ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಭಾರತದ ಮಾರ್ಕೊಸ್ ಕಮಾಂಡೋ ಪಡೆಯ ಭಯಾನಕ ತರಬೇತಿ ಬಗ್ಗೆ ನಿಮಗೆಷ್ಟು ಗೊತ್ತು…!

Namratha Rao by Namratha Rao
April 22, 2021
in National, Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ನಾವುನೆಮ್ಮದಿಯಿಂದ ಇರಲು ನಮ್ಮ ದೇಶದ ಭದ್ರತಾ ಪಡೆಗಳು ಬಹುಮುಖ್ಯ ಪಾತ್ರ ವಹಿಸುತ್ತವೆ. ಅದರಲ್ಲೂ ದೇಶದ ವಿಶೇಷ ಭದ್ರತಾ ಪಡೆಗಳ ಕಾರ್ಯ ಮೈ ನವಿರೇಳುವಂತೆ ಮಾಡುತ್ತದೆ.

ಇಂಥದ್ದೇ ವಿಶೇಷ ಭದ್ರತಾ ಪಡೆಗಳಲ್ಲೊಂದು ಮಾರ್ಕೊಸ್ ಕಮಾಂಡೋ ಫೋರ್ಸ್, ಈ ಪಡೆಯು ಭಯಾನಕವಾದ ಪಡೆಗಳಲ್ಲಿ ಒಂದಾಗಿದೆ. ಮಾರ್ಕೊಸ್ ಪಡೆ ಆಧುನಿಕ ರೀತಿಯ ಎಲ್ಲ ತರಬೇತಿಯನ್ನೂ ಹೊಂದಿವೆ. ಮಾರ್ಕೊಸ್ ಫೋರ್ಸ್ ನಲ್ಲಿ ಸೇರುವುದು ಸುಲಭವಾದ ಕೆಲಸವಲ್ಲ.

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ಏಕೆಂದರೆ ಇದರ ತರಬೇತಿ ಜಗತ್ತಿನಲ್ಲಿ ಎಲ್ಲ ತರಬೇತಿಗಳಿಗಿಂತ ತುಂಬಾ ಭಯಾನಕವಾಗಿದೆ. ಇಲ್ಲಿ ಕಮಾಂಡೋಗಳಿಗೆ ಮಾನಸಿಕ ಮತ್ತು ಶಾರೀರಿಕ ಕ್ರೂರತೆಗೆ ಹೆಚ್ಚು ಒತ್ತು ನೀಡಿ ತರಬೇತಿ ನೀಡಲಾಗುತ್ತೆ. ಇದರಿಂದ ಎಂಥ ಕಠಿಣ ಪರಿಸ್ಥಿತಿ ಬಂದರೂ ಮುನ್ನುಗ್ಗುವ ಮನಸ್ಸು ಕಮಾಂಡೋಗಳಿಗೆ ಸಾಧ್ಯವಾಗುತ್ತದೆ.

ಇದು ಭಾರತದ ವಿಶೇಷವಾದ ಮತ್ತು ಶಕ್ತಿಶಾಲಿ ಪಡೆಯಾಗಿದೆ. ಮಾರ್ಕೋಸ್ ಫೋರ್ಸ್ ಭಾರತೀಯ ನೌಕಾಪಡೆಯ ವಿಶೇಷ ಭದ್ರತಾ ಪಡೆ. ಭಾರತದ ಹೆಮ್ಮೆಯ ಮಾರ್ಕೋಸ್ ಪಡೆ ವಿಶ್ವದ ೧೦ ವಿಶೇಷ ಭದ್ರತಾ ಪಡೆಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಈ ಪಡೆಯನ್ನು‌ ಮೊದಲು‌ ಮರೈನ್ ಕಮಾಂಡೋ ಎಂದು ಕರೆಯಲಾಗುತ್ತಿತ್ತು.

ದಿ ಫೆವ್ ದಿ ಫಿಯರ್ಲೆಸ್ ಎಂಬುದು ಮಾರ್ಕೋಸ್ ಪಡೆಯ ಧ್ಯೇಯವಾಕ್ಯ. ಅತಿ ಕಠಿಣ ತರಬೇತಿ ಪಡೆದ ಬಳಿಕವಷ್ಟೇ ಇವರನ್ನು ಸೇವೆಗೆ ನಿಯೋಜಿಸಲಾಗುತ್ತದೆ. ಮೈ‌ನವಿರೇಳಿಸುವ ಕಠಿಣ ತರಬೇತಿಯಲ್ಲಿ ಕೆಲವರು‌ ಮಾತ್ರ ಆಯ್ಕೆಯಾಗುತ್ತಾರೆ.

ಮಾರ್ಕೋಸ್ ಪಡೆಯ ಕಾರ್ಯಾಚರಣೆ ಗುಪ್ತವಾಗಿರುತ್ತದೆ. ಇನ್ನೂ ಅಚ್ಚರಿ ಎನಿಸುವ ವಿಚಾರವಂದ್ರೆ ಮಾರ್ಕೋಸ್ ಸೈನಿಕರ ಮನೆಯವರಿಗೆ ಸಹ ಅವರು ಮಾರ್ಕೋಸ್ ಪಡೆಯಲ್ಲಿರುವುದು ತಿಳಿದಿರುವುದಿಲ್ಲ.

ಮುಂಬೈ, ಕೊಚ್ಚಿನ್ ಮತ್ತು ವಿಶಾಖಪಟ್ಟಣಂ ಮತ್ತಯ ಪೋರ್ಟ್ ಬ್ಲೇರ್ ನಲ್ಲಿರುವ ಭಾರತೀಯ ನೌಕಾಸೇನೆಯ ನೆಲೆಯಲ್ಲಿ ಇವರು ನೆಲೆಸಿರುತ್ತಾರೆ. ಕಠಿಣ ಪರಿಸ್ಥಿತಿ ಎದುರಾದ ಕೆಲವೇ ನಿಮಿಷಗಳಲ್ಲಿ ಆ ಸ್ಥಳ ತಲುಪಿ ಪ್ರಾಣ ಪಣಕ್ಕಿಟ್ಟು ದೇಶಕ್ಕಾಗಿ ಹೋರಾಡುತ್ತಾರೆ. ಇವರು ಅದೆಷ್ಟರ ಮಟ್ಟಿಗೆ ಗಟ್ಟಿಗರಾಗಿರುತ್ತಾರೆಂದರೆ, ಇವರ ಕೈ ಕಾಲು ಕಟ್ಟಿ ಸಮುದ್ರಕ್ಕೆಸೆದರೂ ಕಟ್ಟು ಬಿಚ್ಚಿಕೊಂಡು ಕೆಲವೇ ಕ್ಷಣಗಳಲ್ಲಿ ಮೇಲಕ್ಕೆ ಬರುತ್ತಾರೆ.

ಇವರನ್ನು ಎಲ್ಲ ತರಹದ ಕಾರ್ಯಾಚರಣೆಗೆ ಬಳಸಲಾಗುತ್ತದೆ. ಮಾರ್ಕೋಸ್ ಪಡೆ ಪಾಲ್ಗೊಂಡ ಕಾರ್ಯಾಚರಣೆ ಫೇಲ್ ಆಗುವುದರಲ್ಲಿ ಛಾನ್ಸೇ ಇಲ್ಲ. ಈ ಪಡೆ ನಮ್ಮ ದೇಶದ ಹೆಮ್ಮೆ ಎಂದರೆ ತಪ್ಪಾಗಲಾರದು. ಇತ್ತೀಚೆಗಷ್ಟೇ ನಡೆದ ಭಾರತ-ಚೀನಾ ಗಡಿ ಗಲಾಟೆಯಲ್ಲಿ ಮಾರ್ಕೋಸ್ ಪಡೆಯನ್ನು ಪ್ಯಾಂಗಾಂಗ್ ಸರೋವರದ ಬಳಿ ನಿಯೋಜಿಸಲಾಗಿತ್ತು.

ಮುಂಬೈ ಭಯೋತ್ಪಾದನಾ ದಾಳಿ ಸೇರಿದಂತೆ ಬಹುತೇಕ ಕಡೆಗಳಲ್ಲಿ ಈ ಪಡೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದೆ. ಇನ್ನು ನಿಮಗೆ ಮಾರ್ಕೋಸ್ ಕಮಾಂಡೋ ಆಗಿ ದೇಶ ಸೇವೆ ಮಾಡುವ ಆಸೆಯಿದ್ದಲ್ಲಿ ಮೊದಲು ಭಾರತೀಯ ನೌಕಾಸೇನೆ ಸೇರಬೇಕು. ನಾಲ್ಕು ಹಂತಗಳಲ್ಲಿ ಮಾರ್ಕೋಸ್ ಕಮಾಂಡೋ ಆಯ್ಕೆ ನಡೆಯುತ್ತದೆ. ಮೊದಲ ಹಂತದಲ್ಲಿ ಆಪ್ಟಿಟ್ಯೂಡ್ ಮತ್ತು ಫಿಸಿಕಲ್ ಟೆಸ್ಟ್ ನಲ್ಲಿ ತೇರ್ಗಡೆಯಾಗಬೇಕು.

ಇದರಲ್ಲಿ ಆಯ್ಕೆಯಾದವರಿಗೆ ಎರಡನೇ ಹಂತದಲ್ಲಿ ಐದು ವಾರಗಳ ಕಠಿಣ ತರಬೇತಿ ಇರುತ್ತದೆ. ಈ ಹಂತದಲ್ಲಿ ಕೆಡೆಟ್ಗಳಿಗೆ ಕೇವಲ ೨-೩ ತಾಸು‌ ನಿದ್ರಿಸಲು ಅವಕಾಶ ನೀಡಿ ಕಠಿಣ ತರಬೇತಿ ನೀಡಲಾಗುತ್ತದೆ. ಈ ತರಬೇತಿಯನ್ನು ಯಶಸ್ವಿಯಾಗಿ ಪೂರೈಸುವ ಕೆಲವೇ ಕೆಡೆಟ್ ಗಳನ್ನು‌ ಮುಂದಿನ ಹಂತದ ತರಬೇತಿಗಾಗಿ ಕೊಚ್ಚಿನ್ ನಲ್ಲಿರುವ ಡೈವಿಂಗ್ ಸ್ಕೂಲ್ ಗೆ ಕಳಿಸಲಾಗುತ್ತದೆ.

ಇದಾದ ಬಳಿಕ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡುವುದರ ಬಗ್ಗೆಯೂ ತರಬೇತಿ ನೀಡಲಾಗುತ್ತದೆ. ನಂತರ ಭಾರತೀಯ ಭೂಸೇನೆಯಲ್ಲಿ ಪ್ಯಾರಾಶೀಟ್ ತರಬೇತಿಗಾಗಿ ಕಳಿಸಲಾಗುತ್ತದೆ. ಕೊನೆಗೆ ಜಂಗಲ್ ವಾರ್ ಟೆಕ್ನಿಕ್ಸ್ ಟ್ರೇನಿಂಗ್ ನೀಡಲಾಗುತ್ತದೆ. ಮೈ ಝುಂ‌ಎನ್ನಿಸುವ ಕಠಿಣ ತರಬೇತಿಯನ್ನು ಪಡೆದು ಪ್ರಾಣವನ್ನು ಪಣಕ್ಕಿಟ್ಟು ದೇಶಕ್ಕಾಗಿ ಹೋರಾಡುವ ಈ ವಿಶೇಷ ಭದ್ರತಾ ಪಡೆ ನಮ್ಮ ಹೆಮ್ಮೆ. ಮುಂದಿನ‌ಸಂಚಿಕೆಯಲ್ಲಿ ಮತ್ತೊಂದು ವಿಶೇಷ ಭದ್ರತಾ ಪಡೆಯ ಬಗ್ಗೆ ತಿಳಿಯೋಣ.

Tags: difficult trainingINDIAN ARMYmarcos comandomilitaryspecial defence force
ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram