ನವದೆಹಲಿ: ತನ್ನ ಪಕ್ಷದ ಎಲ್ಲಾ ಸಂಸದರಿಗೆ ವಿಪ್ ಜಾರಿ ಮಾಡಿರುವ ಬಿಜೆಪಿಯ ನಡೆ ಹಲವು ಕುತೂಹಲಗಳಿಗೆ ಕಾರಣವಾಗಿದೆ. ಬಜೆಟ್ ಅಧಿವೇಶನದ ಕೊನೆ ದಿನವಾದ ಇಂದು ಸಂಸದರ ಕಡ್ಡಾಯ ಹಾಜರಾತಿಗೆ ಬಿಜೆಪಿ ಆದೇಶ ನೀಡಿದ್ದು, ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆಯಾಗಲಿದೆಯಾ ಎಂಬ ಅನುಮಾನ ಮೂಡುವಂತೆ ಮಾಡಿದೆ. ಇನ್ನೂ ಈ ಹಿಂದೆಯೇ ಬಿಲ್-೨೦೨೦ ಹೆಸರಿನಲ್ಲಿ ಮಸೂದೆ ಮಂಡನೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಬಿಲ್ ಮಂಡನೆ ಸಂಬಂಧ ಕಳೆದ ಶುಕ್ರವಾರವೇ ಶೆಡ್ಯೂಲ್ ಆಗಿತ್ತು, ಆದ್ರೆ ಆ ದಿನ ಬಹುತೇಕ ಸಂಸದರು ಗೈರಾಗಿದ್ದರಿಂದ ಇಂದು ಕಡ್ಡಾಯ ಹಾಜರಾತಿಗೆ ನಿರ್ಮಲಾ ಸೀತಾರಾಮನ್ ಸೂಚನೆ ನೀಡಿದ್ದಾರೆ. ಇನ್ನೂ ಕೂಡಲೇ ವಿಪ್ ಜಾರಿ ಮಾಡಿರೋ ನಡೆಯನ್ನು ಗಮನಿಸಿದ್ರೆ, ಜನಸಂಖ್ಯಾ ನಿಯಂತ್ರಣ, ಮೀಸಲಾತಿಗೆ ಸಂಬಂಧಿಸಿದಂತೆ ಮಸೂದೆ ಮಂಡನೆಯಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.
ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...








