ADVERTISEMENT
Tuesday, July 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೋನಾ ಸೋಂಕು ಧೃಡಪಟ್ಟರೆ ಏನು ಮಾಡಬೇಕು? ಇಲ್ಲಿದೆ ಆರೋಗ್ಯ ತಜ್ಞರ ಮಾಹಿತಿ

Shwetha by Shwetha
April 26, 2021
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
if u test covid positive
Share on FacebookShare on TwitterShare on WhatsappShare on Telegram

ಕೊರೋನಾ ಸೋಂಕು ಧೃಡಪಟ್ಟರೆ ಏನು ಮಾಡಬೇಕು? ಇಲ್ಲಿದೆ ಆರೋಗ್ಯ ತಜ್ಞರ ಮಾಹಿತಿ

ಭಾರತದಲ್ಲಿ, ಕೊರೋನವೈರಸ್ ಸೋಂಕಿನ ಎರಡನೇ ಅಲೆಯು ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯನ್ನು ಹೆಚ್ಚಿಸುತ್ತಿದೆ. ಅನೇಕ ಸಂದರ್ಭಗಳಲ್ಲಿ, ರೋಗಿಗಳ ಸಂಖ್ಯೆಗಳಲ್ಲಿನ ಹೆಚ್ಚಳದ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ದಾಖಲಾತಿ ಕಷ್ಟಕರವಾಗಿದೆ.
ಆದರೆ ಕೊರೋನಾ ಸೋಂಕಿಗೆ ಮನೆಯಲ್ಲಿ ಅಥವಾ ಆಸ್ಪತ್ರೆಯಲ್ಲಿ ಪಡೆಯುವ ಚಿಕಿತ್ಸೆಯ ಸಮಯವು ಅತ್ಯಂತ ಮುಖ್ಯವಾಗಿರುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ವೈದ್ಯರು ಒಪಿಡಿ ರೋಗಿಗಳಂತೆ ಚಿಕಿತ್ಸೆ ನೀಡಬಹುದು ಮತ್ತು ಅವರು ಮನೆಯಲ್ಲಿ ಕ್ವಾರಂಟೈನ್ ಗೆ ಒಳಗಾಗಬಹುದು.

Related posts

King Mohammed VI sent congratulations to Morocco’s national football team

FIFAWORLDCUP2026- ರಾಜನ ದೂರದೃಷ್ಟಿಯ ಯುಕ್ತಿ…! ಬಿಳಿ ಚಿನ್ನದ ಶಕ್ತಿ..! ಭಾರತಕ್ಕೆ ಪಾಠವಾಗಲಿದೆ ಮೊರಾಕ್ಕೋ ಫುಟ್‍ಬಾಲ್ ಕ್ರಾಂತಿ..!

July 6, 2026
ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

July 6, 2026

ನೀವು ತಿಳಿದುಕೊಳ್ಳಬೇಕಾದದ್ದು ಇಲ್ಲಿದೆ:

ಕೊರೋನವೈರಸ್ ಸೋಂಕಿಗೆ ಒಳಗಾದ ನಂತರ ಸೋಂಕಿತರು ಯಾವಾಗ ಮನೆಯಲ್ಲಿ ಉಳಿಯಬಹುದು?
ಮನೆಯಲ್ಲಿ ಕಾಳಜಿ ವಹಿಸುವುದು ಹೇಗೆ?
ಕೆಲವು ರೋಗಲಕ್ಷಣಗಳು ಕಾಣಿಸಿಕೊಂಡ ನಂತರ ಆಸ್ಪತ್ರೆಗೆ ಭೇಟಿ ನೀಡುವುದು ಯಾವಾಗ?
if u test covid positive

ಏನು ಮಾಡಬೇಕು ?

ಕೊರೋನಾ ಸೋಂಕಿತರು ಲಘುವಾದ ರೋಗಲಕ್ಷಣಗಳನ್ನು ಹೊಂದಿದ್ದರೆ ಮನೆಯಲ್ಲಿಯೇ ಇದ್ದು ಚಿಕಿತ್ಸೆ ಪಡೆಯಬಹುದು.
ಇದಕ್ಕಾಗಿ ಬಾತ್ ರೂಂ ಹೊಂದಿರುವ ಪ್ರತ್ಯೇಕ ಕೋಣೆಯಲ್ಲಿ ಕ್ವಾರಂಟೈನ್ ಆಗಬೇಕು.
ಸ್ವಲ್ಪ ಜ್ವರ ಇದ್ದರೆ ಪ್ಯಾರೆಸಿಟಮಾಲ್ ಅನ್ನು ತೆಗೆದುಕೊಳ್ಳಬಹುದು.
ಜ್ವರ ಮತ್ತು ಆಮ್ಲಜನಕದ ಮಟ್ಟವನ್ನು ದಿನಕ್ಕೆ ಕನಿಷ್ಠ 10-15 ಬಾರಿ ಪರಿಶೀಲಿಸಿ. ಅದಕ್ಕಾಗಿ ಮೊಬೈಲ್‌ನಲ್ಲಿ ಆ್ಯಪ್ ಅನ್ನು ಇನ್ ಸ್ಟಾಲ್ ಮಾಡಬಹುದು.
ಆಮ್ಲಜನಕದ ಮಟ್ಟವು 94-100ರ ನಡುವೆ ಇದ್ದರೆ ಚಿಂತಿಸಬೇಕಾಗಿಲ್ಲ. ಅದು 94 ಕ್ಕಿಂತ ಕಡಿಮೆಯಾದರೆ ವೈದ್ಯರನ್ನು ಸಂಪರ್ಕಿಸಬೇಕು.
ಈ ಸಮಯದಲ್ಲಿ ಹೆಚ್ಚು ದ್ರವ ಆಹಾರವನ್ನು ಸೇವಿಸುವುದು ಉತ್ತಮ. ಇದರಿಂದಾಗಿ ಆಹಾರವನ್ನು ಜೀರ್ಣಿಸಿಕೊಳ್ಳಲು ಸುಲಭ. ಜೊತೆಗೆ ಕನಿಷ್ಠ 8-10 ಗ್ಲಾಸ್ ನೀರನ್ನು ಕುಡಿಯಿರಿ.

ಏನು ಮಾಡಬಾರದು

ಲಘ ರೋಗಲಕ್ಷಣಗಳನ್ನು ಹೊಂದಿದ್ದರೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಸ್ಟೀರಾಯ್ಡ್ಗಳು ಅಥವಾ ರೆಮ್ಡೆಸಿವಿರ್ ತೆಗೆದುಕೊಳ್ಳಬಾರದು
ರೋಗಲಕ್ಷಣಗಳು ತೀವ್ರವಾಗಿದ್ದರೆ ಕಾಲಕಾಲಕ್ಕೆ ವೈದ್ಯರೊಂದಿಗೆ ಸಂಪರ್ಕದಲ್ಲಿರಬೇಕು.

ವೈರಲ್ ಅಧಿಕವಾಗಿದ್ದರೆ, ಕನಿಷ್ಠ 5-7 ದಿನಗಳವರೆಗೆ ಜ್ವರ ಬರುತ್ತದೆ ಮತ್ತು ಆಮ್ಲಜನಕದ ಮಟ್ಟವು ಇದನ್ನು ತೋರಿಸುತ್ತದೆ. ಆದ್ದರಿಂದ, ಜ್ವರ ಮತ್ತು ಆಮ್ಲಜನಕದ ಮಟ್ಟವನ್ನು ಪರೀಕ್ಷಿಸುತ್ತಲೇ ಇರಬೇಕು.

ಆಮ್ಲಜನಕದ ಮಟ್ಟವು ನಿರಂತರವಾಗಿ ಕಡಿಮೆಯಾಗುತ್ತಿದ್ದರೆ, ತಕ್ಷಣ ಆಸ್ಪತ್ರೆಗೆ ಹೋಗಬೇಕು.

ಇದಕ್ಕಾಗಿ, ಮೊದಲು, ಹಾಸಿಗೆಗಳ ಲಭ್ಯತೆಗೆ ಸಂಬಂಧಿಸಿದಂತೆ ಹತ್ತಿರದ ಆಸ್ಪತ್ರೆಯೊಂದಿಗೆ ವಿಚಾರಿಸಬೇಕು.

ಯಾವ ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ಐಸಿಯು ಅಥವಾ ಆಮ್ಲಜನಕ ಹಾಸಿಗೆಗಳಿವೆ ಎಂದು ತಿಳಿಯಬೇಕು.
if u test covid positive

ಆಮ್ಲಜನಕ ಸಿಲಿಂಡರ್ಗಾಗಿ, ನೀವು ಸರ್ಕಾರಿ ಸಂಸ್ಥೆಗಳನ್ನು ಸಂಪರ್ಕಿಸಬೇಕಾಗುತ್ತದೆ. ಸರಿಯಾದ ಸಮಯದಲ್ಲಿ ರೋಗಿ ಆಮ್ಲಜನಕ ಪೂರೈಕೆಯನ್ನು ಪಡೆಯುವುದು ಮುಖ್ಯ.

ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಯಾವುದೇ ಔಷಧಿಗಳನ್ನು ತೆಗೆದುಕೊಳ್ಳಬಾರದು.

ಗೂಗಲ್ ನಲ್ಲಿ ಸರ್ಚ್ ಮಾಡಿ ಯಾವುದೇ ಔಷಧಿ ತೆಗೆದುಕೊಳ್ಳಬೇಡಿ. ಬದಲಾಗಿ, ನಿಮ್ಮ ಕುಟುಂಬ ವೈದ್ಯರೊಂದಿಗೆ ಮಾತನಾಡಿ.

ರೋಗಲಕ್ಷಣಗಳು ಉಲ್ಬಣಗೊಂಡರೆ, ರೋಗಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ( ಮನೆಯಲ್ಲಿ ಆಮ್ಲಜನಕ ಸಿಲಿಂಡರ್ ವ್ಯವಸ್ಥೆಯನ್ನು ಹೊಂದಿದ್ದರೂ ಸಹ)

ನಿರ್ಣಾಯಕ ಆರೈಕೆಯ ಪ್ರತಿ ಕ್ಷಣವೂ ಅಮೂಲ್ಯವಾದ ಜೀವಗಳನ್ನು ಉಳಿಸಲು ಮುಖ್ಯವಾಗಿರುತ್ತದೆ.
ರೋಗಲಕ್ಷಣಗಳು ತೀವ್ರವಾಗಿದ್ದರೆ ಮನೆಯಲ್ಲಿ ಚಿಕಿತ್ಸೆ ತೆಗೆದುಕೊಳ್ಳಬೇಡಿ.

7 ದಿನಗಳಿಗಿಂತ ಹೆಚ್ಚು ಕಾಲ ಜ್ವರ, ಕಡಿಮೆ ಆಮ್ಲಜನಕದ ಮಟ್ಟ, ಅತಿಸಾರ, ಉಸಿರಾಟದ ತೊಂದರೆ ಮತ್ತು ಎದೆ ನೋವು ಇದ್ದರೆ ಇವು ತಕ್ಷಣ ಆಸ್ಪತ್ರೆಗೆ ದಾಖಲಾಗುವ ಅಗತ್ಯವೆಂದು ಸೂಚಿಸುವ ಕೆಲವು ಲಕ್ಷಣಗಳಾಗಿವೆ.

ಮಾಹಿತಿ – ಡಾ. ಬಿಪಿನ್ ಜಿಬ್ಕೇಟ್ ಕ್ರಿಟಿಕಲ್ ಕೇರ್ ಮೆಡಿಸಿನ್‌ನಲ್ಲಿ ಸಲಹೆಗಾರರು ಮತ್ತು ಮುಂಬೈನ ಮಿರಾರೋಡ್‌ನ ವೋಕ್‌ಹಾರ್ಡ್ ಆಸ್ಪತ್ರೆಯ ಐಸಿಯು ನಿರ್ದೇಶಕರು

#covidpositive

ಬೇಳೆಕಾಳು ಬೇಯಿಸಿದ ನೀರನ್ನು ಸೇವಿಸುವುದರ ಆರೋಗ್ಯ ಪ್ರಯೋಜನಗಳು#Saakshatv #healthtips #lentilwater https://t.co/ijmWsfs9yV

— Saaksha TV (@SaakshaTv) April 21, 2021

ಈರುಳ್ಳಿ ಉತ್ತಪ್ಪಂ#Saakshatv #cookingrecipe #onionuttappam https://t.co/xZGNnVMyRc

— Saaksha TV (@SaakshaTv) April 21, 2021

ಕಳೆದ ವರ್ಷದಂತೆ ದೇಶದಲ್ಲಿ ಮತ್ತೊಮ್ಮೆ ಸಂಪೂರ್ಣ ಲಾಕ್‌ಡೌನ್ ಘೋಷಿಸಬೇಕಾಗಿದೆ – ಏಕೆ ಗೊತ್ತಾ ?#lockdown #coronavirus https://t.co/pEgGhsaq0P

— Saaksha TV (@SaakshaTv) April 25, 2021

ನಿಮ್ಮೊಂದಿಗೆ ನಾವಿದ್ದೇವೆ, ಶೀಘ್ರವಾಗಿ ಚೇತರಿಸಿಕೊಳ್ಳಿ – ಭಾರತಕ್ಕೆ ಆಸ್ಟ್ರೇಲಿಯಾ, ಪಾಕ್, ಫ್ರಾನ್ಸ್ ಸೇರಿದಂತೆ ವಿಶ್ವ ನಾಯಕರ ಹಾರೈಕೆ#getwellsoonindia #wearewithyou https://t.co/h982fC1bBp

— Saaksha TV (@SaakshaTv) April 25, 2021

Tags: if test covid positive
ShareTweetSendShare
Join us on:

Related Posts

King Mohammed VI sent congratulations to Morocco’s national football team

FIFAWORLDCUP2026- ರಾಜನ ದೂರದೃಷ್ಟಿಯ ಯುಕ್ತಿ…! ಬಿಳಿ ಚಿನ್ನದ ಶಕ್ತಿ..! ಭಾರತಕ್ಕೆ ಪಾಠವಾಗಲಿದೆ ಮೊರಾಕ್ಕೋ ಫುಟ್‍ಬಾಲ್ ಕ್ರಾಂತಿ..!

by admin
July 6, 2026
0

ಹಾಗಂತ... ಇದು ಖಂಡಿತವಾಗಿಯೂ ಫುಟ್‍ಬಾಲ್ ಜಗತ್ತಿನ ಕಾಲ್ಪನಿಕ ಕಥೆಯಂತೂ ಅಲ್ಲವೇ ಅಲ್ಲ. ಬದಲಾಗಿ ಮತ್ತೊಂದು ಸಣ್ಣ ದೇಶದ ಫುಟ್‍ಬಾಲ್ ಆಟದ ಮಹೋನ್ನತ ಪರ್ವದ ನೈಜ ಚಿತ್ರಣ. ಒಬ್ಬ...

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

by Shwetha
July 6, 2026
0

ಮನೆಯಲ್ಲಿರುವ ಹಳೆಯ ಚಿನ್ನವನ್ನು ಲಾಕರ್ ನಲ್ಲಿಟ್ಟು ಸುಮ್ಮನೆ ಕೂರುವ ಬದಲು ಅದರಿಂದಲೇ ಲಾಭ ಗಳಿಸುವ ಸುವರ್ಣಾವಕಾಶವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ದೇಶದ ಚಿನ್ನದ ಆಮದು ಪ್ರಮಾಣವನ್ನು ತಗ್ಗಿಸುವ...

ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

by Shwetha
July 6, 2026
0

ಗರ್ಭಿಣಿಯಾಗಿದ್ದಾಗ ಪತಿ ತನಗೆ ಫಿಂಗರ್ ಚಿಪ್ಸ್ ಮತ್ತು ಮಾಂಸದೂಟ ತಿನ್ನಲು ಬಿಡಲಿಲ್ಲ ಎಂಬ ವಿಚಿತ್ರ ಕಾರಣ ನೀಡಿ ಪತ್ನಿಯೊಬ್ಬಳು ತನ್ನ ಎನ್ಆರ್ಐ ಪತಿಯ ಮೇಲೆ ದಾಖಲಿಸಿದ್ದ ಕ್ರಿಮಿನಲ್...

ಇರಾನ್ ನಾಯಕರನ್ನು ಒಂದೇ ಹೊಡೆತಕ್ಕೆ ಹೊಸಕಿ ಹಾಕಬಹುದು- ಖಮೇನಿ ಅಂತ್ಯಕ್ರಿಯೆಯಲ್ಲಿ ಹರಿದ ಜನಸಾಗರ ಕಂಡು ಟ್ರಂಪ್ ಆಶ್ಚರ್ಯ: ಜನರ ಕಣ್ಣೀರು ನಕಲಿ ಎಂದ ಅಮೆರಿಕ ಅಧ್ಯಕ್ಷ

ಇರಾನ್ ನಾಯಕರನ್ನು ಒಂದೇ ಹೊಡೆತಕ್ಕೆ ಹೊಸಕಿ ಹಾಕಬಹುದು- ಖಮೇನಿ ಅಂತ್ಯಕ್ರಿಯೆಯಲ್ಲಿ ಹರಿದ ಜನಸಾಗರ ಕಂಡು ಟ್ರಂಪ್ ಆಶ್ಚರ್ಯ: ಜನರ ಕಣ್ಣೀರು ನಕಲಿ ಎಂದ ಅಮೆರಿಕ ಅಧ್ಯಕ್ಷ

by Shwetha
July 6, 2026
0

ವಾಷಿಂಗ್ಟನ್: ಇರಾನ್ ದೇಶದ ಉನ್ನತ ನಾಯಕತ್ವವನ್ನು ಕೇವಲ ಒಂದೇ ಒಂದು ದಾಳಿಯ ಮೂಲಕ ಸಂಪೂರ್ಣವಾಗಿ ನಾಶಪಡಿಸುವ ಸಾಮರ್ಥ್ಯ ಅಮೆರಿಕಕ್ಕಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಘಾತಕಾರಿ...

ಚಂದಾ ಚೋರಿ ಬಗ್ಗೆ ಚೌಕಿದಾರ ಮೌನವೇಕೆ: ಆರೆಸ್ಸೆಸ್ ನೋಂದಣಿಯಾದರೆ ಮಾತ್ರ ಚಂದಾ ಚೋರಿಗೆ ಬ್ರೇಕ್ ಸಾಧ್ಯ: ಪ್ರಿಯಾಂಕ್ ಖರ್ಗೆ

ಚಂದಾ ಚೋರಿ ಬಗ್ಗೆ ಚೌಕಿದಾರ ಮೌನವೇಕೆ: ಆರೆಸ್ಸೆಸ್ ನೋಂದಣಿಯಾದರೆ ಮಾತ್ರ ಚಂದಾ ಚೋರಿಗೆ ಬ್ರೇಕ್ ಸಾಧ್ಯ: ಪ್ರಿಯಾಂಕ್ ಖರ್ಗೆ

by Shwetha
July 6, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ಅಧಿಕೃತವಾಗಿ ನೋಂದಣಿಯಾದರೆ ಮಾತ್ರ ಇಂತಹ ಅಕ್ರಮಗಳಿಗೆ ಮುಕ್ತಿ ಸಿಗುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪುನರುಚ್ಚರಿಸಿದ್ದಾರೆ. ಅಯೋಧ್ಯಾ ರಾಮಮಂದಿರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram