ಸರ್ಕಾರದಿಂದ ಸಾರಿಗೆಯನ್ನ ಖಾಸಗಿಕರಣ ಮಾಡುವ ಹುನ್ನಾರ : ಕೋಡಿಹಳ್ಳಿ
ಬೆಂಗಳೂರು : ಸಾರಿಗೆಯನ್ನ ಖಾಸಗಿಕರಣ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಕೃಷಿ ಕ್ಷೇತ್ರವನ್ನ ಖಾಸಗೀಕರಣ ಮಾಡುತ್ತಿದೆ.
ಅದರ ಜೊತೆಗೆ ರಾಜ್ಯ ಸರ್ಕಾರವು ಸಾರಿಗೆಯನ್ನ ಖಾಸಗೀಕರಣ ಮಾಡುತ್ತಿದೆ. ಹೀಗಾಗಿ ನಾವು ಖಾಸಗೀಕರಣ ತಪ್ಪಿಸಲು ಪ್ರಯತ್ನ ಮಾಡ್ತಿವಿ.
ಎರಡನೇ ಹಂತದಲ್ಲಿ ನಮ್ಮ ಪ್ರತಿಭಟನೆ ಮುಂದುವರೆಯಲಿದೆ. ನಮ್ಮ ಹೋರಾಟ, ಮುಷ್ಕರ ಹೀಗೆ ಮುಂದುವರೆಯಲಿದೆ ಎಂದು ತಿಳಿಸಿದರು.
ಇದೇ ವೇಳೆ ಸವದತ್ತಿಯಲ್ಲಿ ನೌಕರ ಆತ್ಮಹತ್ಯೆ ವಿಚಾರವಾಗಿ ಮಾತನಾಡಿ, ಯಾರೊಬ್ಬರೂ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಬಾರದು.
ಸರ್ಕಾರ ವೇತನ ಶ್ರೇಣಿಯ ವ್ಯತ್ಯಾಸ ಮಾಡುತ್ತಿದೆ. ದಿಟ್ಟತನದಿಂದ ಹೋರಾಟ ಮಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ.
ಕೃಷಿ ಕ್ಷೇತ್ರದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದರ ಜೊತೆಗೆ ಸಾರಿಗೆ ನೌಕರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದು ವಿಷಾದ ಎಂದರು.
ಇನ್ನು ನೌಕರರಿಗೆ ನೋಟಿಸ್ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ಬೆದರಿಕೆಯ ತಂತ್ರ ಮಾಡುತ್ತಿದೆ. ಇದಕ್ಕೆ ಸಾರಿಗೆ ನೌಕರರು ಹೆದರುವುದಿಲ್ಲ ಎಂದು ಹೇಳಿದ್ದಾರೆ.