ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹಾಗೇ ಸುಮ್ಮನೆ ವಿಕೆಟ್ ಕೈಚೆಲ್ಲಿಕೊಂಡ ರಿಷಬ್ ಪಂತ್… ಅತೀಯಾದ ಆತ್ಮವಿಶ್ವಾಸವೇ ಪಂತ್‍ಗೆ ಅಪತ್ತು…!

admin by admin
February 15, 2021
in Newsbeat, Sports, ಕ್ರೀಡೆ
RISHAB PANT TEAM INDIA SAAKSHATV
Share on FacebookShare on TwitterShare on WhatsappShare on Telegram

ಹಾಗೇ ಸುಮ್ಮನೆ ವಿಕೆಟ್ ಕೈಚೆಲ್ಲಿಕೊಂಡ ರಿಷಬ್ ಪಂತ್… ಅತೀಯಾದ ಆತ್ಮವಿಶ್ವಾಸವೇ ಪಂತ್‍ಗೆ ಅಪತ್ತು…!

RISHAB PANT TEAM INDIA SAAKSHATVರಿಷಬ್ ಪಂತ್… ವಿಕೆಟ್ ಕೀಪಿಂಗ್ ನಲ್ಲಿ ಅಷ್ಟಕ್ಕಷ್ಟೇ.. ಆದ್ರೆ ಬ್ಯಾಟಿಂಗ್ ನಲ್ಲಿ ನಂಬಲು ಅಸಾಧ್ಯವಾದ ಆಟಗಾರ.
ಚಂಚಲ ಮನಸ್ಥಿತಿಯನ್ನು ಹೊಂದಿರುವ ರಿಷಬ್ ಪಂತ್ ಸಿಕ್ಕ ಅವಕಾಶಗಳನ್ನು ಕೈಚೆಲ್ಲಿಕೊಳ್ಳುತ್ತಿದ್ದಾರೆ. ಏಕಾಂಗಿಯಾಗಿ ತಂಡವನ್ನು ಗೆಲ್ಲಿಸಿಕೊಡುವಂತಹ ಸಾಮಥ್ರ್ಯವನ್ನು ಹೊಂದಿದ್ರೂ ಕೂಡ ಯಾವಾಗ ವಿಕೆಟ್ ಕೈಚೆಲ್ಲಿಕೊಳ್ಳುತ್ತಾರೆ ಅಂತ ಹೇಳೋಕೆ ಆಗಲ್ಲ.

Related posts

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

August 13, 2026
ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

August 13, 2026

ಹೀಗೆ ವಿಚಿತ್ರ ಮನೋಸ್ಥಿತಿ, ಅತೀಯಾದ ಆತ್ಮವಿಶ್ವಾಸದಿಂದಲೇ ಟೀಕೆಗೂ ಗುರಿಯಾಗುತ್ತಿದ್ದಾರೆ. ಚೆನ್ನೈ ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಅಮೋಘ ಆಟವನ್ನಾಡಿದ್ರು. ಅಲ್ಲದೆ ಅಜೇಯ 58 ರನ್ ಕೂಡ ಸಿಡಿಸಿದ್ರು.
ಆದ್ರೆ ಎರಡನೇ ಇನಿಂಗ್ಸ್ ನಲ್ಲಿ ಬ್ಯಾಟಿಂಗ್ ನಲ್ಲಿ ಮುಂಬಡ್ತಿ ಪಡೆದುಕೊಂಡ ರಿಷಬ್ ಪಂತ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದರು. ರಹಾನೆ ಜಾಗದಲ್ಲಿ ಪಂತ್ ಗೆ ಆಡುವ ಅವಕಾಶ ಸಿಕ್ಕರೂ ಕೂಡ ಗಡಿಬಿಡಿ ಹಾಗೂ ಹೊಡಿಬಡಿಯ ಆಟಕ್ಕೆ ಮುಂದಾಗಿ ವಿಕೆಟ್ ಕೈಚೆಲ್ಲಿಕೊಂಡಿದ್ದಾರೆ.
ಪ್ರತಿ ಎಸೆತದಲ್ಲೂ ರನ್ ಬರಬೇಕು.. ಎದುರಾಳಿ ಬೌಲರ್ ಗಳ ಆತ್ಮಸ್ಥೈರ್ಯವನ್ನು ಕಂಗೆಡಿಸಬೇಕು ಅನ್ನೋ ಗೇಮ್ ಪ್ಲಾನ್ ಇದ್ರೂ ಪರಿಸ್ಥಿತಿಗೆ ಅನುಗುಣವಾಗಿ ಬ್ಯಾಟ್ ಬೀಸಬೇಕು ಅನ್ನೋದನ್ನು ಮರೆತಂತೆ ಆಡುತ್ತಾರೆ ರಿಷಬ್ ಪಂತ್.
ಹಾಗೇ ನೋಡಿದ್ರೆ ಎರಡನೇ ಪಂದ್ಯದ ಮೂರನೇ ದಿನ ಚೇತೇಶ್ವರ ಪೂಜಾರ ಮತ್ತು ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಾಗ ರಿಷಬ್ ಪಂತ್ ಎಚ್ಚರಿಕೆಯ ಆಟವನ್ನಾಡಬೇಕಾಗಿತ್ತು.
ನಾಯಕ ವಿರಾಟ್ ಕೊಹ್ಲಿಯ ಜೊತೆ ಸೇರಿಕೊಂಡು ತಂಡಕ್ಕೆ ಆಧಾರವಾಗಬೇಕಿತ್ತು. ಆದ್ರೆ ರಿಷಬ್ ಪಂತ್ ಆ ಮನಸ್ಥಿತಿಯಲ್ಲಿರಲಿಲ್ಲ. ಪಟಪಟನೇ ರನ್ ಗಳಿಸಬೇಕು ಅನ್ನೋ ಆತುರಕ್ಕೆ ಬಿದ್ದು ಸ್ಟಂಪ್ ಔಟಾದ್ರು.
ರಿಷಬ್ ಪಂತ್ ಕ್ರೀಸ್ ನಲ್ಲಿದ್ದಾಗ ವಿರಾಟ್ ಕೊಹ್ಲಿ ಸಲಹೆ ಮಾರ್ಗದರ್ಶನಗಳನ್ನು ನೀಡುತ್ತಾರೆ. ಆದ್ರೆ ಅದನ್ನು ರಿಷಬ್ ಪಂತ್ ಕಿವಿಗೆ ಹಾಕಿಕೊಳ್ಳಲಿಲ್ಲ.
ಒಂದೊಂದು ರಿಷಬ್ ಪಂತ್ ಬ್ಯಾಟಿಂಗ್ ಮನೋಭಾವನೆ ವೀರೇಂದ್ರ ಸೆಹ್ವಾಗ್ ನೆನಪಿಸುತ್ತಿದೆ. ಹೊಡಿಬಡಿ ಆಟದಿಂದಲೇ ಸದ್ದು ಮಾಡುತ್ತಿದ್ದ ಸೆಹ್ವಾಗ್ ನಂತೆ ರಿಷಬ್ ಪಂತ್ ಕೂಡ ನೈಜ ಆಟಗಾರ. ಆದ್ರೆ ತಂಡದ ಪರಿಸ್ಥಿತಿಗೆ ತಕ್ಕಂತೆ ಆಟವಾಡಬೇಕು ಅಲ್ವಾ?

RISHAB PANT TEAM INDIA SAAKSHATVಇನ್ನು ಚೆನ್ನೈ ಪಿಚ್ ಸ್ಪಿನ್ನರ್ ಗಳಿಗೆ ಅನುಕೂಲವಾಗುತ್ತಿದೆ. ಹಾಗಂತ ಭಾರತ ಮೊದಲ ಇನಿಂಗ್ಸ್ ನಲ್ಲಿ ಮುನ್ನಡೆ ಸಾಧಿಸಿದ್ರೂ ಇಂಗ್ಲೆಂಡ್ ಗೆ ಸವಾಲು ಹಾಕುವಂತಹ ರನ್ ಗಳಿಸಿಲ್ಲ. ಪಂದ್ಯ ಮುಗಿಯಲು ಇನ್ನೂ ಮೂರು ದಿನಗಳಿವೆ. ಹಾಗಾಗಿ ಇಂದು ಪೂರ್ತಿಯಾಗಿ ಟೀಮ್ ಇಂಡಿಯಾ ಆಡಿ ಇನ್ನುಳಿದ ಎರಡು ದಿನ ಇಂಗ್ಲೆಂಡ್ ವಿರುದ್ಧ ಒತ್ತಡ ಹೇರಿದ್ರೆ ಗೆಲ್ಲುವ ಅವಕಾಶಗಳು ಹೆಚ್ಚಿರುತ್ತವೆ.
ಈಗಾಗಲೇ ಟೀಮ್ ಇಂಡಿಯಾ ಎರಡನೇ ಇನಿಂಗ್ಸ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದೆ. ಈಗಾಗಲೇ 86ಕ್ಕೆ ಐದು ವಿಕೆಟ್ ಕಳೆದುಕೊಂಡಿದೆ.
ಗಿಲ್, ಪೂಜಾರ, ರೋಹಿತ್, ರಿಷಬ್ ಪಂತ್, ರಹಾನೆ ಪೆವಿಲಿಯನ್ ಸೇರಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ನಡೆಸುತ್ತಿದ್ದಾರೆ.
ಮೊದಲ ಇನಿಂಗ್ಸ್ ನಲ್ಲಿ ಟೀಮ್ ಇಂಡಿಯಾ 195 ರನ್ ಗಳ ಮುನ್ನಡೆ ಪಡೆದುಕೊಂಡಿದೆ. ಹೀಗಾಗಿ ಎರಡನೇ ಇನಿಂಗ್ಸ್ ನಲ್ಲಿ ಕನಿಷ್ಠ 205 ರನ್ ಗಳನ್ನಾದ್ರೂ ಕಲೆ ಹಾಕಬೇಕು.
ಇನ್ನು ಇಂಗ್ಲೆಂಡ್ ಬ್ಯಾಟ್ಸ್ ಮೆನ್ ಗಳು ಟೀಮ್ ಇಂಡಿಯಾದ ಬೌಲಿಂಗ್ ದಾಳಿಯ ಎದುರು ದಿಟ್ಟವಾಗಿ ಉತ್ತರ ನೀಡಿದ್ರೆ ಫಲಿತಾಂಶ ಏನು ಬೇಕಾದ್ರೂ ಆಗಬಹುದು .
ಆದ್ರೆ ಪಿಚ್ ನ ವರ್ತನೆಯನ್ನು ನೋಡಿದಾಗ ಪಂದ್ಯ ಹರ್ಭಜನ್ ಸಿಂಗ್ ಹೇಳಿದಂತೆ ನಾಲ್ಕನೇ ದಿನವೇ ಪಂದ್ಯ ಮುಗಿಯಬಹುದು. ಸ್ಪಷ್ಟ ಫಲಿತಾಂಶ ಬರಬಹುದು.

Tags: #Rishabh Pant.#saakshatvAjinkya Rahanebccidelhi capitalsIPLrohith sharmateam indiavirat kohli
ShareTweetSendShare
Join us on:

Related Posts

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

by Shwetha
August 13, 2026
0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...

ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

by Shwetha
August 13, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ...

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

by Shwetha
August 13, 2026
0

ನಟ ಪ್ರಕಾಶ್ ರಾಜ್ ಅವರ ಹೆಸರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಇನ್ನೂ ನೋಂದಣಿಯಲ್ಲಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅವರ ಹೆಸರನ್ನು ಅಳಿಸಲಾಗಿಲ್ಲ...

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

by Shwetha
August 13, 2026
0

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪತ್ರಕರ್ತರನ್ನು ಇಲಿಗಳಿಗೆ ಹೋಲಿಸಿ...

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

by Shwetha
August 13, 2026
0

ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ ಕಾರ್ಯಾಚರಣೆ ವೇಳೆ ಜೈಲಿನಲ್ಲಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram