ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂಗ್ಲೆಂಡ್ ಗೆ ಮುಳುವಾಗಿ ಹೋಯ್ತಾ ರೊಟೇಷನ್ ಪಾಲಿಸಿ..?

admin by admin
March 7, 2021
in Newsbeat, Sports, ಕ್ರೀಡೆ
joe root england saakshatv
Share on FacebookShare on TwitterShare on WhatsappShare on Telegram

ಇಂಗ್ಲೆಂಡ್ ಗೆ ಮುಳುವಾಗಿ ಹೋಯ್ತಾ ರೊಟೇಷನ್ ಪಾಲಿಸಿ..?

team indai saakshatv2021ರ ಆಂಗ್ಲೋ ಇಂಡಿಯನ್ ಟೆಸ್ಟ್ ಕ್ರಿಕೆಟ್ ವಾರ್ ನಲ್ಲಿ ಟೀಮ್ ಇಂಡಿಯಾ ಗೆದ್ದಿದೆ. ಮೊದಲ ಟೆಸ್ಟ್ ಪಂದ್ಯದ ಹೀನಾಯ ಸೋಲಿಕ ಬಳಿಕ ಎಚ್ಚೆತ್ತುಕೊಂಡ ಕೊಹ್ಲಿ ಬಳಗ ನಂತರದ ಮೂರು ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಿ ಇದೀಗ ವಿಶ್ವ ಟೆಸ್ಟ್ ಚಾಂಪಿಯನ್‍ಷಿಪ್ ಫೈನಲ್ ಗೂ ಲಗ್ಗೆ ಇಟ್ಟಿದೆ.
ಹಾಗೇ ನೋಡಿದ್ರೆ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಗೆಲ್ಲುವುದು ನಿರೀಕ್ಷಿತವಾಗಿತ್ತು. ಆದ್ರೆ ಇಷ್ಟೊಂದು ಸುಲಭವಾಗಿ ಗೆಲ್ಲುತ್ತಾರೆ ಅಂತ ಯಾರು ಕೂಡ ಅಂದುಕೊಂಡಿರಲಿಲ್ಲ. ಐದು ದಿನಗಳ ಟೆಸ್ಟ್ ಪಂದ್ಯ ಎರಡು ಮೂರು ದಿನಗಳಲ್ಲಿ ಫಲಿತಾಂಶ ಕಾಣುತ್ತೆ ಅಂದ್ರೆ ಇಂಗ್ಲೆಂಡ್ ತಂಡ ವೀಕ್ ನೆಸ್ ಮತ್ತು ಟೀಮ್ ಇಂಡಿಯಾದ ಸ್ಟ್ರೇಂತ್ ಯಾವ ಮಟ್ಟದಲ್ಲಿತ್ತು ಎಂಬುದು ಗೊತ್ತಾಗಿಬಿಡುತ್ತೆ.
ಟೀಮ್ ಇಂಡಿಯಾದ ಯುವ ಆಟಗಾರರ ಅಬ್ಬರ, ಅನುಭವಿ ಆಟಗಾರರ ಅನುಭವ ಮತ್ತು ಲಯಬದ್ಧವಾದ ಬೌಲಿಂಗ್ ದಾಳಿಗೆ ಇಂಗ್ಲಿಷ್ ಬ್ಯಾಟ್ಸ್ ಮೆನ್ ಗಳಿಗೆ ಯಾವ ರೀತಿ ಉತ್ತರ ಕೊಡಬೇಕು ಎಂಬುದೇ ಗೊತ್ತಾಗಲಿಲ್ಲ.
ಈ ನಡುವೆ ಚೆನ್ನೈ ಮತ್ತು ಮೊಟೇರಾದ ಪಿಚ್ ಸರಿ ಇಲ್ಲ ಎಂಬ ಆರೋಪವನ್ನು ಇಂಗ್ಲೆಂಡ್ ಕ್ರಿಕೆಟ್ ಪಂಡಿತರು ಮಾಡಿದ್ದರು. ಅದೇನೋ ಅಂತರಲ್ಲ.. ಕುಣಿಯೋಕೆ ಬಾರದವ ಅಂಗಳ ಡೊಂಕು ಅಂತ. ಹಾಗೇ ಆರೋಪ ಮಾಡಿರುವ ಇಂಗ್ಲೆಂಡ್ ಕ್ರಿಕೆಟ್ ಪಂಡಿತರ ಸ್ಥಿತಿಯಾಗಿತ್ತು.
ಅಷ್ಟಕ್ಕೂ ಭಾರತದ ಪಿಚ್ ಗಳು ಸ್ಪಿನ್ ಬೌಲರ್ ಗಳಿಗೆ ಪೂರಕವಾಗಿರುತ್ತವೆ ಎಂಬುದ ಗೊತ್ತಿಲ್ಲದ ವಿಚಾರವೇನೂ ಅಲ್ಲ. ಅದು ಗೊತ್ತಿದ್ದೂ ಅದಕ್ಕೆ ತಕ್ಕಂತೆ ಇಂಗ್ಲೆಂಡ್ ತಂಡದವರು ಪೂರ್ವ ಸಿದ್ಧತೆ ಮಾಡಿಕೊಳ್ಳದೇ ಇರೋದು ಯಾರ ತಪ್ಪು ?
ನಿಜ, ಇಂಗ್ಲೆಂಡ್ ತಂಡ ವಿಶ್ವದ ಬಲಿಷ್ಠ ತಂಡಗಳಲ್ಲಿ ಒಂದಾಗಿದೆ. ಅದರಲ್ಲಿ ಎರಡು ಮಾತಿಲ್ಲ. ಭಾರತ ಪ್ರವಾಸಕ್ಕೂ ಮುನ್ನ ಇಂಗ್ಲೆಂಡ್ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಕೂಡ ಗೆದ್ದುಕೊಂಡಿತ್ತು.
ಜಾಯ್ ರೂಟ್ ನಾಯಕತ್ವದ ಇಂಗ್ಲೆಂಡ್ ತಂಡ ಇಂದು ವಿಶ್ವದ ಬಲಿಷ್ಠ ತಂಡಗಳನ್ನು ಸೋಲಿಸುವ ಸಾಮಥ್ರ್ಯವನ್ನು ಹೊಂದಿದೆ. ಯುವ ಹಾಗೂ ಅನುಭವಿ ಆಟಗಾರರನ್ನೊಳಗೊಂಡ ಇಂಗ್ಲೆಂಡ್ ತಂಡ ಭಾರತ ಪ್ರವಾಸಕ್ಕೆ ಸರಿಯಾದ ಸಿದ್ಧತೆಗಳನ್ನು ಮಾಡಿಕೊಂಡಿಲ್ಲ ಎಂಬುದು ಸ್ಪಷ್ಟವಾಗುತ್ತದೆ.
ಬೂಮ್ರಾ, ಇಶಾಂತ್ ಮತ್ತು ಅಶ್ವಿನ್ ಅವರ ಬೌಲಿಂಗ್ ವೈಖರಿ ಹೇಗೆ ಎದುರಿಸಬೇಕು ಎಂಬುದಕ್ಕೆ ಇಂಗ್ಲೆಂಡ್ ಸಿದ್ಧತೆ ಮಾಡಿಕೊಂಡಿತ್ತು. ಆದ್ರೆ ಅಕ್ಸರ್ ಪಟೇಲ್ ಅವರ ಸ್ಪಿನ್ ಜಾದೂ ಮತ್ತು ಮೊಹಮ್ಮದ್ ಸೀರಾಜ್ ಈ ಮಟ್ಟದಲ್ಲಿ ಕಟ್ಟಿ ಹಾಕುತ್ತಾರೆ ಅಂತ ಇಂಗ್ಲೆಂಡ್ ಬ್ಯಾಟ್ಸ್ ಮೆನ್ ಗಳು ಕನಸಿನಲ್ಲೂ ಅಂದುಕೊಂಡಿರಲಿಲ್ಲ.
ಅದೇ ರೀತಿ ಟೀಮ್ ಇಂಡಿಯಾದ ಬ್ಯಾಟ್ಸ್ ಮೆನ್ ಗಳನ್ನು ಕೂಡ ಸರಿಯಾಗಿ ಅರಿತುಕೊಳ್ಳಲು ಇಂಗ್ಲೆಂಡ್ ಬೌಲರ್ ಗಳು ಎಡವಿದ್ರು.
ನಾಯಕ ಕೊಹ್ಲಿ, ಚೇತೇಶ್ವರ ಪೂಜಾರ, ಶುಬ್ಮನ್ ಗಿಲ್, ಅಜಿಂಕ್ಯಾ ರಹಾನೆಯ ರನ್ ದಾಹಕ್ಕೆ ಕಡಿವಾಣ ಹಾಕಲು ಇಂಗ್ಲೀಷ್ ಬೌಲರ್ ಗಳು ಯಶಸ್ವಿಯಾದ್ರು.
ಆದ್ರೆ ರಿಷಬ್ ಪಂತ್ ಅವರ ಸಾಮಥ್ರ್ಯವನ್ನು ಸ್ವಲ್ಪ ಮಟ್ಟಿಗೆ ಲಘುವಾಗಿ ಪರಿಗಣಿಸಿರುವುದಕ್ಕೆ ತಕ್ಕ ದಂಡವನ್ನು ತೆರಬೇಕಾಯ್ತು. ಜೊತೆಗೆ ವಾಷಿಂಗ್ಟನ್ ಸುಂದರ್ , ಆರ್. ಅಶ್ವಿನ್ ಮತ್ತು ಅಕ್ಸರ್ ಪಟೇಲ್ ಅವರ ಸಮಯೋಚಿತ ಆಟಕ್ಕೆ ಬ್ರೇಕ್ ಹಾಕಲು ಇಂಗ್ಲೆಂಡ್ ನ ವೇಗದ ಬೌಲರ್ ಗಳು ಹಾಗೂ ಸ್ಪಿನ್ ಬೌಲರ್ ಗಳು ಕೂಡ ವಿಫಲರಾದ್ರು. ಇನ್ನೊಂದೆಡೆ ರೋಹಿತ್ ಶರ್ಮಾ ಫಾರ್ಮ್ ಕಂಡುಕೊಂಡಿರುವುದು ಕೂಡ ಇಂಗ್ಲೆಂಡ್ ತಂಡಕ್ಕೆ ಆಘಾತವನ್ನೇ ನೀಡಿದೆ.
ಅದ್ರಲ್ಲೂ ಇಡೀ ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು ಕಾಡಿದ್ದು ರಿಷಬ್ ಪಂತ್, ಅಕ್ಸರ್ ಪಟೇಲ್, ಅಶ್ವಿನ್, ವಾಷಿಂಗ್ಟನ್ ಸುಂದರ್ ಹಾಗೂ ಹಿಟ್ ಮ್ಯಾನ್ ರೋಹಿತ್ ಶರ್ಮಾ.
ಇನ್ನೊಂದೆಡೆ ಇಂಗ್ಲೆಂಡ್ ತಂಡ ತನ್ನ ಕೆಲವೊಂದು ತಪ್ಪು ನಿರ್ಧಾರಗಳಿಂದ ಭಾರತದಲ್ಲಿ ಮುಖಭಂಗ ಅನುಭವಿಸಿತ್ತು. ರೊಟೇಷನ್ ಪಾಲಿಸಿ ಇಂಗ್ಲೆಂಡ್ ತಂಡಕ್ಕೆ ಮುಳುವಾಗಿ ಪರಿಣಮಿಸಿತ್ತು.
ಪ್ರತಿ ಪಂದ್ಯದಲ್ಲೂ ಬದಲಾವಣೆ ಮಾಡಿಕೊಂಡಿರುವ ಇಂಗ್ಲೆಂಡ್ ಟೀಮ್ ಮ್ಯಾನೇಜ್ ಮೆಂಟ್ ಆಟಗಾರರಲ್ಲಿ ಗೊಂದಲವನ್ನೂ ಮೂಡಿಸಿತ್ತು.
ಅಷ್ಟೇ ಅಲ್ಲ, ತಂಡ ನಾಯಕ ಜಾಯ್ ರೂಟ್ ಮತ್ತು ಬೆನ್ ಸ್ಟೋಕ್ಸ್ ಅವರನ್ನು ಹೆಚ್ಚು ಅವಲಂಬಿತವಾಗಿತ್ತು. ಇನ್ನುಳಿದಂತೆ ಇಂಗ್ಲೆಂಡ್ ನ ಬ್ಯಾಟ್ಸ್ ಮೆನ್ ಗಳು ತಾಳ್ಮೆಯಿಂದ ಆಡುವ ಮನಸನ್ನೇ ಮಾಡಲಿಲ್ಲ. ಸ್ಪಿನ್ ಬೌಲರ್ ಗಳ ಎದುರು ರನ್ ಗಳಿಸಲು ಪರದಾಟ ನಡೆಸಿದ್ರು. ಕ್ರೀಸ್ ನಲ್ಲಿ ನೆಲಕಚ್ಚಿ ನಿಂತು ಆಡಲು ಟೀಮ್ ಇಂಡಿಯಾ ಬೌಲರ್ ಗಳು ಬಿಡಲಿಲ್ಲ.
ಒಟ್ಟಿನಲ್ಲಿ ಸರಣಿ ಯಾವುದೇ ಆಗಿರಲಿ, ಪಿಚ್ ಯಾವುದೇ ಇರಲಿ, ಪಿಚ್ ಹೇಗೆ ಬೇಕಾದ್ರೂ ವರ್ತಿಸಲಿ, ಪಂದ್ಯ ಆಡುವುದಕ್ಕಿಂತ ಮುನ್ನ ಮಾನಸಿಕವಾಗಿ ಸಿದ್ಧತೆ ಮಾಡಿಕೊಳ್ಳಲೇಬೇಕು. ಅದಕ್ಕೆ ತಕ್ಕಂತೆ ತಯಾರಿಯನ್ನು ಕೂಡ ಮಾಡಲೇಬೇಕಿದೆ. ಇಲ್ಲದಿದ್ರೆ ಒಮ್ಮೊಮ್ಮೆ ಹೀಗೂ ಆಗುತ್ತೆ..!

Related posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

March 21, 2026
ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

March 21, 2026
Tags: #saakshatvbcciCricketecbEnglandindia englandJOE ROOTteam indiatest cricketvirat kohli
ShareTweetSendShare
Join us on:

Related Posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

by Shwetha
March 21, 2026
0

ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವರನ್ನು...

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

by Shwetha
March 21, 2026
0

ಬೆಂಗಳೂರು ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ದಿಶೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಟೆಂಡರ್ ಆಹ್ವಾನಿಸಿದೆ. ಈ ಕುರಿತು ಎಮ್. ಬಿ. ಪಾಟೀಲ್ ಪ್ರತಿಕ್ರಿಯಿಸಿ,...

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

by Shwetha
March 21, 2026
0

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಕಾರ್ಮೋಡದ ನಡುವೆಯೇ ಇರಾನ್ ಜಗತ್ತಿನ ಪ್ರಮುಖ ವಾಣಿಜ್ಯ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇದು ಜಾಗತಿಕ...

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

by Shwetha
March 21, 2026
0

ಬೆಂಗಳೂರು: ಅಡುಗೆ ಅನಿಲ ಗ್ರಾಹಕರಿಗೆ ತೈಲ ಕಂಪನಿಗಳು ಮಹತ್ವದ ಸುದ್ದಿಯೊಂದನ್ನು ನೀಡಿದ್ದು ಸಿಲಿಂಡರ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ನೀವು ಇದುವರೆಗೆ ನಿಮಗೆ ಇಷ್ಟ ಬಂದ...

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

by Shwetha
March 21, 2026
0

ಬೆಂಗಳೂರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಕೇವಲ ತನ್ನ ಪಕ್ಷದ ಹೈಕಮಾಂಡ್‌ಗೆ ಹಣ ಒದಗಿಸುವ ಮೂಲವನ್ನಾಗಿ ಮಾಡಿಕೊಂಡಿದೆ ಎಂದು ದಿವಂಗತ ಕೇಂದ್ರ ಸಚಿವ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram