ADVERTISEMENT
Monday, August 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಸಂಜೀವಿನಿ ಪರ್ವತ ಉಲ್ಲೇಖಿಸಿ ಭಾರತಕ್ಕೆ ಪತ್ರ ಬರೆದ ಬ್ರೆಜಿಲ್ ಅಧ್ಯಕ್ಷ…

admin by admin
April 9, 2020
in International, Newsbeat
Share on FacebookShare on TwitterShare on WhatsappShare on Telegram

ಕೊರೊನಾ ವೈರಸ್‍ ಸೋಂಕಿನಿಂದ ತತ್ತರಿಸಿರುವ ಅಮೆರಿಕ ಸೇರಿದಂತೆ ವಿವಿಧ ದೇಶಗಳು, ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಪ್ಯಾರೆಸಿಟಮಾಲ್ ರಫ್ತು ಮಾಡಲು ಭಾರತಕ್ಕೆ ಮನವಿ ಸಲ್ಲಿಸಿದ್ದು, ಔಷಧಿ ರಫ್ತಿಗೆ ಭಾರತ ಸರ್ಕಾರ ಮುಂದಾಗಿದೆ.

ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧಿ ರಫ್ತಿಗೆ ಮುಂದಾದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರದ ನಿರ್ಧಾರವನ್ನು ರಾಮಾಯಣದಲ್ಲಿ ಬರುವ ಸಂಜೀವಿನಿ ಪರ್ವತಕ್ಕೆ ಹೋಲಿಕೆ ಮಾಡಿದ್ದಾರೆ.
ರಾಮಾಯಣದ ಪೌರಾಣಿಕ ಕಥೆಯಲ್ಲಿ ಲಂಕೆಯಲ್ಲಿ ನಡೆದ ಯುದ್ಧದಲ್ಲಿ ಗಾಯಗೊಂಡಿದ್ದ ಶ್ರೀರಾಮನ ಸಹೋದರ ಲಕ್ಷಣ ಮೂರ್ಛೆ ತಪ್ಪಲು, ವಾನರ ಸೈನದ ವೈದ್ಯರು ಚಿಕಿತ್ಸೆ ನೀಡಲು ಸಂಜೀವಿನಿ ಗಿಡಮೂಲಿಕೆ ಬೇಕೆಂದು ಹೇಳುತ್ತಾರೆ. ‌ಆಗ ರಾಮನ ಪರಮಭಕ್ತ ಹನುಮಂತ ಸಂಜೀವಿನಿ ಪರ್ವತವನ್ನೇ ಹೊತ್ತುಕೊಂಡು ಬರುತ್ತಾನೆ. ಈ ಪ್ರಸಂಗವನ್ನು ನೆನೆದು, ಔಷಧಿ ರಫ್ತಿಗೆ ಭಾರತ ನೀಡಿರುವ ಅನುಮತಿಯ ಹಿನ್ನೆಲೆಯಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು ಪತ್ರವನ್ನು ಬರೆದಿದ್ದು, ಭಗವಾನ್ ರಾಮನ ಸಹೋದರ ಲಕ್ಷ್ಮಣನ ಜೀವವನ್ನು ಉಳಿಸಲು ಹನುಮಂತ ಹಿಮಾಲಯದಿಂದ ಸಂಜೀವಿನಿ ತಂದ. ಯೇಸು ಅನಾರೋಗ್ಯದಿಂದ ಬಳಲುತ್ತಿದ್ದವರನ್ನು ಗುಣಪಡಿಸಿದ ಹಾಗೂ ಬಾರ್ಟಿಮಿಯುಗೆ ಕಣ್ಣು ಕಾಣುವಂತೆ ಮಾಡಿದ. ಜಗತ್ತಿನ ಎಲ್ಲಾ ಜನರ ಸಲುವಾಗಿ ಭಾರತ ಮತ್ತು ಬ್ರೆಜಿಲ್ ಈ ಜಾಗತಿಕ ಬಿಕ್ಕಟ್ಟನ್ನು ನಿವಾರಿಸಲು ಶ್ರಮಿಸುತ್ತಿವೆ ಎಂದು ತಿಳಿಸಿದ್ದಾರೆ.
ಭಾರತ ಔಷಧಿ ರಫ್ತಿಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅಮೆರಿಕದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ನಾನು ಲಕ್ಷಾಂತರ ರೂ. ಮೌಲ್ಯದ ಪ್ರಮಾಣದಲ್ಲಿ ಔಷಧಿ ಖರೀದಿಸಿದೆ. ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿದ್ದೇನೆ. ಆದಷ್ಟು ಬೇಗ ಭಾರತದಿಂದ ರಫ್ತು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಅವರು ಗ್ರೇಟ್, ನಿಜವಾಗಿಯೂ ಒಳ್ಳೆಯವರು. ಔಷಧಿ ಭಾರತಕ್ಕೆ ಬೇಕಾಗಿರುವುದರಿಂದಲೇ ರಫ್ತಿನ ಮೇಲೆ ನಿರ್ಬಂಧ ಹೇರಿದ್ದರು. ಆದರೆ ಈಗ ಅವರಿಂದ ಸಾಕಷ್ಟು ಒಳ್ಳೆಯ ಸಂಗತಿಗಳು ಬರುತ್ತಿವೆ ಎಂದು ಪ್ರಧಾನಿ ಮೋದಿ ಅವರನ್ನು ಹೊಗಳಿದ್ದಾರೆ. ಬಹಳಷ್ಟು ಜನರು ಭಾರತದ ಸಹಾಯವನ್ನು ನೋಡುತ್ತಿದ್ದಾರೆ, ಅದರ ಬಗ್ಗೆ ಮಾತನಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ನಾನು ಕೆಟ್ಟ ವಿಷಯಗಳನ್ನು ಕೇಳುವುದಿಲ್ಲ. ಭಾರತಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ.
ಅಮೆರಿಕದಲ್ಲಿ 4 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 15 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 26 ಜೆನರಿಕ್ ಔಷಧಿಗಳ ರಫ್ತಿಗೆ ಕಳೆದ ತಿಂಗಳಷ್ಟೇ ಭಾರತ ನಿರ್ಬಂಧ ಹೇರಿತ್ತು. ಕೊರೋನಾ ಸೋಂಕಿನಿಂದ ಕಂಗಾಲಾಗಿರುವ ಅಮೆರಿಕದಲ್ಲಿ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಆ್ಯಂಟಿ ಮಲೇರಿಯಾ ಔಷಧಿಯನ್ನು ತ್ವರಿತವಾಗಿ ರಫ್ತು ಮಾಡುವಂತೆ ಅಮೆರಿಕ ಕೇಳಿತ್ತು. ಮಾನವೀಯತೆಯ ದೃಷ್ಟಿಯಿಂದ ಕೊರೋನಾ ಸೋಂಕಿನಿಂದ ಕಂಗಾಲಾಗಿರುವ ರಾಷ್ಟ್ರಗಳಿಗೆ ಆ್ಯಂಟಿ ಮಲೇರಿಯಾ (ಹೈಡ್ರೋಕ್ಸಿಕ್ಲೋರೋಕ್ವೀನ್) ಔಷಧಿ ರಫ್ತು ಮಾಡುವುದಾಗಿ ಭಾರತ ತಿಳಿಸಿದೆ.
ಕೊರೊನಾಗೆ ಇಲ್ಲಿಯವರೆಗೆ ಯಾವುದೇ ಔಷಧಿ ಕಂಡು ಹಿಡಿದಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯೇ ಯಾವುದೇ ಔಷಧಿಯಿಂದ ಕೊರೊನಾ ವಾಸಿಯಾಗಿದ್ದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಹೇಳಿದೆ.
ಆದರೆ ತಾತ್ಕಾಲಿಕವಾಗಿ ಕೊರೊನಾಗೆ ಯಾವ ಮಾತ್ರೆ ನೀಡಿದರೆ ಕಡಿಮೆಯಾಗುತ್ತದೆ ಎನ್ನುವ ಬಗ್ಗೆ ಕಂಪನಿಯೊಂದು ಅಧ್ಯಯನ ನಡೆಸಿದ್ದು, ಹಲವು ದೇಶಗಳಲ್ಲಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯಿಂದ ರೋಗಿಗಳು ಗುಣಮುಖರಾಗಿದ್ದಾರೆ ಎಂದು ತಿಳಿಸಿದೆ. ಕೊರೊನಾ ತೀವ್ರವಾಗಿ ಹರಡುತ್ತಿರುವ ಯುರೋಪ್, ದಕ್ಷಿಣ ಅಮೆರಿಕ, ಆಸ್ಟ್ರೇಲಿಯಾ ಸೇರಿದಂತೆ ವಿಶ್ವದ 30 ದೇಶಗಳ ಒಟ್ಟು 6,227 ಮಂದಿ ವೈದ್ಯರನ್ನು ಸಂಪರ್ಕಿಸಿ ಅಧ್ಯಯನ ನಡೆಸಲಾಗಿದ್ದು, ಈ ಪೈಕಿ ಶೇ.37ರಷ್ಟು ಮಂದಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರ ಪರಿಣಾಮ ಬೀರಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗೆ ಬೇಡಿಕೆ ಹೆಚ್ಚಾಗಿದೆ. ಭಾರತದಲ್ಲಿ ಮಲೇರಿಯಾ ರೋಗದ ವಿರುದ್ಧ ಹೋರಾಡಲು ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯನ್ನು ನೀಡಲಾಗುತ್ತಿದೆ. ಭಾರತದಲ್ಲಿ ಇದು ಯಶಸ್ವಿಯಾದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಈ ಮಾತ್ರೆಗಳನ್ನು ದೇಶದಲ್ಲಿ ಉತ್ಪಾದನೆ ಮಾಡಲಾಗುತ್ತಿದೆ.

Related posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

August 17, 2026
ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

August 17, 2026
Tags: Brazil
ShareTweetSendShare
Join us on:

Related Posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

by Shwetha
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

by Shwetha
August 17, 2026
0

ಬೆಂಗಳೂರು: ದಳಪತಿ ವಿಜಯ ತಮಿಳುನಾಡಿನಲ್ಲಿ ಸ್ವಂತ ಪಕ್ಷ ಕಟ್ಟಿ ಸಿಎಂ ಪೀಠದತ್ತ ಹೆಜ್ಜೆ ಇಟ್ಟಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನ ಗಂಡುಗಲಿ ರಾಕಿಂಗ್ ಸ್ಟಾರ್ ಯಶ್ ಕೂಡ ಕರ್ನಾಟಕ ರಾಜಕೀಯಕ್ಕೆ...

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

by Shwetha
August 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹಾಗೂ ರಾಜ್ಯ ಸರ್ಕಾರದ ನಡುವಿನ ಶೀತಲ ಸಮರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. 2029ರಲ್ಲಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು,...

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

by Shwetha
August 17, 2026
0

ಸಮೃದ್ಧಿ, ಐಶ್ವರ್ಯ ಮತ್ತು ಸೌಭಾಗ್ಯದ ದೇವತೆಯಾದ ಶ್ರೀ ವರಮಹಾಲಕ್ಷ್ಮಿ ವ್ರತವು ಮುತ್ತೈದೆಯರ ಪಾಲಿಗೆ ಅತ್ಯಂತ ಪವಿತ್ರವಾದ ಹಬ್ಬವಾಗಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದ ಎರಡನೇ ಶುಕ್ರವಾರದಂದು ಆಚರಿಸಲಾಗುವ...

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

by Shwetha
August 17, 2026
0

ಸ್ಯಾಂಡಲ್‌ವುಡ್‌ನಿಂದ ಭಾರತೀಯ ಚಿತ್ರರಂಗದ ಉನ್ನತ ಮಟ್ಟಕ್ಕೆ ಬೆಳೆದು ನಿಂತಿರುವ ರಾಕಿಂಗ್ ಸ್ಟಾರ್ ಯಶ್, ಇಂಡಿಯಾ ಟಿವಿಯ ಜನಪ್ರಿಯ ಕಾರ್ಯಕ್ರಮ ಆಪ್ ಕಿ ಅದಾಲತ್‌ನಲ್ಲಿ ಭಾಗವಹಿಸಿ ಹಲವು ಕುತೂಹಲಕಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram