ADVERTISEMENT
Tuesday, July 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಪ್ರಮುಖ ರಾಷ್ಟ್ರೀಯ ಅಂತರಾಷ್ಟ್ರೀಯ ಸುದ್ದಿಗಳು : Latest Updates

Namratha Rao by Namratha Rao
March 5, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಪ್ರಮುಖ ರಾಷ್ಟ್ರೀಯ ಅಂತರಾಷ್ಟ್ರೀಯ ಸುದ್ದಿಗಳು : Latest Updates

ಇಂದೋರ್ ನಲ್ಲಿ ಭಿಕ್ಷೆ ಬೇಡುತ್ತಿದ್ದಾನೆ ಕೋಟ್ಯಾಧಿಪತಿ

ಇಂದೋರ್ ನಲ್ಲಿ ಭಿಕ್ಷೆ ಬೇಡುತ್ತಿದ್ದಾನೆ ಕೋಟ್ಯಾಧಿಪತಿ

Related posts

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

July 7, 2026
ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

July 7, 2026

ಮಧ್ಯಪ್ರದೇಶ : ನಾವು ಬೀದಿಗಳಲ್ಲಿ ಎಷ್ಟೋ ಮಂದಿ ಭಿಕ್ಷುರನ್ನ ನೋಡುತ್ತಿರುತ್ತೇವೆ. ಅವರಿಗೆ ನಮ್ಮ ಕೈಯಲ್ಲಾದ ಸಹಾಯ ಮಾಡುತ್ತೇವೆ.

ಆದ್ರೆ ಅವರ ಯಾರು..? ಅವರ ಹಿನ್ನೆಲೆ ಏನು ಅಂತಾ ವಿಚಾರಿಸೋಕೆ ಹೋಗಲ್ಲ. ಆದ್ರೆ ಇಂದೋರ್ ನಲ್ಲಿ ಹೀಗೆ ವಿಚಾರಿಸಿದ ಎನ್ ಜಿಒ ಕಾರ್ಯಕರ್ತರಿಗೆ ಬಿಗ್ ಶಾಕ್ ಎದುರಾಗಿದೆ.

ಯಾಕೆಂದ್ರೆ ಬೀದಿಯಲ್ಲಿ ಭಿಕ್ಷೆ ಬೇಡುತ್ತಿದ್ದ ವೃದ್ಧ ಕೋಟ್ಯಾಧಿಪತಿಯಾಗಿದ್ದ.

ಹೌದು..! ಭಿಕ್ಷುಕನಾಗಿರುವ ವೃದ್ಧನ ಹೆಸರು ರಮೇಶ್ ಯಾದವ್. ಈತ ಇಂದೋರ್ ಬೀದಿಗಳಲ್ಲಿ ಭಿಕ್ಷೆ ಬೇಡುತ್ತಿದ್ದನ್ನ ಕಂಡ ಎನ್ ಜಿಒ ಕಾರ್ಯಕರ್ತರು ನಿರ್ಗತಿಕರಿಗೆ ಮೀಸಲಾಗಿರುವ ಆಶ್ರಮಕ್ಕೆ ಕರೆತಂದು ಆರೈಕೆ ಮಾಡುತ್ತಿದ್ದರು.

ನಂತರ ಆತನಿಂದ ಕುಟುಂಬಸ್ಥರ ಮಾಹಿತಿ ಪಡೆದು ಅವರನ್ನ ಸಂಪರ್ಕಿಸಿದಾಗ ರಮೇಶ್ ಕೋಟ್ಯಾಧಿಪತಿ ಅಂತಾ ತಿಳಿದುಬಂದಿದೆ.

ರಮೇಶ್ ಅವರಿಗೆ ದೊಡ್ಡ ಬಂಗಲೆ ಮತ್ತು ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇದೆ ಅನ್ನೋದು ತಿಳಿಯುತ್ತಿದ್ದಂತೆ ಎನ್ ಜಿಜಿ ಕಾರ್ಯಕರ್ತರು ಬೆರಗಾಗಿದ್ದಾರೆ.

ರಮೇಶ್ ಗೆ ಕುಡಿತದ ಚಟವಿದ್ದು, ಅದನ್ನು ತ್ಯಜಿಸಲು ಒಪ್ಪದ ಕಾರಣ ಮನೆಯಿಂದ ಹೊರದಬ್ಬಲ್ಪಟ್ಟಿದ್ದರಂತೆ. ಇದೀಗ ರಮೇಶ್ ಅವರು ಕುಡಿತ ಬಿಡಲು ನಿರ್ಧರಿಸಿದ್ದು, ಸದ್ಯ ಮನೆ ಸೇರಿದ್ದಾರೆ ಅಂತ ತಿಳಿದುಬಂದಿದೆ.

ಪೆಟ್ರೋಲ್ ಡೀಸೆಲ್ ಮೇಲಿನ ಎಕ್ಸೈಸ್ ಸುಂಕ ಕಡಿತಕ್ಕೆ ಕೇಂದ್ರ ಸಜ್ಜು…! ಚುನಾವಣೆ ತಂತ್ರನಾ..!

ಪೆಟ್ರೋಲ್ ಡೀಸೆಲ್ ಮೇಲಿನ ಎಕ್ಸೈಸ್ ಸುಂಕ ಕಡಿತಕ್ಕೆ ಕೇಂದ್ರ ಸಜ್ಜು…! ಚುನಾವಣೆ ತಂತ್ರನಾ..!

ನವದೆಹಲಿ: ಕಳೆದ ಕೆಲ ದಿನಗಳಿಂದ ರಾಕೆಟ್ ಸ್ಪೀಡ್ ನಲ್ಲಿ ಏರಿಕೆಯಾಗುತ್ತಲೇ ಇರುವ ಪೆಟ್ರೋಲ್ ಡೀಸೆಲ್ ದರ ಏರಿಕೆಯಿಂದ ದೇಶದ ಜನರು ಕಂಗಾಲಾಗಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಶತಕ ದಾಟಿದ್ದು, ವಾಹನ ಸಾವಾರರಿಗೆ ಶಾಕ್ ಮೇಳೆ ಸಾಕ್ ಎದುರಾಗಿದೆ. ಆದ್ರೆ ಇದೀಗ ಹಲವು ರಾಜ್ಯಗಳಲ್ಲಿ ಚುನಾವಣೆ ಸಮೀಪಿಸುತ್ತಿದೆ. ಇದೇ ಕಾರಣಕ್ಕೆ ತಂತ್ರಗಾರಿಕೆ ಹೂಡುತ್ತಿರುವ ಸರ್ಕಾರ ಪೆಟ್ರೋಲ್ ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು 5 ರೂ. ವರೆಗೆ ತಗ್ಗಿಸುವ ಚಿಂತನೆ ನಡೆಸಿದೆ ಎನ್ನಲಾಗ್ತಿದೆ. ಹೌದು ಶೀಘ್ರದಲ್ಲೇ ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು, ಪುದುಚೇರಿ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಚುನಾವಣೆಗೂ ಮೊದಲೇ ಕೇಂದ್ರವು ಸುಂಕವನ್ನು ಇಳಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

‘ಕೇಂದ್ರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ ಐಟಿ ಏಜೆನ್ಸಿ’ : ರಾಹುಲ್ ಗಾಂಧಿ

‘ಕೇಂದ್ರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ ಐಟಿ ಏಜೆನ್ಸಿ’ : ರಾಹುಲ್ ಗಾಂಧಿ

ನವದೆಹಲಿ: ಸದಾ ಮೋದಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕೆಂಡ ಕಾರುತ್ತಲೇ ಸುದ್ದಿಯಲ್ಲಿರರುವಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೀಗ ಮತ್ತೆ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ರೈತರ ಪರವಾಗಿರುವವ ವಿರುದ್ಧ ದ್ವೇಷ ಸಾಧಿಸಲು ಮುಂದಾಗಿರುವ ಮೋದಿ ಸರ್ಕಾರ ಅವರ ಮೇಲೆ ಐಟಿ ದಾಳಿ ಅಸ್ತ್ರ ಪ್ರಯೋಗಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಹೌದು ಬಾಲಿವುಡ್ ನಟಿ ತಾಪ್ಸಿ ಪನ್ನು, ನಿರ್ಮಾಪಕ ಅನುರಾಗ್ ಕಶ್ಯಪ್ ಮತ್ತಿತರರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ ಈ ಸಂಬಂಧ ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ. ಕೇಂದ್ರ ಸರ್ಕಾರದ ತಾಳಕ್ಕೆ ತಕ್ಕಂತೆ ಐಟಿ ಏಜೆನ್ಸಿ ಕುಣಿಯುತ್ತಿದೆ, ರೈತರನ್ನು ಬೆಂಬಲಿಸುವವರನ್ನು ಟಾರ್ಗೆಟ್ ಮಾಡಲಾಗ್ತಿದೆ ಎಂದು ಐಟಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ತಾಜ್‌ಮಹಲ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ‌ ಬೆದರಿಕೆ ಕರೆ

ತಾಜ್‌ಮಹಲ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ‌ ಬೆದರಿಕೆ ಕರೆ !

ಆಗ್ರಾ, ಮಾರ್ಚ್04: ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯಲ್ಲಿರುವ ತಾಜ್‌ಮಹಲ್‌ನಲ್ಲಿ ಬಾಂಬ್ ಬೆದರಿಕೆ ಕರೆ ಗುರುವಾರ ಭೀತಿ ಹುಟ್ಟಿಸಿದೆ. ಬೆದರಿಕೆಯ ಕರೆಯ ಹಿನ್ನೆಲೆಯಲ್ಲಿ ಹಲವಾರು ಪ್ರವಾಸಿಗರನ್ನು ವಿಶ್ವಪ್ರಸಿದ್ಧ ಸ್ಮಾರಕದಿಂದ ತಕ್ಷಣ ಸ್ಥಳಾಂತರಿಸಲಾಗಿದೆ.

Taj Mahal bomb scare
ವರದಿಗಳ ಪ್ರಕಾರ, ಐತಿಹಾಸಿಕ ಸ್ಮಾರಕದೊಳಗೆ ಬಾಂಬ್ ಇಡಲಾಗಿದೆ ಎಂದು ಅಪರಿಚಿತ ಕರೆಗಾರರಿಂದ ಕರೆ ಬಂದಿದೆ.

ಪರಿಸ್ಥಿತಿಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಸ್ಮಾರಕವನ್ನು ರಕ್ಷಿಸುವ ಆಗ್ರಾ ಪೊಲೀಸ್ ಮತ್ತು ಸಿಐಎಸ್ಎಫ್ ತಂಡವು ತಾಜ್ ಮಹಲ್ ಆವರಣದೊಳಗೆ ತೀವ್ರ ಶೋಧ ನಡೆಸಿದೆ.
ಮುನ್ನೆಚ್ಚರಿಕೆ ಕ್ರಮವಾಗಿ, ಐತಿಹಾಸಿಕ ಸ್ಮಾರಕದೊಳಗಿದ್ದ ಪ್ರವಾಸಿಗರನ್ನು ತಕ್ಷಣ ಸ್ಥಳಾಂತರಿಸಲಾಗಿದೆ ಮತ್ತು ಪ್ರವೇಶ ಮತ್ತು ನಿರ್ಗಮನ ಸ್ಥಳಗಳನ್ನು ಮುಚ್ಚಲಾಗಿದೆ.

Taj Mahal bomb scare

 

ಪಾಕಿಸ್ತಾನದಲ್ಲಿ  ಭಾರತದ ಹತ್ತಿಗೆ ಬೇಡಿಕೆ !

ಪಾಕಿಸ್ತಾನದಲ್ಲಿ  ಭಾರತದ ಹತ್ತಿಗೆ ಬೇಡಿಕೆ !

ಇಸ್ಲಾಮಾಬಾದ್, ಮಾರ್ಚ್04: ಭಾರತ ಮತ್ತು ಪಾಕಿಸ್ತಾನ ನಡುವಿನ ಸ್ಥಗಿತಗೊಂಡ ವ್ಯಾಪಾರ ಸಂಬಂಧಗಳು ನಿಧಾನವಾಗಿ ಪುನರ್ ಆರಂಭದ ಹಾದಿಯಲ್ಲಿವೆ. ಇದೀಗ ಪಾಕಿಸ್ತಾನವು ಭಾರತದಿಂದ ಹತ್ತಿಯನ್ನು ಆಮದು ಮಾಡಿಕೊಳ್ಳುವ ನಿರೀಕ್ಷೆಯಲ್ಲಿದೆ.

ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಶಾಂತಿ ಕಾಪಾಡಲು ನಿಯಂತ್ರಣ ರೇಖೆಯ ಉದ್ದಕ್ಕೂ ಕದನ ವಿರಾಮ ಘೋಷಿಸಿದ ನಂತರ, ಪಾಕಿಸ್ತಾನ ಸರ್ಕಾರವು ಮುಂದಿನ ದಿನಗಳಲ್ಲಿ ಭಾರತದಿಂದ ಹತ್ತಿ ಆಮದು ಮಾಡಿಕೊಳ್ಳಲು ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

ಎಲ್‌ಒಸಿ ಮೇಲಿನ 2003 ರ ಕದನ ವಿರಾಮ ಒಪ್ಪಂದದ ಯಶಸ್ಸು ವಾಣಿಜ್ಯ ಸಚಿವಾಲಯಕ್ಕೆ ನಿರ್ಧಾರವನ್ನು ಮರುಪರಿಶೀಲಿಸುವ ಅವಕಾಶವನ್ನು ಒದಗಿಸಿದೆ. ಪಾಕಿಸ್ತಾನ ಸರ್ಕಾರದ ಮೂಲಗಳು ಹಂಚಿಕೊಂಡ ವಿವರಗಳ ಪ್ರಕಾರ ಇಸ್ಲಾಮಾಬಾದ್ ಭಾರತದಿಂದ ಹತ್ತಿಯನ್ನು ಆಮದು ಮಾಡಿಕೊಳ್ಳುವ ಸಂಭವವಿದೆ.
ಫೆಡರಲ್ ವಾಣಿಜ್ಯ ಸಚಿವಾಲಯದ ಅಧಿಕಾರಿಯೊಬ್ಬರು, ಮುಂದಿನ ವಾರ ಭಾರತದಿಂದ ಹತ್ತಿ ಮತ್ತು ನೂಲನ್ನು ಆಮದು ಮಾಡಿಕೊಳ್ಳಲು ಸಲಹೆಗಾರರು ನಿರ್ಧರಿಸಬಹುದು ಎಂದು ತಿಳಿಸಿದ್ದಾರೆ.

ಮುಖ್ಯ ನಿರ್ಧಾರವನ್ನು ತೆಗೆದುಕೊಂಡ ನಂತರ, ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಗೆ ಔಪಚಾರಿಕ ಸಾರಾಂಶವನ್ನು ನೀಡಲಾಗುವುದು ಎಂದು ಅವರು ಹೇಳಿದರು.

ಮೊದಲ ಹಂತದಲ್ಲಿ ಭಾರತದಿಂದ ಹತ್ತಿ ಮತ್ತು ನೂಲು ಆಮದು ಪುನರಾರಂಭದ ಕುರಿತು ಈಗಾಗಲೇ ಚರ್ಚೆಗಳು ನಡೆಯುತ್ತಿವೆ ಎಂದು ಮೂಲಗಳು ಖಚಿತಪಡಿಸಿವೆ. ಆದರೆ, ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರು ಸಾರಾಂಶವನ್ನು ಅಂಗೀಕರಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗುವುದು. ಏಕೆಂದರೆ ಅವರು ವಾಣಿಜ್ಯ ಸಚಿವ ಉಸ್ತುವಾರಿಯನ್ನು ಸಹ ಹೊಂದಿದ್ದಾರೆ.

Tags: EconomyGovernmentindiaWorld
ShareTweetSendShare
Join us on:

Related Posts

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

by Shwetha
July 7, 2026
0

ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದ ಕಿಚ್ಚು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೂ ತಟ್ಟಿದೆ. ಮೈಸೂರು ನಗರಾಭಿವೃದ್ಧಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 7, 2026
0

ಪ್ರಿಯಾಂಕ್ ಖರ್ಗೆ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ...

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

by Shwetha
July 7, 2026
0

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಕಾಂಗ್ರೆಸ್ ನಡುವಿನ ಸಂಘರ್ಷ ಈಗ ಹೊಸ ಹಂತಕ್ಕೆ ತಲುಪಿದೆ. ರಾಜ್ಯದಲ್ಲಿ ಆರ್ ಎಸ್ ಎಸ್ ಪಥಸಂಚಲನ ನಡೆಸಲು ಇನ್ಮುಂದೆ ಸರ್ಕಾರದ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕರ್ನಾಟಕವೇ ದೇಶಕ್ಕೆ ಮಾದರಿ: ಸಿಎಂ ಡಿ.ಕೆ. ಶಿವಕುಮಾರ್

by Shwetha
July 7, 2026
0

ಡಿ.ಕೆ. ಶಿವಕುಮಾರ್ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ರೂಪಿಸಲಾಗಿದ್ದು, ರಾಜ್ಯದ ಹಲವು ಯೋಜನೆಗಳನ್ನು ಈಗ...

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ನಮಗೆ ಪಾಕಿಸ್ತಾನ ಬೇಡ ಭಾರತವೇ ಬೇಕು- ಪಾಕಿಸ್ತಾನಕ್ಕೆ ಗುಡ್ ಬೈ ಹೇಳಲು ಸಿದ್ಧರಾದ ಪಿಒಕೆ ನಾಗರಿಕರು

by Shwetha
July 7, 2026
0

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಈಗ ಪಾಕ್ ಸರ್ಕಾರದ ವಿರುದ್ಧ ದಂಗೆ ಎದ್ದಿರುವ ಜನರು ಭಾರತದ ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ಪಾಕ್ ಸೇನೆಯು ಅಲ್ಲಿನ ನಾಗರಿಕರ ಮೇಲೆ ನಡೆಸುತ್ತಿರುವ ಮಾರಣಾಂತಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram