ನವದೆಹಲಿ: ತನ್ನ ಪಕ್ಷದ ಎಲ್ಲಾ ಸಂಸದರಿಗೆ ವಿಪ್ ಜಾರಿ ಮಾಡಿರುವ ಬಿಜೆಪಿಯ ನಡೆ ಹಲವು ಕುತೂಹಲಗಳಿಗೆ ಕಾರಣವಾಗಿದೆ. ಬಜೆಟ್ ಅಧಿವೇಶನದ ಕೊನೆ ದಿನವಾದ ಇಂದು ಸಂಸದರ ಕಡ್ಡಾಯ ಹಾಜರಾತಿಗೆ ಬಿಜೆಪಿ ಆದೇಶ ನೀಡಿದ್ದು, ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆಯಾಗಲಿದೆಯಾ ಎಂಬ ಅನುಮಾನ ಮೂಡುವಂತೆ ಮಾಡಿದೆ. ಇನ್ನೂ ಈ ಹಿಂದೆಯೇ ಬಿಲ್-೨೦೨೦ ಹೆಸರಿನಲ್ಲಿ ಮಸೂದೆ ಮಂಡನೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಬಿಲ್ ಮಂಡನೆ ಸಂಬಂಧ ಕಳೆದ ಶುಕ್ರವಾರವೇ ಶೆಡ್ಯೂಲ್ ಆಗಿತ್ತು, ಆದ್ರೆ ಆ ದಿನ ಬಹುತೇಕ ಸಂಸದರು ಗೈರಾಗಿದ್ದರಿಂದ ಇಂದು ಕಡ್ಡಾಯ ಹಾಜರಾತಿಗೆ ನಿರ್ಮಲಾ ಸೀತಾರಾಮನ್ ಸೂಚನೆ ನೀಡಿದ್ದಾರೆ. ಇನ್ನೂ ಕೂಡಲೇ ವಿಪ್ ಜಾರಿ ಮಾಡಿರೋ ನಡೆಯನ್ನು ಗಮನಿಸಿದ್ರೆ, ಜನಸಂಖ್ಯಾ ನಿಯಂತ್ರಣ, ಮೀಸಲಾತಿಗೆ ಸಂಬಂಧಿಸಿದಂತೆ ಮಸೂದೆ ಮಂಡನೆಯಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.
ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ
ಬಾಗಲಕೋಟೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದರೆ ಪಕ್ಷದಿಂದ ದೂರವಾಗಿರುವ ಬಂಡಾಯ ನಾಯಕರನ್ನು ಮತ್ತೆ ಮನೆಗೆ ಕರೆತರುವುದು ಅನಿವಾರ್ಯ ಎಂದು ಮಾಜಿ ಸಚಿವ ಮುರುಗೇಶ...








