ಉತ್ತರಾಖಂಡದಲ್ಲಿ ಹಿಮಕುಸಿತ – 41 ಮೃತದೇಹಗಳು ಪತ್ತೆ..!
ಉತ್ತರಾಖಂಡ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮಕುಸಿತದಿಂದ ಉಂಟಾದ ದುರುಂತದಲ್ಲಿ ಇದುವರೆಗೆ 41 ಮೃತದೇಹಗಳನ್ನು ಹೊರತೆಗೆಯಲಾಗಿದೆ. ತಪೋವನ ಸುರಂಗದ ಅವಶೇಷಗಳ ಅಡಿಯಿಂದ ಇಂದು ಮತ್ತೆ ಎರಡು ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಉತ್ತರಾಖಂಡದ ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.
ಜಪಾನ್ ನಲ್ಲಿ ಪ್ರಬಲ ಭೂಕಂಪ – 120 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ
ಧೌಲಿಗಂಗಾ ಹಾಗೂ ಅಲಂಕಾನಂದ ನದಿಯಲ್ಲಿ ದಿಢೀರ್ ಪ್ರವಾಹ ಉಂಟಾಗಿತ್ತು. ಪ್ರವಾಹದ ತೀವ್ರತೆಗೆ ರಿಷಿಗಂಗಾ ವಿದ್ಯುತ್ ಯೋಜನೆ ಹಾನಿಗೊಳಗಾಗಿತ್ತು. ದುರಂತದ ಬೆನ್ನಲ್ಲೇ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದರೂ ಈಗಲೂ 163 ಮಂದಿ ಸಾಪತ್ತೆಯಾಗಿದ್ದಾರೆ. ಇದರಿಂದ ಪ್ರವಾಹಕ್ಕೆ ಸಿಲುಕಿದವರು ಬದುಕುಳಿದಿರುವ ಸಾಧ್ಯತೆ ತುಂಬಾನೆ ಕಡಿಮೆಯಿದೆ ಎನ್ನಲಾಗ್ತಿದೆ. ಇನ್ನೂ ಮೃತದೇಹಗಳ ಪೈಕಿ ಬಹುತೇಕ ಮೃತದೇಹಗಳನ್ನು ಗುರುತು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಉತ್ತರಾಖಂಡ ರಾಜ್ಯ ವಿಪತ್ತು ನಿರ್ಹಹಣಾ ಪಡೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿಗಳು ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel