ಕೊರೊನಾ ವೈರಸ್ ನಿಂದ ಬಿಕ್ಕಟ್ಟು ಸೃಷಿಯಾಗಿದೆ. ಸೋಂಕು ನಿಯಂತ್ರಣ ಮಾಡಲು ಲಾಕ್ ಡೌನ್ ಮಾಡಲಾಗಿದೆ. ಇದರಿಂದ ದೇಶ ಕಾರ್ಮಿಕರು ಸಾಕಷ್ಟು ತೊಂದರೆಯಲ್ಲಿ ಇದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಕೊರೊನಾ ವೈರಸ್ ನಿಂದಾಗಿ ಬಿಕ್ಕಟ್ಟು ಸೃಷ್ಟಿಯಾಗಿದೆ. ಲಾಕ್ ಡೌನ್ ಕಾರಣಕ್ಕಾಗಿ ವ್ಯಾಪಾರ, ವ್ಯವಹಾರಗಳು ಸ್ಥಗಿತಗೊಂಡಿವೆ. ಕಾರ್ಮಿಕರು ಸಂಕಷ್ಟ ಎದುರಿಸುತ್ತಿದ್ದಾರೆ. ಅಲ್ಲದೆ ಲಾಕ್ ಡೌನ್ ಆಗಿರುವ ಕಾರಣಕ್ಕೆ ಕಾರ್ಮಿಕರು ತಮ್ಮ ಮನೆಗಳಿಗೆ ಮರಳಲು ಹತಾಶರಾಗಿದ್ದಾರೆ. ಅವರಿಗೆ ಹೆಚ್ಚಿನ ಸಹಾಯದ ಅಗತ್ಯವಿದೆ.ನಮ್ಮ ಸಹೋದರ-ಸಹೋದರಿಯರನ್ನು ಮನೆಗೆ ಕರೆತರಲು ಸರ್ಕಾರವು ವಿಮಾನಯಾನಗಳನ್ನು ಆಯೋಜಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...








