ಜನ್ಮ ಕೊಟ್ಟ ತಂದೆಯನ್ನೇ ಕೊಲೆ ಮಾಡಿದ ಪಾಪಿ ಪುತ್ರ..!
ತುಮಕೂರು : ವ್ಯಕ್ತಿಯೊಬ್ಬ ಆಸ್ತಿಗಾಗಿ ಜನ್ಮಕೊಟ್ಟ ತಂದೆಯನ್ನೇ ಕೊಲೆ ಮಾಡಿರುವ ಘಟನೆ ತುಮಕೂರಿನ ಮಧುಗಿರಿ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ. 60 ವರ್ಷದ ಮಂಜುನಾಥ್ ಮೃತದುರ್ದೈವಿಯಾಗಿದ್ದು, 35 ವರ್ಷದ ನವೀನ್ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ಆರೋಪಿ ನವೀನ್ ನನ್ನ ಮಧುಗಿರಿ ಠಾಣಾ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಪ್ರಕರಣದ ಹಿನ್ನೆಲೆ
ತಂದೆ ಹಾಗೂ ಮಗನ ನಡುವೆ ಆಸ್ತಿ ವಿಚಾರವಾಗಿ ಬಹಳ ದಿನಗಳಿಂದ ಗಲಾಟೆ ನಡೆಯುತ್ತಿತ್ತು. ಹೀಗಿರುವುವಾಗಲೇ ಮಾ.2ರಂದು ಗ್ರಾಮದ ವೀರಣ್ಣ ಎಂಬುವರ ಜಮೀನಿನಲ್ಲಿ ಮಂಜುನಾಥ್ ರ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಇದನ್ನ ಆತ್ಮಹತ್ಯೆ ಎಂಬ ರೀತಿಯೂ ಬಿಂಬಿಸಲಾಗಿತ್ತು. ಆದ್ರೆ ಮೃತದೇಹ ಕಂಡು ಅನುಮಾನಗೊಂಡಿದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.
ಬಳಿಕ ಅನುಮಾನದ ಮೇರೆಗೆ ಪೊಲೀಸರು ಮಗ ನವೀನ್ ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಸಲಿ ಘಟನೆ ಬೆಳಕಿಗೆ ಬಂದಿದೆ. ಮದ್ಯದ ಬಾಟಲಿಗೆ ವಿಷ ಬೆರೆಸಿದ್ದ ನವೀನ್ ಅದನ್ನ ತಂದೆ ಮಂಜುನಾಥ್ ಗೆ ಕುಡಿಯಲು ಕೊಟ್ಟು ನಂತರ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಸತ್ಯ ಬಾಯ್ಬಿಟ್ಟಿದ್ದಾನೆ. ಇನ್ನೂ ಮೃತ ಮಂಜುನಾಥ್ ಈ ಹಿಂದೆ ಆಸ್ತಿ ವಿಚಾರವಾಗಿ ಪುತ್ರನ ವಿರುದ್ಧ ಈ ಹಿಂದೆ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು ಎಂದು ಹೇಳಲಾಗಿದೆ.
15 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ – ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ..!








