ಮುಂಬೈ: ಕೊರೊನಾ ವಿರುದ್ಧ ಹೋರಾಟಕ್ಕೆ ಪಿಎಂ ಕೇರ್ಸ್ ಫಂಡ್ ಗೆ 25 ಕೋಟಿ ದೇಣಿಗೆ ನೀಡಿದ ನಟ ಅಕ್ಷಯ್ ಕುಮಾರ್, ಕೋಟಿ ಕೋಟಿ ದುಡಿಯುವ ಇತರೆ ಸೆಲೆಬ್ರಿಟಿಗಳಿಗೆ ಮಾದರಿಯಾಗಿದ್ದಾರೆ. ಅಕ್ಷಯ್ ಕಾರ್ಯಕ್ಕೆ ದೇಶದೆಲ್ಲೆಡೆ ವ್ಯಾಪಕ ಮೆಚ್ಚುಗೆ ಕೂಡ ಕೇಳಿ ಬರುತ್ತಿರುವ ಬೆನ್ನಲ್ಲೇ, ಮುಂಬೈ ಪಾಲಿಕೆಗೆ ಅಕ್ಷಯ್ ಕುಮಾರ್ ಮೂರು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ದೇಶದಲ್ಲಿ ಅತೀ ಹೆಚ್ಚು ಸೋಂಕು ಪ್ರಕರಣಗಳು ಅಂದ್ರೆ 1364 ಕೇಸ್ ಗಳು ಮಹಾರಾಷ್ಟ್ರದಲ್ಲಿ ದಾಖಲಾಗಿವೆ. ಈ ಹಿನ್ನೆಲೆ ವೈದ್ಯಕೀಯ ಸಿಬ್ಬಂದಿಯ ಸುರಕ್ಷತೆಗಾಗಿ ಮಾಸ್ಕ್, ಪಿಪಿಇ ಹಾಗೂ ಟೆಸ್ಟಿಂಗ್ ಕಿಟ್ ತಯಾರಿಕೆಗೆ ಅನುಕೂಲವಾಗಲಿ ಎಂದು ಮುಂಬೈ ಮಹಾನಗರ ಪಾಲಿಕೆಗೆ ಅಕ್ಷಯ್ ಮೂರು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.