ಆಂಧ್ರಪ್ರದೇಶ: ಕರ್ನೂಲ್ನಲ್ಲಿ ಭೀಕರ ರಸ್ತೆ ಅಪಘಾತ – 14 ಮಂದಿ ಸ್ಥಳದಲ್ಲೇ ದುರ್ಮರಣ
ಆಂಧ್ರಪ್ರದೇಶ, ಫೆಬ್ರವರಿ14: ಕರ್ನೂಲ್ನಲ್ಲಿ ಬಸ್ ಟ್ರಕ್ಗೆ ಡಿಕ್ಕಿ ಹೊಡೆದು 14 ಮಂದಿ ಸಾವನ್ನಪ್ಪಿದ್ದಾರೆ
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ 14 ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ವೆಲ್ದುರ್ತಿ ಮಂಡಳಿಯ ಮದರ್ಪುರ ಗ್ರಾಮದ ಬಳಿ ನಡೆದಿದೆ.
ಭಾನುವಾರ ಮುಂಜಾನೆ ಕರ್ನೂಲ್ ಜಿಲ್ಲೆಯ ಎನ್ಎಚ್ -44 ರಲ್ಲಿ ವೆಲ್ದುರ್ಥಿ ಮಂಡಲದ ಮಾಧರಪುರಂನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಹಿಳೆಯರು ಸೇರಿದಂತೆ 14 ಜನರು ಸಾವನ್ನಪ್ಪಿದ್ದಾರೆ.
ಎಂಆಧಾರ್( mAadhaar ) ಆಯಪ್ ನಲ್ಲಿ ಹೊಸ ಅಪ್ ಡೇಟ್
ಚಿತ್ತೂರು ಜಿಲ್ಲೆಯ ಮದನಪಲ್ಲೆಯಿಂದ 18 ಯಾತ್ರಾರ್ಥಿಗಳ ಗುಂಪು ಅಜ್ಮೀರ್ ದರ್ಗಾಕ್ಕರ ತೆರಳುತ್ತಿದ್ದಾಗ ನಿಯಂತ್ರಣ ಕಳೆದುಕೊಂಡ ಮಿನಿ ಬಸ್, ರಸ್ತೆ ವಿಭಾಜಕವನ್ನು ಹೊಡೆದ ನಂತರ ಇನ್ನೊಂದು ಬದಿಗೆ ಪಲ್ಟಿ ಹೊಡೆದಿದೆ. ಬಳಿಕ ಎದುರಿನಿಂದ ವೇಗವಾಗಿ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದಿದೆ. ವಾಹನದಲ್ಲಿದ್ದ 18 ಜನರಲ್ಲಿ 14 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕರ್ನೂಲು ಜಿಲ್ಲಾಧಿಕಾರಿ ಜಿ.ವೀರಪಂಡಿಯನ್ ಮತ್ತು ಎಸ್ಪಿ ಫಕೀರಪ್ಪ ಸ್ಥಳಕ್ಕೆ ಭೇಟಿ ನೀಡಿದ್ದು, ಘಟನೆ ಕುರಿತು ಮಾಹಿತಿ ಕಲೆಹಾಕಿದ್ದಾರೆ.
ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಘಟನೆ ಕುರಿತು ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆಂಧ್ರಪ್ರದೇಶ ರಾಜ್ಯಪಾಲ ಬಿಸ್ವಭೂಷಣ್ ಹರಿಚಂದನ್ ಸಹ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಶಿಲೀಂಧ್ರ ಸೋಂಕು (fungal infections) ಗೆ ಮನೆಮದ್ದುಗಳು https://t.co/94JI0CcWb2
— Saaksha TV (@SaakshaTv) February 11, 2021
ಎಚ್ಚರ – ಕೋವಿಡ್-19 ಲಸಿಕೆಯನ್ನು ₹ 4,000-6,000 ಕ್ಕೆ ನೀಡುವುದಾಗಿ ಹೇಳಿಕೊಳ್ಳುತ್ತಿದೆ ನಕಲಿ ವೆಬ್ಸೈಟ್ ! https://t.co/zqxfDb817r
— Saaksha TV (@SaakshaTv) February 12, 2021