ಬಂಟ್ವಾಳ : ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು
ಬಂಟ್ವಾಳ : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಸ್ ಡಿಪಿಐ ಬಂಟ್ವಾಳ ನಗರ ಠಾಣಾಧಿಕಾರಿಗಳಿಗೆ ದೂರು ನೀಡಿದೆ.
ಬೆಳ್ತಂಗಡಿಯಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಅಭಿನಂದನಾ ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಶಾಸಕ ಹರೀಶ್ ಪೂಂಜಾ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆಪಾದಿಸಿರುವ ಎಸ್ ಡಿಪಿಐ ದೂರು ನೀಡಿದೆ.
ಅಂದಿನ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಮತ್ತು ಸಚಿವ ಈಶ್ವರಪ್ಪ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ.
ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಂಟ್ಟಾಳ ನಗರ ಠಾಣಾಧಿಕಾರಿಗಳಿಗೆ ಭಾಷಣದ ವಿಡಿಯೋ ಸಿಡಿ ಲಗತ್ತಿಸಲ್ಪಟ್ಟ ದಾಖಲೆಗಳೊಂದಿಗೆ ಎಸ್ ಡಿಪಿಐ ಬಂಟ್ಟಾಳ ಕ್ಷೇತ್ರ ಸಮಿತಿ ಸದಸ್ಯ ಮೂನೀಶ್ ಆಲಿ ದೂರು ನೀಡಿದ್ದಾರೆ.
ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್.ಹೆಚ್, ಕ್ಷೇತ್ರ ಅಧ್ಯಕ್ಷ ಯೂಸುಫ್ ಆಲಡ್ಕ, ಕ್ಷೇತ್ರ ಕಾರ್ಯದರ್ಶಿ ಸಲೀಂ ಆಲಾಡಿ ಮತ್ತು ಮಲಿಕ್ ಕೊಲಕೆ ಇದ್ದರು.