ನವದೆಹಲಿ: ತನ್ನ ಪಕ್ಷದ ಎಲ್ಲಾ ಸಂಸದರಿಗೆ ವಿಪ್ ಜಾರಿ ಮಾಡಿರುವ ಬಿಜೆಪಿಯ ನಡೆ ಹಲವು ಕುತೂಹಲಗಳಿಗೆ ಕಾರಣವಾಗಿದೆ. ಬಜೆಟ್ ಅಧಿವೇಶನದ ಕೊನೆ ದಿನವಾದ ಇಂದು ಸಂಸದರ ಕಡ್ಡಾಯ ಹಾಜರಾತಿಗೆ ಬಿಜೆಪಿ ಆದೇಶ ನೀಡಿದ್ದು, ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆಯಾಗಲಿದೆಯಾ ಎಂಬ ಅನುಮಾನ ಮೂಡುವಂತೆ ಮಾಡಿದೆ. ಇನ್ನೂ ಈ ಹಿಂದೆಯೇ ಬಿಲ್-೨೦೨೦ ಹೆಸರಿನಲ್ಲಿ ಮಸೂದೆ ಮಂಡನೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಬಿಲ್ ಮಂಡನೆ ಸಂಬಂಧ ಕಳೆದ ಶುಕ್ರವಾರವೇ ಶೆಡ್ಯೂಲ್ ಆಗಿತ್ತು, ಆದ್ರೆ ಆ ದಿನ ಬಹುತೇಕ ಸಂಸದರು ಗೈರಾಗಿದ್ದರಿಂದ ಇಂದು ಕಡ್ಡಾಯ ಹಾಜರಾತಿಗೆ ನಿರ್ಮಲಾ ಸೀತಾರಾಮನ್ ಸೂಚನೆ ನೀಡಿದ್ದಾರೆ. ಇನ್ನೂ ಕೂಡಲೇ ವಿಪ್ ಜಾರಿ ಮಾಡಿರೋ ನಡೆಯನ್ನು ಗಮನಿಸಿದ್ರೆ, ಜನಸಂಖ್ಯಾ ನಿಯಂತ್ರಣ, ಮೀಸಲಾತಿಗೆ ಸಂಬಂಧಿಸಿದಂತೆ ಮಸೂದೆ ಮಂಡನೆಯಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.
Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..!
ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್ ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....








