ADVERTISEMENT
Sunday, August 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಮಹಮ್ಮದ್ ಅಜರುದ್ದೀನ್… ಗಡಿ ಜಿಲ್ಲೆ ಕಾಸರಗೋಡಿನ ಯುವಕ ಈಗ ಆರ್ ಸಿಬಿಯ ಆರಂಭಿಕ..?

admin by admin
April 4, 2021
in IPL 2021, Newsbeat, ಐಪಿಎಲ್ 2021
mohammad azaruddin kerala ipl rcb saakshatv virat kohli
Share on FacebookShare on TwitterShare on WhatsappShare on Telegram

Mohammed Azharuddeen rcb ipl saakshatv

ಕಾಸರಗೋಡು… ಕರ್ನಾಟಕ ಮತ್ತು ಕೇರಳ ರಾಜ್ಯಗಳ ಗಡಿ ಜಿಲ್ಲೆ. ಕೇರಳ ರಾಜ್ಯಕ್ಕೆ ಸೇರಿದ್ರೂ ಕಾಸರಗೋಡಿನ ಜೊತೆಗೆ ಕನ್ನಡಿಗರ ನಂಟು ಅಂಟಿನುಂಡೆಯಷ್ಟೇ ಗಟ್ಟಿಯಾಗಿದೆ. ಹಲವು ಧರ್ಮ, ನಾನಾ ಭಾಷೆ, ನಾನಾ ಸಂಸ್ಕøತಿಗಳನ್ನು ಹೊಂದಿರುವ ನಾಡು ಕಾಸರಗೋಡು. ಕನ್ನಡ ಭಾಷೆ ಮತ್ತು ಸಂಸ್ಕøತಿಗೆ ಅನನ್ಯ ಕೊಡುಗೆಗಳನ್ನು ನೀಡಿರುವ ಕಾಸರಗೋಡಿಗೆ ಐತಿಹಾಸಿಕ ಹಿನ್ನೆಲೆಯೂ ಇದೆ.
ಸ್ವಾತಂತ್ರ್ಯ ಪೂರ್ವದಲ್ಲಿ ಕುಂಬಳೆ ರಾಜರ ಅಧೀನದಲ್ಲಿದ್ದ ಕಾಸರಗೋಡು ಅರಬ್ಬರ ಪ್ರಮುಖ ವ್ಯಾಪಾರ ತಾಣವಾಗಿತ್ತು. ಹಾಗಾಗಿ ಕಾಸರಗೋಡು ಅನ್ನು ಹರ್ಕ್ ವಿಲ್ಲಿಯಾ ಅಂತ ಕರೆಯುತ್ತಿದ್ದರು. ವಿಜಯನಗರ, ಮೈಸೂರು, ಇಕ್ಕೇರಿ, ಕೋಲತ್ತಿರಿ ರಾಜ್ಯ ವಂಶಸ್ಥರು ರಾಜ್ಯಾಡಳಿತ ನಡೆಸಿದ್ದರು. ಇದು ಕಾಸರಗೋಡಿನ ಚೊಕ್ಕವಾದ ಇತಿಹಾಸ.
ರಾಷ್ಟ್ರಕವಿ ಗೋವಿಂದ ಪೈ, ಕಯ್ಯಾರ ಕಿಂಜ್ಞಣ್ಣ ರೈ ಸೇರಿದಂತೆ ಹಲವು ಕವಿಗಳ, ಚಿಂತಕರ, ಕಲಾವಿದರ, ಸಂಶೋಧಕರ, ಹೋರಾಟಗಾರರ ತವರೂರು ಕೂಡ ಹೌದು.
ಇಂತಹ ಐತಿಹಾಸಿಕ ನಾಡಿನಿಂದ ಇದೀಗ ಯುವ ಕ್ರಿಕೆಟಿಗನ ಉದಯವಾಗಿದೆ. ಆತನ ಹೆಸರು ಮಹಮ್ಮದ್ ಅಜರುದ್ದೀನ್.
.
ಮಹಮ್ಮದ್ ಅಜರುದ್ದಿನ್ ಕೇರಳ ರಣಜಿ ತಂಡದ ಆಟಗಾರ. ಆದ್ರೆ 14ನೇ ಐಪಿಎಲ್ ನಲ್ಲಿ ಆಡುತ್ತಿರುವುದು ನಮ್ಮ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ.
ಅಂದ ಹಾಗೇ ಮಹಮ್ಮದ್ ಅಜರುದ್ದೀನ್ ಸದ್ಯ ದೇಶಿ ಕ್ರಿಕೆಟ್ ನಲ್ಲಿ ಸಾಕಷ್ಟು ಸದ್ದು ಮಾಡಿದ್ದಾರೆ. ಅದ್ರಲ್ಲೂ ಸಯ್ಯದ್ ಮುಷ್ತಾಕ್ ಆಲಿ ಕ್ರಿಕೆಟ್ ಟೂರ್ನಿಯಲ್ಲಿ ವೇಗದ ಶತಕ ದಾಖಲಿಸಿದ್ದ ದಾಖಲೆಯೂ ಅಜರುದ್ದೀನ್ ಹೆಸರಿನಲ್ಲಿದೆ. ಮುಂಬೈ ವಿರುದ್ಧ ಕೇವಲ 37 ಎಸೆತಗಳಲ್ಲಿ ಶತಕ ದಾಖಲಿಸಿದ್ದರು. 26ರ ಹರೆಯದ ಮಹಮ್ಮದ್ ಅಜರುದ್ದೀನ್ 52 ಎಸೆತಗಳಲ್ಲಿ 11 ಸಿಕ್ಸರ್ ಮತ್ತು 9 ಬೌಂಡರಿಗಳನ್ನು ಸಿಡಿಸಿದ್ದರು.
ನಂತರ ಅಜರುದ್ದೀನ್ ಅವರ ಅದೃಷ್ಟವೇ ಬದಲಾಗಿ ಹೋಯ್ತು. ಐಪಿಎಲ್ ಹರಾಜಿನಲ್ಲಿ ಆರ್ ಸಿಬಿ ತಂಡ 1.37 ಕೋಟಿಗೆ ಖರೀದಿ ಮಾಡಿತ್ತು. ಸದ್ಯ ಆರ್ ಸಿಬಿ ಕ್ಯಾಂಪ್ ನಲ್ಲಿರುವ ಮಹಮ್ಮದ್ ಅಜರುದ್ದೀನ್ ತನ್ನ ಚೊಚ್ಚಲ ಪಂದ್ಯದಲ್ಲೇ ವಿರಾಟ್ ಜೊತೆ ಇನಿಂಗ್ಸ್ ಆರಂಭಿಸುವ ಸಾಧ್ಯತೆಯೂ ದಟ್ಟವಾಗಿದೆ.
Mohammed Azharuddeen ipl rcb kerala saakshatvಅಷ್ಟಕ್ಕೂ ಮಹಮ್ಮದ್ ಅಜರುದ್ದೀನ್ ಅವರ ಬಹುದಿನಗಳ ಕನಸು ಕೂಡ ಈಡೇರಲಿದೆ. ತನ್ನ ನೆಚ್ಚಿನ ಆಟಗಾರನಾಗಿರುವ ವಿರಾಟ್ ಜೊತೆ ಇನಿಂಗ್ಸ್ ಆರಂಭಿಸುವುದು ಅಂದ್ರೆ ಅದು ಅವಿಸ್ಮರಣೀಯ ಘಳಿಗೆಯೂ ಆಗಲಿದೆ.
ಮಹಮ್ಮದ್ ಅಜರುದ್ದೀನ್ ಹುಟ್ಟಿದ್ದು ಮಾರ್ಚ್ 22, 1994ರಲ್ಲಿ. ಗಡಿ ಜಿಲ್ಲೆ ಕಾಸರಗೋಡು ಜಿಲ್ಲೆಯ ತಳಂಗರ ಊರು ತವರೂರು. ಎಂಟು ಮಂದಿ ಮಕ್ಕಳಲ್ಲಿ ಅಜರುದ್ದೀನ್ ಅವರು ಕೂಡ ಒಬ್ಬರು. ಅಜರುದ್ದೀನ್ ಅವರ ಹೆತ್ತವರು ಅಜ್ಮಲ್ ಅಂತ ಹೆಸರಿಡಲು ಯೋಚನೆ ಮಾಡುತ್ತಿದ್ದರು. ಆದ್ರೆ ದೊಡ್ಡ ಮಗನ ನೆಚ್ಚಿನ ಆಟಗಾರ ಆಗೀನ ಭಾರತ ಕ್ರಿಕೆಟ್ ತಂಡದ ನಾಯಕ ಮಹಮ್ಮದ್ ಅಜರುದ್ದೀನ್. ಹೀಗಾಗಿ ತನ್ನ ತಮ್ಮನಿಗೆ ಮಹಮ್ಮದ್ ಅಜರುದ್ದೀನ್ ಅಂತನೇ ನಾಮಕರಣ ಮಾಡಿದ್ದರು.
ಹಾಗೇ ನೋಡಿದ್ರೆ ಕಾಸರಗೋಡಿನಲ್ಲಿ ಕ್ರಿಕೆಟ್ ಗಿಂತಲೂ ಜನಪ್ರಿಯ ಕ್ರೀಡೆ ಫುಟ್ ಬಾಲ್. ಆದ್ರೆ ಮಹಮ್ಮದ್ ಅಜರುದ್ದೀನ್ ಅವರ ಅಣ್ಣಂದಿರು ಸ್ಥಳೀಯ ಕ್ರಿಕೆಟ್ ಪಂದ್ಯಗಳನ್ನಾಡುತ್ತಿದ್ದರು. ಹೀಗಾಗಿ ಮಹಮ್ಮದ್ ಅಜರುದ್ದೀನ್ ಅವರು ಅಣ್ಣಂದಿರು ಆಡುತ್ತಿರುವುದರಿಂದ ಕ್ರಿಕೆಟ್ ಮೇಲೆ ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಂಡ್ರು

Related posts

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

August 30, 2026
‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

ವಾಲ್ಮೀಕಿ ನಿಗಮ ಹಗರಣ: ‘ಬಿ. ನಾಗೇಂದ್ರರನ್ನು ಬಿಜೆಪಿ ಷಡ್ಯಂತ್ರದಿಂದ ಗುರಿಯಾಗಿಸಿದೆ’ ಎಂದ BK ಹರಿಪ್ರಸಾದ್

August 30, 2026

ತನ್ನ ಹತ್ತನೇ ಹರೆಯದಲ್ಲೇ ಕ್ರಿಕೆಟ್ ಅಭ್ಯಾಸ ಶುರು ಮಾಡಿಕೊಂಡಿದ್ದ ಅಜರುದ್ದೀನ್ ಒಬ್ಬ ಕ್ರಿಕೆಟಿಗನಾಗಲು ಸಾಕಷ್ಟು ಪರಿಶ್ರಮ ಪಟ್ಟಿದ್ದಾರೆ. ಆರಂಭದಲ್ಲಿ ತಳಂಗರ ಟಾಸ್ ಕ್ಲಬ್ ನಲ್ಲಿ ತರಬೇತಿ ಪಡೆದ ಮಹಮ್ಮದ್ ಅಜರುದ್ದೀನ್, 11ರ ಹರೆಯದಲ್ಲೇ ಕಾಸರಗೋಡು 13 ವಯೋಮಿತಿ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದರು. ಅಲ್ಲದೆ ವಿಕೆಟ್ ಕೀಪಿಂಗ್ ನಲ್ಲೂ ಮಿಂಚು ಹರಿಸಿದ್ದರು. ಪರಿಣಾಮ ಜಿಲ್ಲಾ ತಂಡದ ನಾಯಕನಾಗಿದ್ದರು.
ಬಳಿಕ ಕೇರಳ 15 ವಯೋಮಿತಿ ತಂಡದ ನಾಯಕನಾಗಿದ್ದ ಅಜರುದ್ದೀನ್, ಕೇರಳ ಕ್ರಿಕೆಟ್ ಸಂಸ್ಥೆಯ ಕಣ್ಣಿಗೂ ಬಿದ್ರು. ಬಳಿಕ ಕೊಟ್ಟಾಯಂನಲ್ಲಿ ಕೆಸಿಎ ಅಕಾಡೆಮಿ ಸೇರಿಕೊಂಡ್ರು.
ನಂತರ ಹೆಚ್ಚಿನ ವ್ಯಾಸಂಗಕ್ಕಾಗಿ ಕೊಚ್ಚಿಯ ಥಿವಾರ ಎಸ್ ಎಚ್ ಸ್ಕೂಲ್ ಮತ್ತು ಕಾಲೇಜ್ ಸೇರಿಕೊಂಡ್ರು. ಜೊತೆಗೆ ಕೇರಳ ಕ್ರಿಕೆಟ್ ಸಂಸ್ಥೆಯ ಕೊಚ್ಚಿ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆದ್ರು.
Mohammed Azharuddeen ipl rcb  kerala saakshatvಈ ಹಂತದಲ್ಲಿ ಮಹಮ್ಮದ್ ಅಜರುದ್ದೀನ್ ಅವರಿಗೆ ಮಾರ್ಗದರ್ಶನ ನೀಡಿದ್ದು ಕೋಚ್ ಬಿಜು ಮೋನ್. ಅದ್ಭುತ ಬ್ಯಾಟಿಂಗ್ ಮೂಲಕ ಕೇರಳ 19 ವಯೋಮಿತಿ ತಂಡದಲ್ಲೂ ಸ್ಥಾನ ಪಡೆದ್ರು. ತಮಿಳುನಾಡು ವಿರುದ್ಧದ ತನ್ನ ಮೊದಲ ಪಂದ್ಯದ ಮೊದಲ ಎಸೆತವನ್ನೇ ಸಿಕ್ಸರ್ ಬಾರಿಸಿದ್ದ ಹೆಗ್ಗಳಿಕೆ ಇವರದ್ದು. ನಂತರ ಹಿಂತಿರುಗಿ ನೋಡದ ಮಹಮ್ಮದ್ ಅಜರುದ್ದೀನ್ ಕೇರಳ 23 ವಯೋಮಿತಿ ಹಾಗೂ ರಾಜ್ಯ ತಂಡಕ್ಕೂ ಆಯ್ಕೆಯಾದ್ರು.
2015-16ನೇ ಸಾಲಿನಲ್ಲಿ ಗೋವಾ ವಿರುದ್ಧ ತನ್ನ ಚೊಚ್ಚಲ ರಣಜಿ ಪಂದ್ಯವನ್ನು ಆಡಿದ್ದರು.
2018-19ರಲ್ಲಿ ವಿಜಯ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕೇರಳ ತಂಡದ ನಾಯಕ ಸಚಿನ್ ಬೇಬಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಕಾರಣ ಮಹಮ್ಮದ್ ಅಜರುದ್ದೀನ್ ಸೇರಿ ಒಟ್ಟು ಐದು ಮಂದಿ ಆಟಗಾರರಿಗೆ ಮೂರು ಪಂದ್ಯಗಳಿಗೆ ನಿಷೇಧದ ಶಿಕ್ಷೆ ವಿಧಿಸಲಾಗಿತ್ತು. ಇದು ಒಂದು ಅಜರುದ್ದೀನ್ ಅವರ ಕ್ರಿಕೆಟ್ ಬದುಕಿಗೆ ಕಪ್ಪುಚುಕ್ಕೆಯಾಗಿದೆ. ಆದ್ರೆ ತನ್ನ ಸ್ಪೋಟಕ ಬ್ಯಾಟಿಂಗ್ ಮೂಲಕ ಕೇರಳ ತಂಡದ ಪ್ರಮುಖ ಸ್ಟಾರ್ ಆಟಗಾರ ಎಂಬುದರಲ್ಲಿ ಎರಡು ಮಾತಿಲ್ಲ. ಕೇರಳ ಪರ ಟಿ-ಟ್ವೆಂಟಿ ಕ್ರಿಕೆಟ್ ನಲ್ಲಿ ಶತಕ ದಾಖಲಿಸಿದ್ದ ಮೊದಲ ಬ್ಯಾಟ್ಸ್ ಮೆನ್ ಕೂಡ ಹೌದು.
ಒಟ್ಟು 22 ಪ್ರಥಮ ದರ್ಜೆಯ ಪಂದ್ಯಗಳನ್ನು ಆಡಿರುವ ಮಹಮ್ಮದ್ ಅಜರುದ್ದೀನ್ 959 ರನ್ ಗಳಿಸಿದ್ದಾರೆ. 30 ಲೀಸ್ಟ್ ಎ ಪಂದ್ಯಗಳಲ್ಲಿ 585 ರನ್ ಗಳಿಸಿದ್ದಾರೆ. ಹಾಗೇ 24 ಟಿ-ಟ್ವೆಂಟಿ ಪಂದ್ಯಗಳಲ್ಲಿ 451 ರನ್ ಪೇರಿಸಿದ್ದಾರೆ.
ಆರಂಭಿಕ ಆಟಗಾರನಾಗಿದ್ರೂ ಮಹಮ್ಮದ್ ಅಜರುದ್ದೀನ್ ಅವರಿಗೆ ಕೇರಳ ತಂಡದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಬೇಕಾಯ್ತು. mohammad azaruddin kerala ipl rcb saakshatvಕೇರಳದ ಮಾಜಿ ಕೋಚ್ ಡೇವ್ ವಾಟ್ಮೋರ್ ಅವರು ಮಧ್ಯಮ ಕ್ರಮಾಂಕದಲ್ಲಿ ಆಡಿಸುತ್ತಿದ್ದರು. ಹೀಗಾಗಿ ತನ್ನ ಪ್ರತಿಭೆ ಮತ್ತು ಸಾಮಥ್ರ್ಯವನ್ನು ನಿರೂಪಿಸಲು ಸಾಧ್ಯವಾಗಿರಲಿಲ್ಲ. ಬಳಿಕ ಟೀನೂ ಯೋಹಾನನ್ ಅವರು ಕೋಚ್ ಆದ ನಂತರ ಆರಂಭಿಕನಾಗಿ ಕಣಕ್ಕಿಳಿಸಿದ್ರು. ಇಲ್ಲಿ ಮಹಮ್ಮದ್ ಅಜರುದ್ದೀನ್ ಅವಕಾಶಕ್ಕಾಗಿ ಕಾಯುತ್ತಿದ್ದರು. ಸಿಕ್ಕ ಅವಕಾಶವನ್ನು ಸರಿಯಾಗಿಯೇ ಬಳಸಿಕೊಂಡ್ರು.
ಈ ನಡುವೆ, ಮಹಮ್ಮದ್ ಅಜರುದ್ದೀನ್ ಅವರು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅಜರುದ್ದೀನ್ ಅವರನ್ನು ಎರಡು ಮೂರು ಬಾರಿ ಭೇಟಿ ಮಾಡಿದ್ದರು. ಆಗ ತನ್ನ ಹೆಸರು ಮಹಮ್ಮದ್ ಅಜರುದ್ದೀನ್ ಹೇಗೆ ಬಂತು ಅನ್ನೋ ವಿಚಾರವನ್ನು ಹಂಚಿಕೊಂಡಿದ್ದರು. ತನ್ನ ಅಣ್ಣನ ನೆಚ್ಚಿನ ಆಟಗಾರ ಮಹಮ್ಮದ್ ಅಜರುದ್ದೀನ್. ಆದ್ರೆ ಅಜರುದ್ದೀನ್ ಗೆ ನೆಚ್ಚಿನ ಆಟಗಾರ ವಿರಾಟ್ ಕೊಹ್ಲಿ.
ಒಟ್ಟಿನಲ್ಲಿ ಮಹಮ್ಮದ್ ಅಜರುದ್ದೀನ್ ಅವರಿಗೆ ಈಗ ಐಪಿಎಲ್ ನಲ್ಲಿ ಆಡುವ ಅವಕಾಶ ಸಿಕ್ಕಿದೆ. ಅದನ್ನು ಯಾವ ರೀತಿ ಬಳಸಿಕೊಳ್ಳುತ್ತಾರೆ ಅನ್ನೋದನ್ನು ಕಾದು ನೋಡೋಣ.

Tags: #saakshatvbccibengaluruIPLipl 2021karnatakakasaragodukeral cricketkeralamangalrumohammed azharuddeenRCBSyed Mushtaq Ali TrophyThalangara
ShareTweetSendShare
Join us on:

Related Posts

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

by Shwetha
August 30, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಕಿಚ್ಚು ರಾಜ್ಯ ರಾಜಕಾರಣದಲ್ಲಿ ಇನ್ನೂ ಆರಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಎರಡನೇ...

‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

ವಾಲ್ಮೀಕಿ ನಿಗಮ ಹಗರಣ: ‘ಬಿ. ನಾಗೇಂದ್ರರನ್ನು ಬಿಜೆಪಿ ಷಡ್ಯಂತ್ರದಿಂದ ಗುರಿಯಾಗಿಸಿದೆ’ ಎಂದ BK ಹರಿಪ್ರಸಾದ್

by Shwetha
August 30, 2026
0

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರ ಇದೀಗ ರಾಜ್ಯ...

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

by Shwetha
August 30, 2026
0

ಭಾರತೀಯ ಕಾರ್ಪೊರೇಟ್ ವಲಯದಲ್ಲಿ ದಶಕಗಳಿಂದ ಕುತೂಹಲ ಮೂಡಿಸಿರುವ ಟಾಟಾ ಸನ್ಸ್ ಮತ್ತು ಶಾಪೂರ್ಜಿ ಪಲ್ಲೊಂಜಿ (SP) ಗ್ರೂಪ್ ನಡುವಿನ ಸಂಬಂಧದ ಬಿಕ್ಕಟ್ಟು ಇದೀಗ ಮತ್ತೊಂದು ಪ್ರಮುಖ ಹಂತ...

ಮೋದಿ ಸರ್ಕಾರದ ಒತ್ತಡದಿಂದ ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಪ್ರಕಟಣೆಗೆ ತಡೆ? ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಎಂದ ಕಾಂಗ್ರೆಸ್

ಮೋದಿ ಸರ್ಕಾರದ ಒತ್ತಡದಿಂದ ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಪ್ರಕಟಣೆಗೆ ತಡೆ? ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಎಂದ ಕಾಂಗ್ರೆಸ್

by Shwetha
August 30, 2026
0

ಯುಪಿಎ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಜೀವನ ಪಯಣವನ್ನು ಅನಾವರಣಗೊಳಿಸುವ Belonging: A Journey of Love ಎಂಬ ಆತ್ಮಚರಿತ್ರೆ ಈಗ...

ಬ್ರಿಟಿಷರಿಗೇ ಹೆದರದ ನಮಗೆ ಈ ಬಿಜೆಪಿಗರು ಯಾವ ಪುಟ್ಗೋಸಿ? ಬಿಜೆಪಿ ಒಂದು ನಾಟಕ ಕಂಪನಿ, ಇವರ ಪಾದಯಾತ್ರೆ ಗಣಿ ಲೂಟಿಕೋರರ ಪಶ್ಚಾತ್ತಾಪ ಯಾತ್ರೆ: ಶಿವರಾಜ್ ತಂಗಡಗಿ ವ್ಯಂಗ್ಯ

ಬ್ರಿಟಿಷರಿಗೇ ಹೆದರದ ನಮಗೆ ಈ ಬಿಜೆಪಿಗರು ಯಾವ ಪುಟ್ಗೋಸಿ? ಬಿಜೆಪಿ ಒಂದು ನಾಟಕ ಕಂಪನಿ, ಇವರ ಪಾದಯಾತ್ರೆ ಗಣಿ ಲೂಟಿಕೋರರ ಪಶ್ಚಾತ್ತಾಪ ಯಾತ್ರೆ: ಶಿವರಾಜ್ ತಂಗಡಗಿ ವ್ಯಂಗ್ಯ

by Shwetha
August 30, 2026
0

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಬೆನ್ನಿಗೆ ನಿಂತಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram