ಹೈದರಾಬಾದ್ : 8 ಸಿಂಹಗಳಿಗೆ ಕರೊನಾ ಪಾಸಿಟಿವ್ ..! ಮೊದಲ ಬಾರಿಗೆ ಭಾರತದಲ್ಲಿ ಪ್ರಾಣಿಗಳಲ್ಲಿ ಪತ್ತೆಯಾದ ಸೋಂಕು
ಹೈದರಾಬಾದ್: ದೇಶಾದ್ಯಂತ ಕೊರೊನಾ 2ನೇ ಅಲೆ ಅತಿ ಭಯನಾಕರೂಪ ಪಡೆದಿದ್ದು, ಸಾವು ನೋವುಗಳ ಸಂಖ್ಯೆ , ದಿನೇದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗ್ತಲೇ ಇದೆ. ಈ ನಡುವೆ ಪ್ರಾಣಿಗಳನ್ನ ಹೆಮ್ಮಾರಿ ಕಾಡತೊಡಗಿದೆ. ಇದೇ ಮೊದಲ ಬಾರಿಗೆ ಭಾರತದಲ್ಲಿ ಪ್ರಾಣಿಗಳುಗೂ ಕೊರೊನಾ ಸೋಂಕು ತಗುಲಿದೆ ಎಂಬ ಆಘಾತಕಾರಿ ವಿಚಾರ ಬಹಿರಂಗವಾಗಿದೆ. ಹೈದರಾಬಾದ್ನ ನೆಹರು ಜೂಲಾಜಿಕಲ್ ಪಾರ್ಕ್ನ 8 ಏಷ್ಯಾನ್ ಸಿಂಹಗಳಲ್ಲಿ ಕರೊನಾ ಸೋಂಕು ದೃಢಪಟ್ಟಿದೆ. ಇದರಲ್ಲಿ 4 ಹೆಣ್ಣು, 4 ಗಂಡು ಸಿಂಹಳಿವೆ.
ಕಳೆದ ವಾರ ಸಿಂಹಗಳು ಜ್ವರ, ಒಣಕೆಮ್ಮು ಮತ್ತು ನೆಗಡಿಯಿಂದ ಬಳಲುತ್ತಿದ್ದವು. ಹಾಗಾಗಿ ಇವುಗಳ ಮೂಗು ಮತ್ತು ಗಂಟಲು ದ್ರವ ಸಂಗ್ರಹಿಸಿ Centre for Cellular and Molecular Biology (CCMB) ಕೇಂದ್ರದಲ್ಲಿ ಕರೊನಾ ಪರೀಕ್ಷೆ ಮಾಡಲಾಗಿದ್ದು, ವರದಿಯು ಪಾಸಿಟಿವ್ ಬಂದಿದೆ. ಸಿಂಹಗಳನ್ನು ಐಸೋಲೇಷನ್ ಗೆ ಒಳಪಡಿಸಲಾಗಿದೆ.
ಇತರ ಪ್ರಾಣಿಗಳ ಸಂಪರ್ಕಕ್ಕೆ ಒಳಗಾಗದಂತೆ ನೋಡಿಕೊಳ್ಳಲಾಗಿದೆ. ಅಲ್ಲದೆ ಮೃಗಾಲಯಕ್ಕೆ ಬಾಗಿಲು ಹಾಕಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಏರಲಾಗಿದೆ. 2020ರ ಏಪ್ರಿಲ್ನಲ್ಲಿ ನ್ಯೂ ಯಾರ್ಕ್ ನಗರದ ಬ್ರಾಂಕ್ಸ್ ಮೃಗಾಲಯದಲ್ಲಿ ನಾಲ್ಕು ವರ್ಷದ ಹೆಣ್ಣು ಹುಲಿಗೆ ಸೋಂಕು ಸೋಂಕು ತಗುಲಿದ್ದು ದೃಢಪಟ್ಟಿತ್ತು. ಇದೀಗ ಭಾರತದಲ್ಲೂ ಕಾಡು ಪ್ರಾಣಿಗಳಲ್ಲಿ ಕರೊನಾ ಸೋಂಕು ಹರಡಿದೆ.
ದೇಶದಲ್ಲಿ ಕೊರೊನಾಗೆ ಲೆಕ್ಕವಿಲ್ಲದಷ್ಟು ಮಂದಿ ಬಲಿಯಾಗ್ತಿದ್ದಾರೆ. ಅದೆಷ್ಟೋ ಜನರು ತಮ್ಮವರನ್ನ ಕಳೆದುಕೊಂಡು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಸಿನಿ ತಾರಯರು ಸಹ ತಮ್ಮರನ್ನ ಕಳೆದುಕೊಂಡು ನೋವನ್ನ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ತಿದ್ದಾರೆ. ಸೋಂಕಿತರು ಬೆಡ್ ಸಿಗದೇ ಆಕ್ಸಿಜನ್ ಕೊರತೆಯಿಂದ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ. ಇಂತಹ ಕೆಟ್ಟ ಪರಿಸ್ಥಿತಿಗೆ ಬಂದು ದೇಶ ತಲುಪಿದೆ. ಅಂತಹದ್ರಲ್ಲಿ ತೀರಾ ಮನಕಲಲಕುಂತಹ ಘಟನೆಗಳು ಆಗಾಗ ಬೆಳಕಿಗೆ ಬರುತ್ತಲೇ ಇದೆ..
ಸರ್ಕಾರದ ಜೊತೆ ಕೊರೊನಾ ವಿರುದ್ಧ ಹೋರಾಟದಲ್ಲಿ ಜನರು ಕೈಜೋಡಿಸಬೇಕಾಗಿದೆ. ಜನರು ಸುಖಾಸುಮ್ಮನೆ ಅನಗತ್ಯವಾಗಿ ಹೊರಗಡೆ ಓಡಾಡದೇ , ಗುಂಪಿನಲ್ಲಿ ಬೆರೆಯದೇ , ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ತಮ್ಮನ್ನ ತಾವು ರಕ್ಷಣೆ ಮಾಡಿಕೊಳ್ಳಬೇಕಿದೆ.







