್ದಿದೆ. ಈ ಮೂಲಕ ಈ ಸಿನಿಮಾದಲ್ಲಿ ಕನ್ನಡ ಕಲಾವಿದರು ಯಾರೆಲ್ಲ ಇರಲಿದ್ದಾರೆ ಎನ್ನುವ ಕುತೂಹಲಗಳಿಗೆ ಹಂತ ಹಂತವಾಗಿ ತೆರೆ ಬೀಳ್ತಿದ್ದು, ಕನ್ನಡಾಭಿಮಾನಿಗಳ ನಿರೀಕ್ಷೆಯನ್ನ ಮುಟ್ಟುವಲ್ಲಿ ಸಲಾರ್ ಟೀಂ ಯಶಸ್ವಿಯಾಗ್ತಿದೆ.
ಈ ಚಿತ್ರವನ್ನ ಪ್ರಶಾಂತ್ ನೀಲ್ ನಿರ್ದೇಶಿಸುತ್ತಿದ್ದರೆ, ಕೆಜಿಎಫ್ ತಂಡದಿಂದಲೇ ಸಿನಿಮಾ ತಯಾರಾಗ್ತಿದೆ. ಹೊಂಬಾಳೆ ಫಿಲಮ್ಸ್ ಬ್ಯಾನರ್ ಅಡಿ ಮೂಡಿಬರುತ್ತಿದ್ದು, ವಿಜಯ್ ಕಿರಗಂದೂರ್ ಬಂಡವಾಳ ಹೂಡುತ್ತಿದ್ದಾರೆ. ಪ್ರಭಾಸ್ ಸದ್ಯ ಮತ್ತೊಂದು ಹೈ ವೋಲ್ಟೇಜ್ ಸಿನಿಮಾವಾದ ರಾಧೆ ಶ್ಯಾಮ್ ಚಿತ್ರೀಕರಣ ಮುಗಿಸಿದ್ದಾರೆ. ಇದೀಗ ಸಲಾರ್ ಬಳಿಕ ಅವರು ಆದಿಪುರುಷ್ ಸಿನಿಮಾದಲ್ಲಿ ನಟಿಸಲಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel