ಕೊರೊನಾ ವೈರಸ್ ನಿಂದ ದೇಶದ ಆರ್ಥಿಕ ವ್ಯವಸ್ಥೆ ದಿವಾಳಿಯಾಗಿದೆ. ಕೆಲಸವಿಲ್ಲದೆ ಕಾರ್ಮಿಕರು, ಕೃಷಿ ಕೂಲಿ ಕಾರ್ಮಿಕರು, ಸೇರಿದಂತೆ ಅನೇಕ ಜನ ಮುಂದಿನ ಬದುಕಿನ ಬಂಡಿಯ ಬಗ್ಗೆ ಚಿಂತಿಸುತ್ತಿದ್ದಾರೆ. ಹಾಗಾಗಿ ಸರ್ಕಾರಗಳು ರೈತರಿಗೆ ಸಾಲ ನೀಡಲು ಮುಂದಾಗಿವೆ. ಸಾಲ ನೀಡುವ ಮೂಲಕ ಹಣವನ್ನು ದುಡಿಸುವ ತಂತ್ರಗಾರಿಕೆ ಸರ್ಕಾರ ಮಾಡುತ್ತಿದೆ. ಅಲ್ಲದೆ ಸಾಲ ನೀಡುವುದರಿಂದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ರೈತರ ಸಂಕಷ್ಟಕ್ಕೆ ನೆರವಾದಂತೆ ಆಗುತ್ತದೆ. ಆ ಕಾರಣಕ್ಕಾಗಿ ಸರ್ಕಾರದಿಂದ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂಪಾಯಿ ಸಾಲ ನೀಡಲಾಗುತ್ತದೆ. ಇದರ ಜೊತೆಗೆ ಬೇರೆ ರೀತಿಯ ಸಾಲಗಳನ್ನು ಮೇ ತಿಂಗಳಿಂದ ನೀಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಮಾತನಾಡಿದ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ , ಲಾಕ್ ಡೌನ್ ಜಾರಿ ಆಗಿರುವ ಹಿನ್ನೆಲೆಯಲ್ಲಿ ಸಾಲ ನೀಡುವ ಪ್ರಕ್ರಿಯೆಗೆ ಹಿನ್ನಡೆಯಾಗಿದೆ. ವಿವಿಧ ಬ್ಯಾಂಕುಗಳು ಮತ್ತು ಸಹಕಾರ ಸಂಘಗಳಿಂದ ಪಡೆದುಕೊಂಡ ಸಾಲದ ಕಂತು ಪಾವತಿಸಲು ಮೂರು ತಿಂಗಳು ಅವಕಾಶ ನೀಡಲಾಗಿದೆ. ಖಾಸಗಿ ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳು ಬಲವಂತ ಮಾಡಿ ಸಾಲ ವಸೂಲಿ ಮಾಡುತ್ತಿರುವ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ಗಮನಕ್ಕೆ ತರಲಾಗಿದೆ. ಈ ಕುರಿತಾಗಿ ರೈತರು ಆತಂಕಪಡುವ ಅಗತ್ಯವಿಲ್ಲ. ಸಾಲ ಪಾವತಿಗೆ ಮೂರು ತಿಂಗಳ ಅವಕಾಶ ಇದೆ. ಇನ್ನು ಮೇ ತಿಂಗಳಿನಿಂದ ಶೂನ್ಯ ಬಡ್ಡಿ ದರದ ಕೃಷಿ ಸಾಲ ಸೇರಿದಂತೆ ವಿವಿಧ ರೀತಿಯ ಸಾಲಗಳನ್ನು ನೀಡಲಾಗುತ್ತದೆ. ಎಂದು ತಿಳಿಸಿದರು.
ಅಂಬೇಡ್ಕರ್ ಬಗ್ಗೆ ನೀಚ ಮಾತು ಸಂವಿಧಾನ ಬರೆಯುವಾಗ ಮದ್ಯ ಸೇವಿಸಿದ್ದಿರಾ ಎಂದು ಪ್ರಶ್ನಿಸಿದ ವ್ಯಕ್ತಿಯ ವಿರುದ್ಧ ಜನಾಕ್ರೋಶ
ಮಂಡ್ಯ: ಭಾರತ ಸಂವಿಧಾನದ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೀಳಾಗಿ ಮಾತನಾಡಿರುವ ವಿಡಿಯೋವೊಂದು ಈಗ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ....








