ಕೊರೊನಾ ಸೋಂಕು ಹರಡದಂತೆ ತಡೆಯಲು ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಆದರೂ ಸಹ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುತ್ತಿಲ್ಲ. ಹಾಗಾಗಿ ಮಾಜಿ ಸಚಿವ ಎಂ.ಬಿ ಪಾಟೀಲ್ ಮಹಾಮಾರಿ ಕೊರೂನಾ ಕಾಯಿಲೆಯಿಂದ ವಿಶ್ವವನ್ನು ರಕ್ಷಿಸಲು ಲಿಂಗ ಪೂಜೆ ಸಲ್ಲಿಸಿದರು. ನಾಡಿನ ಮಠಾಧೀಶರು ನೀಡಿದ ಕರೆ ಓಗೊಟ್ಟ ಎಂ.ಬಿ. ಪಾಟೀಲ್ ಇಂದು ಸಂಜೆ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಸಂಜೆ 7 ಗಂಟೆಗೆ ಲಿಂಗ ಪೂಜೆ ಮಾಡಿದ ಅವರು ಇಡೀ ವಿಶ್ವವನ್ನು ಈ ಮಾರಕ ಕಾಯಿಲೆಯಿಂದ ರಕ್ಷಿಸುವಂತೆ ಪ್ರಾರ್ಥಿಸಿದರು.
ರಾಜ್ಯಸಭೆ ಚುನಾವಣೆ ಘೋಷಣೆ… 10 ರಾಜ್ಯಗಳ 37 ಸದಸ್ಯರ ಅವಧಿ ಮುಕ್ತಾಯ
ಚುನಾವಣಾ ಆಯೋಗ ರಾಜ್ಯಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದ್ದು, ಮಾರ್ಚ್ 16ರಂದು ಮತದಾನ ನಡೆಯಲಿದೆ. ಒಟ್ಟು 10 ರಾಜ್ಯಗಳ 37 ರಾಜ್ಯಸಭಾ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ...








