ಇತಿಹಾಸ ಪ್ರಸಿದ್ಧ ಪುತ್ತೂರಿನ ಮಹತೋಬಾರ್ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಧಾರ್ಮಿಕ ವಿಧಾನದ ಅಂಗವಾಗಿ ಧ್ವಜಾರೋಹಣ ನಡೆಸುವುದರೊಂದಿಗೆ ಜಾತ್ರೆಗೆ ಇಂದು ಬೆಳಿಗ್ಗೆ ವಿದ್ಯುಕ್ತ ಚಾಲನೆ ನೀಡಲಾಯಿತು.
ಲಕ್ಷಾಂತರ ಜನ ಆಗಮಿಸುವ ಪುತ್ತೂರಿನ ಜಾತ್ರೆಗೆ ಈ ಬಾರಿ ಕೊರೋನಾ ಸೋಂಕಿನ ಭೀತಿಯಿಂದ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಸಾರ್ವಜನಿಕರಿಗೆ ಪ್ರವೇಶವಿರಲಿಲ್ಲ. ತಂತ್ರಿಗಳು, ಅರ್ಚಕರ ಉಪಸ್ಥಿತಿಯಲ್ಲಿ ಹತ್ತೂರು ಒಡೆಯನ ಜಾತ್ರೋತ್ಸವದ ಸಾಂಪ್ರದಾಯಿಕ ಧ್ವಜಾರೋಹಣವನ್ನು ಬೆಳಿಗ್ಗೆ 9.50ಕ್ಕೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಗರುಡ, ಧ್ವಜಸ್ಥಂಭಕ್ಕೆ ಪ್ರದಕ್ಷಿಣೆ ಹಾಕಿದ್ದು, ಆ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ
ಜಾಮ್ನಗರ - ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ, ಒಂದು ವರ್ಷ ಕಳೆದಿದ್ದು ಈ ಒಂದು ವರ್ಷದಲ್ಲಿ ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ ಮತ್ತು...








