ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯ ಪ್ರಮುಖ ಸುದ್ದಿಗಳು : LATEST UPDATES

Namratha Rao by Namratha Rao
February 23, 2021
in Newsbeat, State, ರಾಜ್ಯ
weekend curfew in bangalore latest news today saaksha tv
Share on FacebookShare on TwitterShare on WhatsappShare on Telegram

ಹೆಚ್ಚುವರಿ ಕಾವೇರಿ ನೀರಿನ ಮೇಲೆ ತಮಿಳುನಾಡು ಕಣ್ಣು : ಸಿಎಂ ಹೇಳಿದ್ದೇನು..?

ಹೆಚ್ಚುವರಿ ಕಾವೇರಿ ನೀರಿನ ಮೇಲೆ ತಮಿಳುನಾಡು ಕಣ್ಣು : ಸಿಎಂ ಹೇಳಿದ್ದೇನು..?

ಬೆಂಗಳೂರು : ಹೆಚ್ಚುವರಿ ಕಾವೇರಿ ನೀರಿನ ಮೇಲೆ ತಮಿಳುನಾಡು ಕಣ್ಣಿಟ್ಟಿದ್ದು, ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ `ಅದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಇಲ್ಲ. ಅವರು ಹೇಳಿಕೆ ಕೊಡೋದ್ರಿಂದ ಯಾವುದೇ ಉಪಯೋಗ ಇಲ್ಲ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ನೀರು ಬಿಡುಗಡೆಗೆ ಅವಕಾಶ ಇಲ್ಲ. ಅವರು ಹೇಳಿಕೆ ಕೊಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಯಾವ ಕಾರಣಕ್ಕೂ ಮತ್ತೊಮ್ಮೆ ತಗೊಳ್ಳೋದು, ಕೊಡೋದಕ್ಕೆ ಅವಕಾಶ ಇಲ್ಲ. ಈ ಸಂಬಂಧ ಬಿಗಿ ಕ್ರಮವನ್ನು ಕೈಗೊಳ್ತೇವೆ ಎಂದು ಹೇಳಿದರು.

Related posts

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

June 24, 2026
ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಎಡವಟ್ಟು; ಮಹಾಲೇಖಪಾಲರ ಕಚೇರಿಯಿಂದ ಸ್ಪಷ್ಟನೆ ಕೋರಿದ ಸರ್ಕಾರ

June 24, 2026

ರಾಜ್ಯ ಬಜೆಟ್ | ತೆರಿಗೆ ಇಲಾಖೆಗಳ ಜೊತೆ ಸಿಎಂ ಸಭೆ

ರಾಜ್ಯ ಬಜೆಟ್ | ತೆರಿಗೆ ಇಲಾಖೆಗಳ ಜೊತೆ ಸಿಎಂ ಸಭೆ

ಬೆಂಗಳೂರು : ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆ ಹಿನ್ನೆಲೆ ಇಂದು ತೆರಿಗೆ ಸಂಗ್ರಹಿಸುವ ಇಲಾಖೆಗಳ ಜೊತೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ, ಸಾರಿಗೆ, ನೊಂದಣಿ ಮತ್ತು ಮುದ್ರಾಂಕ ಇಲಾಖೆ, ಗಣಿ ಹಾಗೂ ಭೂ ವಿಜ್ಞಾನ ಇಲಾಖೆಗಳ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಬೆಂಗಳೂರಿನ ಶಕ್ತಿ ಭವನದಲ್ಲಿ ಈ ಸಭೆಗಳು ನಡೆಯಲಿವೆ. ಸಭೆಯಲ್ಲಿ ಸಂಬಂಧಿಸಿದ ಇಲಾಖೆ ಗಳ ಸಚಿವರು, ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಬಜೆಟ್ ರೂಪಿಸೋ ಸಂಬಂಧ ಇಲಾಖೆಗಳು ಸಂಗ್ರಹಿಸಿರುವ ತೆರಿಗೆ ಬಗ್ಗೆ ಮುಖ್ಯಮಂತ್ರಿಗಳು ಚರ್ಚೆ ನಡೆಸಲಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ಇವತ್ತು ಎಲ್ಲ ಇಲಾಖೆಗಳ ಸಭೆ ಮುಗಿಯುತ್ತೆ. ನಾಳೆ ಬಜೆಟ್ ಸಿದ್ಧತಾ ಸಭೆ ನಡೆಸ್ತೇವೆ. ಬೇರೆ ಬೇರೆ ಪ್ರಮುಖರ ಜೊತೆ ನಾಳೆ ಸಂಜೆವರೆಗೂ ಸಮಾಲೋಚನೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ರೈಲ್ವೆ ಇಲಾಖೆಯಿಂದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಲಿಫ್ಟ್ ಹಸ್ತಾಂತರ

ರೈಲ್ವೆ ಇಲಾಖೆಯಿಂದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಲಿಫ್ಟ್ ಹಸ್ತಾಂತರ

ಮೈಸೂರು : ಚಾಮುಂಡೇಶ್ವರಿ ದೇವಸ್ಥಾನದ ರಥಕ್ಕೆ ದೇವರನ್ನು ಕೂರಿಸುವ ಲಿಫ್ಟ್ ಅನ್ನು ರೈಲ್ವೆ ಇಲಾಖೆಯಿಂದ ದೇವಸ್ಥಾನಕ್ಕೆ ಹಸ್ತಾಂತರಿಸಲಾಗಿದೆ. ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ರಥಕ್ಕೆ ದೇವರನ್ನು ಕೂರಿಸುವ ಲಿಫ್ಟ್ ಅನ್ನು ರೈಲ್ವೆ ಇಲಾಖೆ ದೇವಸ್ಥಾನಕ್ಕೆ ಹಸ್ತಾಂತರಿಸುವ ಕಾರ್ಯಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ ಮಾತನಾಡಿ, ಚಾಮುಂಡೇಶ್ವರಿ ದೇವಸ್ಥಾನದ ರಥಕ್ಕೆ ದೇವರನ್ನು ಕೂರಿಸಲು ಲಿಫ್ಟ್ ಅವಶ್ಯಕತೆ ತುಂಬಾ ಇದೆ. ಬಹಳ ವರ್ಷಗಳಿಂದ ಶಿಥಿಲಾವಸ್ಥೆಯಿಂದಿತ್ತು. ಹೀಗಾಗಿ ಇದರ ದುರಸ್ತಿ ಇಲ್ಲವೇ ಹೊಸ ಲಿಫ್ಟ್ ಬೇಕೆಂದು ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ದೀಕ್ಷಿತ್ ಅವರು ಮನವಿ ಕೊಡುತ್ತಲೇ ಬಂದಿದ್ದಾರೆ.

ಹೆಸರೂರಲ್ಲಿರುವ ಶುದ್ಧ ನೀರಿನ ಘಟಕಗಳು ಹೆಸರಿಗೆ ಮಾತ್ರ

ಹೆಸರೂರಲ್ಲಿರುವ ಶುದ್ಧ ನೀರಿನ ಘಟಕಗಳು ಹೆಸರಿಗೆ ಮಾತ್ರ

ಕೊಪ್ಪಳ : ಜನರಿಗೆ ಅನುಕೂಲವಾಗಲಿ ಅನ್ನೋ ಉದ್ದೇಶದಿಂದ ರಾಜ್ಯದ ಹಲವು ಗ್ರಾಮಗಳಲ್ಲಿ ಸರ್ಕಾರದ ವತಿಯಿಂದ ಶುದ್ಧ ನೀರಿನ ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ. ಇದರಿಂದ ಸಾಕಷ್ಟು ಮಂದಿ ಅನುಕೂಲವಾಗಿದೆ. ಇದೊಂದು ಜನಪರ ಕಾರ್ಯಕ್ರಮವಾಗಿದ್ದು, ಪ್ರತಿ ಗ್ರಾಮದಲ್ಲೂ ಶುದ್ಧ ನೀರಿನ ಘಟಕ ಸ್ಥಾಪನೆಯ ಅವಶ್ಯಕತೆ ಇದೆ. ಆದ್ರೆ ಕೆಲವರ ನಿರ್ಲಕ್ಷ್ಯದಿಂದಾಗಿ ಸಾಕಷ್ಟು ಕಡೆ ಶುದ್ಧ ನೀರಿನ ಘಟಕಗಳು ಅನಾಥವಾಗಿವೆ. ಅದಕ್ಕೆ ಉದಾಹರಣೆ ಎಂಬಂತೆ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಸರೂರು ಗ್ರಾಮದಲ್ಲಿ ಅಳವಡಿಸಿರುವ ಎರಡು ಶುದ್ದ ನೀರಿನ ಘಟಕಗಳು ಹೆಸರಿಗೆ ಮಾತ್ರ ಇದ್ದು ಅಪ್ರಯೋಜಕವಾಗಿದೆ. ಹೌದು..! ಹೆಸರೂರು ಗ್ರಾಮದ ಜನರಿಗಾಗಿ ಶಾಲೆಯ ಬಳಿ ಹಾಗೂ ಜನತಾ ಕಾಲೋನಿಯಲ್ಲಿ ಪ್ರತ್ಯೇಕ ಶುದ್ದ ನೀರಿನ ಘಟಕ ಅಳವಡಿಸಲಾಗಿದೆ. ಜನತಾ ಕಾಲೋನಿಯ ಬಳಿ ಇರುವ ಶುದ್ದ ನೀರಿನ ಘಟಕ ಬಂದ್ ಆಗಿ ವರ್ಷವಾಗಿದ್ದು, ಮರು ದುರಸ್ತಿ ಕೂಡ ಆಗಿಲ್ಲ. ಇನ್ನೊಂದು ಶಾಲೆಯ ಬಳಿ ಇರುವ ಘಟಕಕ್ಕೆ ಬರೀ ಕ್ಯಾಬಿನ್ ಅಳವಡಿಸಿದ್ದು ಯಂತ್ರಗಳ ಜೋಡಣೆ ಸಾಧ್ಯವಾಗಿಲ್ಲ. ಈ ಬಗ್ಗೆ ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ರೂ ಯಾವುದೇ ಪ್ರಯೋಜನಾ ಆಗುತ್ತಿಲ್ಲ ಅನ್ನೋ ಗ್ರಾಮಸ್ಥರ ಆರೋಪವಾಗಿದೆ. ಇನ್ನೇನು ಬೇಸಿಗೆ ಸಮೀಪಿಸುತ್ತಿದೆ. ಈಗಲಾದ್ರೂ ಈ ಶುದ್ಧ ನೀರಿನ ಘಟಕಗಳನ್ನು ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

 

Tags: karnatakaMetroState News
ShareTweetSendShare
Join us on:

Related Posts

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

by Shwetha
June 24, 2026
0

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣವು ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ ಭೂಕಂಪಕ್ಕೆ ಕಾರಣವಾಗಿದೆ. ಇದು ಕೇವಲ ಒಂದು ಸೋಲಲ್ಲ, ಬದಲಾಗಿ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಎಡವಟ್ಟು; ಮಹಾಲೇಖಪಾಲರ ಕಚೇರಿಯಿಂದ ಸ್ಪಷ್ಟನೆ ಕೋರಿದ ಸರ್ಕಾರ

by Shwetha
June 24, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವು ಲೋಪದೋಷಗಳು ಪತ್ತೆಯಾಗಿದ್ದು, ಈ ಕುರಿತು ಮಹಾಲೇಖಪಾಲರ ಕಚೇರಿ (CAG) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಲಿಖಿತ ಸ್ಪಷ್ಟನೆ...

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

by Shwetha
June 24, 2026
0

ಶಿರಸಿ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣವಾಗಿ ರಾಜಕೀಯ ದಿವಾಳಿತನಕ್ಕೆ ತಲುಪಿದ್ದಾರೆ ಎಂದು ಶಾಸಕ ಶಿವರಾಮ್ ಹೆಬ್ಬಾರ್...

ಡಿಕೆಶಿ ತಂತ್ರಕ್ಕೆ ಬಿಜೆಪಿ ತತ್ತರ: ಕೈ ಅಭ್ಯರ್ಥಿ ಗೆಲುವಿನ ಹಿಂದೆ ಅಡಗಿದೆಯೇ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ; ವಿಜಯೇಂದ್ರ ಮತ್ತು ಅಶೋಕ ನಾಯಕತ್ವಕ್ಕೆ ಎದುರಾಯ್ತು ಗಂಡಾಂತರ!

ಅಡ್ಡಮತದಾನ ವಿಚಾರ; ಧರ್ಮಸ್ಥಳದಲ್ಲಿ ಸಭೆ ಇಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ: ಆರ್. ಅಶೋಕ್

by Shwetha
June 24, 2026
0

ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ವಿಚಾರವಾಗಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ...

CM ಪಟ್ಟದ ಫೈಟ್ : 3 ವರ್ಷದ ಅಭಿವೃದ್ಧಿ ಮಂತ್ರ ಪಠಿಸಿದ ಮುಖ್ಯಮಂತ್ರಿ

ರಾಜೀನಾಮೆಯ ಬಳಿಕ ವಿಶ್ರಾಂತಿಗೆ ಮಾಜಿ ಸಿಎಂ ಸಿದ್ದರಾಮಯ್ಯ; ಕೇರಳದ ರೆಸಾರ್ಟ್‌ಗೆ ಭೇಟಿ

by Shwetha
June 24, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಮ್ಮ ಆಪ್ತರೊಂದಿಗೆ ಕೇರಳ ಪ್ರವಾಸ ಕೈಗೊಂಡಿದ್ದಾರೆ. ಮೂಲಗಳ ಪ್ರಕಾರ, ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram