ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ರಸಗೊಬ್ಬರ ಬೆಲೆ ಏರಿಕೆ : ನಾಳೆ ರಸಗೊಬ್ಬರ ಕಂಪನಿಗಳ ಜೊತೆ ಸದಾನಂದ ಗೌಡ ಸಭೆ

admin by admin
April 11, 2021
in National, Newsbeat, ದೇಶ - ವಿದೇಶ
Sadananda Gowda
Share on FacebookShare on TwitterShare on WhatsappShare on Telegram

ರಸಗೊಬ್ಬರ ಬೆಲೆ ಏರಿಕೆ : ನಾಳೆ ರಸಗೊಬ್ಬರ ಕಂಪನಿಗಳ ಜೊತೆ ಸದಾನಂದ ಗೌಡ ಸಭೆ

ನವದೆಹಲಿ : ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಶ್ರೀ ಡಿ ವಿ ಸದಾನಂದ ಗೌಡ ಅವರು ಸೋಮವಾರ ಇಲ್ಲಿ ರಸಗೊಬ್ಬರ ಕಾರ್ಖಾನೆಗಳ ಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ಯೂರಿಯಾ ಹೊರತಾದ ವಿವಿಧ ನಮೂನೆಯ ಪೋಷಕಾಂಶ ರಸಗೊಬ್ಬರ ಬೆಲೆಗಳಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸಚಿವರು ಕರೆದಿರುವ ಈ ಸಭೆಗೆ ಮಹತ್ವ ಬಂದಿದೆ.
ಭಾರತವು ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾವಸ್ತುಗಳನ್ನು ಬಹುತೇಕವಾಗಿ ಆಮದು ಮಾಡಿಕೋಳ್ಳುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾವಸ್ತುಗಳ ಬೆಲೆ ತೀವ್ರವಾಗಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಸಗೊಬ್ಬರ ಉತ್ಪಾದನಾ ವೆಚ್ಚವೂ ಅದೇ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಾಗಿ ಎಲ್ಲ ರಸಗೊಬ್ಬರ ಕಂಪನಿಗಳು ತಮ್ಮ ಉತ್ಪನ್ನಗಳ ಬೆಲೆ ಹೆಚ್ಚಿಸಿವೆ. ಆದಾಗ್ಯೂ, ಹಳೆ ದಾಸ್ತಾನನ್ನು ಹಳೆ ದರದಲ್ಲಿಯೇ ಮಾರಾಟ ಮಾಡುವಂತೆ ರಸಗೊಬ್ಬರ ಕಂಪನಿಗಳು ಹಾಗೂ ಆಮದುದಾರರ ಮನ ಒಲಿಸಲು ಕೇಂದ್ರ ಸರ್ಕಾರವು ತೀವ್ರ ಪ್ರಯತ್ನ ನಡೆಸಿದೆ.
ಇಂದು ಇಲ್ಲಿ ಪತ್ರಿಕಾ ಹೇಳಿಕೆಯೊಂದನ್ನು ನೀಡಿರುವ ಸದಾನಂದ ಗೌಡ ಅವರು ಸಾರ್ವಜನಿಕ ವಲಯದ ರಸಗೊಬ್ಬರ ಕಂಪನಿಗಳ ಹೊರತಾಗಿ ಸಹಕಾರಿ ವಲಯದ ಇಫ್ಕೋ ಕಂಪನಿಯು ಹಳೆ ದಾಸ್ತಾನನ್ನು ಹಳೆ ದರದಲ್ಲಿಯೇ ಮಾರಾಟ ಮಾಡಲು ಒಪ್ಪಿಕೊಂಡಿದ್ದು ಈಗಾಗಲೇ ತನ್ನ ನಿರ್ಧಾರವನ್ನು ಕಾರ್ಯಗತಗೊಳಿಸಿದೆ ಎಂದರು.

Related posts

Try this one thing and Goddess Lakshmi of good fortune will knock on your door..

ಈ ಒಂದು ಕೆಲಸ ಮಾಡಿ ನೋಡಿ ನಿಮ್ಮ ಮನೆಯಲ್ಲಿ ಅದೃಷ್ಟದ ಲಕ್ಷ್ಮಿ ನಿಮ್ಮ ಮನೆ ಬಾಗಿಲನ್ನ ತಟ್ಟುತ್ತಾಳೆ …

February 12, 2026
cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

February 12, 2026

ದೇಶದಲ್ಲಿ ಹಳೆ ದಸ್ತಾನು ಸುಮಾರು ಒಂದುವರೆ ತಿಂಗಳಿಗೆ ಸಾಕಾಗುವಷ್ಟಿದೆ. ಇಫ್ಕೋ ಬಳಿ 11.26 ಲಕ್ಷ ಟನ್ ಎನ್ಪಿಕೆ, ಡಿಏಪಿ ಮತ್ತಿತರ ನಮೂನೆಯ ಪೋಷಕಾಂಶಯುಕ್ತ ರಸಗೊಬ್ಬರಗಳ ಹಳೆ ದಸ್ತಾನು ಇದೆ. ರಾಜ್ಯದಲ್ಲಿಯೇ1.22 ಲಕ್ಷ ಟನ್ ದಾಸ್ತಾನಿದೆ. 50 ಕೆಜಿ ಡಿಎಪಿ ಮೂಟೆಯೊಂದಕ್ಕೆ 1200 ರೂಗೆ (ಹಳೆ ದರ) ಮಾರಾಟಮಾಡಲಾಗುತ್ತಿದೆ. ಅದೇ ರೀತಿ ‘ಎನ್ಪಿಕೆ-10-26-26’ ನಮೂನೆ ರಸಗೊಬ್ಬರ ಮೂಟೆಗೆ 1175 ರೂ, ‘ಎನ್ಪಿಕೆ-12-32-16’ಗೆ 1185 ರೂ, ‘ಎನ್ಪಿ-20-20.0.13’ಗೆ 925 ರೂ ಹಾಗೂ 15:15:15 ನಮೂನೆ ರಸಗೊಬ್ಬರಕ್ಕೆ 1025 ರೂ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಹಳೆದಾಸ್ತಾನು ಮುಗಿಯುವ ತನಕ ಹಳೆ ದರವೇ ಇರಲಿದ್ದು ರೈತರು ಇದರ ಉಪಯೋಗ ಪಡೆಯಬೇಕಿದೆ ಎಂದರು.

Sadananda Gowda

ದೇಶದ ವಿವಿಧ ರಾಜ್ಯಗಳ ಬೇಡಿಕೆ ಅನುಗುಣವಾಗಿ ರಸಗೊಬ್ಬರ ಸರಬರಾಜು ಆಗುವಂತೆ ಇಲಾಖೆಯು ಮೇಲುಸ್ತುವಾರಿ ವಹಿಸುತ್ತದೆಯಾದರೂ ಇದು ಅನಿಯಂತ್ರಿತ ವಲಯದಲ್ಲಿರುವುದರಿಂದ ಬೆಲೆ ನಿಗದಿ ಪಡಿಸುವಲ್ಲಿ ಸರ್ಕಾರದ ನೇರ ಪಾತ್ರವೇನೂ ಇರುವುದಿಲ್ಲ. ಆದಾಗ್ಯೂ ರಸಗೊಬ್ಬರ ಕಂಪನಿಗಳು ಗರಿಷ್ಠ ಮಾರಾಟ ಬೆಲೆಯನ್ನು ಉತ್ಪಾದನಾ ವೆಚ್ಚಕ್ಕಿಂತ ಮನಬಂದಂತೆ ಏರಿಸದಂತೆ ಸರ್ಕಾರ ನಿಗಾವಹಿಸುತ್ತದೆ. ಕಂಪನಿಗಳು ಪ್ರಮಾಣಿಕೃತ ಉತ್ಪಾದನಾ ವೆಚ್ಚಕ್ಕಿಂತ ಹೆಚ್ಚುವರಿಯಾಗಿ ನಿಗದಿತ ಪ್ರಮಾಣದಲ್ಲಿಯಷ್ಟೇ ಲಾಭಾಂಶ ಇಟ್ಟುಕೊಳ್ಳಬಹುದಾಗಿದೆ. ಸರಳವಾಗಿ ಹೇಳಬೇಕೆಂದರೆ ಗರಿಷ್ಠ ಮಾರಾಟ ಬೆಲೆ ಉತ್ಪಾನಾ ವೆಚ್ಚದ ಮೇಲೆ ಅವಲಂಬಿಸಿದೆ.

ರೈತರಿಗೆ ಹೊರೆಯಾಗಬಾರದು ಎಂಬ ದೃಷ್ಟಿಯಿಂದ ಕೇಂದ್ರ ಸರ್ಕಾರವು ರಸಗೊಬ್ಬರಕ್ಕೆ ದೊಡ್ಡ ಪ್ರಮಾಣದಲ್ಲಿ ಸಬ್ಸಿಡಿ ನೀಡುತ್ತದೆ. ಇದಕ್ಕಾಗಿ ಪ್ರತಿವರ್ಷ ಸರಾಸರಿ ಏನಿಲ್ಲವೆಂದರೂ 75000 ಕೋಟಿ ರೂಪಾಯಿ ಒದಗಿಸುತ್ತದೆ. ಉದಾಹರಣೆಗೆ ಪೋಷಕಾಂಶ ಆಧಾರಿತ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ‘ನೈಟ್ರೋಜನ್’ಗೆ ಟನ್ ಒಂದಕ್ಕೆ 18,789 ರೂ ಸಬ್ಸಿಡಿ ಒದಗಿಸಲಾಗುತ್ತಿದೆ. ಅದೇ ರೀತಿ ‘ಫೊಸ್ಫೇಟ್’ಗೆ (ಒಂದು ಟನ್ ಗೆ) 14,888 ರೂ, ‘ಫೊಟಾಷ್’ಗೆ 10,116 ರೂ ಹಾಗೂ ‘ಸಲ್ಫರ್’ಗೆ 2,374 ರೂ ಸಬ್ಸಿಡಿ ನೀಡುತ್ತಿದ್ದೇವೆ ಎಂದು ಸದಾನಂದ ಗೌಡ ವಿವರಿಸಿದರು.

ನಮ್ಮ ರಸಗೊಬ್ಬರ ಇಲಾಖೆಯು ಕಳೆದ ಸಾಲಿನಲ್ಲಿ ಕೋವಿಡ್ ಸಾಂಕ್ರಾಮಿಕದ ಹೊರತಾಗಿಯೂ ದೇಶದ ಯಾವುದೇ ಭಾಗದಲ್ಲಿಯೂ ರಸಗೊಬ್ಬರ ಕೊರತೆ ಆಗದಂತೆ ನೋಡಿಕೊಂಡಿತು. ಯೂರಿಯಾ ಮತ್ತಿತರ ನಮೂನೆಯ ರಸಗೊಬ್ಬರಗಳ ಮಾರಾಟದಲ್ಲಿ ಶೇಕಡಾ 17ರಿಂದ ಶೇಕಡಾ 42ರಷ್ಟು ಹೆಚ್ಚಳ ಕಂಡುಬಂತು. ಇದರಿಂದ ರೈತರು ಬಂಪರ್ ಬೆಳೆ ಬೆಳೆಯಲು ಸಾಧ್ಯವಾಯಿತು. ಮುಂಬರುವ ಮುಂಗಾರು ಬೆಳೆ ಹಂಗಾಮಿನಲ್ಲಿಯೂ ರಸಗೊಬ್ಬರ ಸರಬರಾಜಿನಲ್ಲಿ ಸ್ವಲ್ಪವೂ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು. ಕೃಷಿ ಇಲಾಖೆ ಈಗಾಗಲೇ ಮುಂಗಾರು ಹಂಗಾಮಿಗೆ ಎಷ್ಟು ರಸಗೊಬ್ಬರ ಬೇಕು ಎಂಬ ಬಗ್ಗೆ ಬೇಡಿಕೆ ಸಲ್ಲಿಸಿದೆ. ಇದಕ್ಕೆ ಅನುಗುಣವಾಗಿ ಸರಬರಾಜು ಮಾಡಲು ತಯಾರಿ ಆರಂಭಿಸಲಾಗಿದೆ. ಸೋಮವಾರದ ಸಭೆಯಲ್ಲಿಯೂ ಈ ವಿಷಯ ಮತ್ತೊಮ್ಮೆ ಚರ್ಚೆಯಾಗಲಿದೆ ಎಂದು ಕೇಂದ್ರ ಸಚಿವರು ತಿಳಿಸಿದರು.

lock

 

Tags: BJPMeetingSadanandagouda
ShareTweetSendShare
Join us on:

Related Posts

Try this one thing and Goddess Lakshmi of good fortune will knock on your door..

ಈ ಒಂದು ಕೆಲಸ ಮಾಡಿ ನೋಡಿ ನಿಮ್ಮ ಮನೆಯಲ್ಲಿ ಅದೃಷ್ಟದ ಲಕ್ಷ್ಮಿ ನಿಮ್ಮ ಮನೆ ಬಾಗಿಲನ್ನ ತಟ್ಟುತ್ತಾಳೆ …

by admin
February 12, 2026
0

ಕೆಲವೊಬ್ಬರ ಮನೆಯಲ್ಲಿ ಚೆನ್ನಾಗಿ ನಡೆಯುತ್ತಿದ್ದ ಕೆಲಸ ಕಾರ್ಯಗಳು ಆಕಸ್ಮಿಕವಾಗಿ ಎಲ್ಲವೂ ಉಲ್ಟಾಪಲ್ಟಾ ಆಗಿಹೋಗುತ್ತದೆ. ಇಷ್ಟೇ ಅಲ್ಲದೆ ಕೆಲವೊಂದು ಬಾರಿ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತಮ್ಮದೇ ಮನೆಯಲ್ಲಿ...

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

by admin
February 12, 2026
0

ನಾವೆಲ್ಲಾ ಒಂದಾಗಿ ಆಟನಾ ಆಡೋಣ... ಜೊತೆಯಾಗಿ ಆಡುತ್ತಾ ಸ್ನೇಹನಾ ಬೆಳೆಸೋಣ..ಅದಕ್ಕಾಗಿ ಸೇರೋಣ.. ಒಂದಾಗಿ ಗೆಲ್ಲೋಣ... ಸೌರ್ಹಾದತೆಯ ಸಂದೇಶವನ್ನು ಸಾರೋಣ.. ಹೊಸ ಪರಂಪರೆಗೆ ಮುನ್ನಡಿ ಬರೆಯೋಣ...! ಶಟಲ್ ಕಾಕ್‍ನ...

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

by Shwetha
February 12, 2026
0

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ 118 ವಿರೋಧ ಪಕ್ಷದ ಸಂಸದರು ಸಲ್ಲಿಸಿದ್ದ ಪದಚ್ಯುತಿ ನೋಟಿಸ್‌ನಲ್ಲಿ ತಾಂತ್ರಿಕ ದೋಷಗಳು ಪತ್ತೆಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ....

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

by Shwetha
February 12, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಒಳಜಗ್ಗಾಟ ಇದೀಗ ದೆಹಲಿಗೆ ಶಿಫ್ಟ್ ಆದಂತಾಗಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಗರಿಗೆದರಿದ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿಕೆ...

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

by Shwetha
February 12, 2026
0

ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷಗಳ ಬಾಕಿಯಿರುವಾಗಲೇ ಮೈಸೂರು ಭಾಗದ ರಾಜಕಾರಣ, ವಿಶೇಷವಾಗಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ರಣರಂಗವಾಗಿ ಮಾರ್ಪಟ್ಟಿದೆ. ಜೆಡಿಎಸ್‌ನ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram