ಕಲಬುರಗಿ : ಇಂದು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 129ನೇ ಜನ್ಮದಿನ. ಈ ಹಿನ್ನಲೆ 40 ವರ್ಷ ಹಳೆಯ ಫೋಟೋವೊಂದನ್ನು ಮಾಜಿ ಸಚಿವ, ಶಾಸಕ ಪ್ರಿಯಾಂಕ್ ಖರ್ಗೆ ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದಾರೆ.
ಖರ್ಗೆ ಅವರ ಟ್ವೀಟ್ ನಲ್ಲಿ ಸದ್ಯ ವಿಧಾನ ಸೌಧದ ಮುಂದೆ ಪ್ರತಿಷ್ಠಾಪಿಸಲಾಗಿರುವ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ ಅವರ ಪ್ರತಿಮೆ ನಿರ್ಮಾಣ ಹಂತದ ಪರಿಶೀಲನೆಗಾಗಿ ಕಾಂಗ್ರೆಸ್ ನಾಯಕರಾದ ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಎನ್. ಧರ್ಮಸಿಂಗ್ 40 ವರ್ಷಗಳ ಹಿಂದೆ ಮುಂಬೈಗೆ ತೆರಳಿದಾಗ ತೆಗೆದ ಅಪರೂಪದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಅಂಬೇಡ್ಕರ್ ಅವರನ್ನು ಸ್ಮರಿಸಿದ್ದಾರೆ.








