ರಾಯಚೂರು : ಮಸ್ಕಿ ವಿಧಾನಸಭಾ ಉಪಚುನಾವಣೆಗೆ ಮತದಾನ ನಡೆಯುತ್ತಿದ್ದು, ಕುರುಕುಂದಾ ಗ್ರಾಮದ ಮತಗಟ್ಟೆ ಬಳಿ ಪೊಲೀಸರೊಂದಿಗೆ ಕಾಂಗ್ರೆಸ್ ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ. ಕುರುಕುಂದಾ ಗ್ರಾಮದ ಮತಗಟ್ಟೆ ಬಳಿ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನ ಬಿಡುತ್ತಿರುವುದುಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ವಾಗ್ವಾದ ನಡೆಸಿದ್ದಾರೆ.
ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನ ಮಾತ್ರ ಮತಗಟ್ಟೆಯಿಂದ ದೂರು ಕಳಿಸಿ, ಬಿಜೆಪಿಯವರನ್ನ ಮತಗಟ್ಟೆ ಹತ್ತಿರ ಹೋಗಲು ಅವಕಾಶ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತೆ ಪದ್ಮಾವತಿ ಆರೋಪಿಸಿದ್ದಾರೆ.








