14 ದಿನ ಕರುನಾಡು ಸಂಪೂರ್ಣ ಸ್ತಬ್ಧ : ಏನಿರುತ್ತೆ…? ಏನಿರಲ್ಲ..?
ಬೆಂಗಳೂರು : ಕೊರೊನಾ ಎರಡನೇ ಅಲೆ ಕಂಟ್ರೋಲ್ ಗೆ ರಾಜ್ಯ ಸರ್ಕಾರ 14 ದಿನಗಳ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಿಎಂ, ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಘೋಷಣೆಯಾಗಿದ್ದಂತ ಕೊರೋನಾ ಕಪ್ರ್ಯೂನಿಂದ ಕೊರೋನಾ ನಿಯಂತ್ರಣಗೊಂಡಿಲ್ಲ. ಹೀಗಾಗಿ ರಾಜ್ಯಾದ್ಯಂತ ಮೇ.10ರಿಂದ ಮೇ.24ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗುತ್ತಿದೆ.
ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಅತ್ಯಂತ ಪರಿಣಾಮವಾಗಿದೆ, ಇದನ್ನು ನಿಯಂತ್ರಿಸಲು ವಿಧಿಸಲಾಗಿದ್ದಂತ ಕೊರೋನಾ ಕಪ್ರ್ಯೂ ಹೆಚ್ಚು ಪರಿಣಾಮಕಾರಿ ಆಗಿಲ್ಲ. ಹೀಗಾಗಿ ದಿನಾಂಕ 10-05-2021ರ ಬೆಳಿಗ್ಗೆ 6 ಗಂಟೆಯವರೆ 24-05-2021ರವರೆಗೆ ಬೆಳಿಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ವಿಧಿಸಲಾಗುತ್ತಿದೆ. ಈ ಅವಧಿಯಲ್ಲಿ ಅಂಗಡಿ, ಬಾರ್, ಹೋಟೆಲ್, ಪಬ್ ನಿಬರ್ಂಧಿಸಲಾಗಿದೆ ಎಂದರು.

ಮಾರ್ಗಸೂಚಿ:
ಏನಿರುತ್ತೆ..?
ಬೆಳಗ್ಗೆ 6ರಿಂದ 10 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ
ಸರ್ಕಾರಿ ಕಚೇರಿ ಭಾಗಶಃ ಕೆಲಸ ಮಾಡಲಿದೆ.
ಅಗತ್ಯವಸ್ತು ಸಾಗಿಸುವ ವಾಹನಗಳಿಗೆ ಅವಕಾಶ.
ವಿಮಾನ ರೈಲು ಸಂಚಾರಕ್ಕೆ ಅನುಮತಿ
ಬೆಳಗ್ಗೆ 6 ಗಂಟೆಯಿಮದ 10 ಗಂಟೆಯವರೆಗೆಗೆ ಮದ್ಯ ಮಾರಾಟಕ್ಕೆ ಅವಕಾಶ
ಏನಿರಲ್ಲ..?
ಕೂಲಿ ಕಾರ್ಮಿಕರು ಬೆಂಗಳೂರು ಬಿಟ್ಟು ಹೋಗುವಂತಿಲ್ಲ
ಕೈಗಾರಿಕೆ ಹೊಟೇಲ್, ಪಬ್, ಬಾರ್ ಕ್ಲೋಸ್
ಅಂತರ್ ಜಿಲ್ಲಾ ಸಂಚಾರಕ್ಕೆ ಸಂಪೂರ್ಣ ನಿಷೇಧ
ಮೇ 10 ರಿಂದ ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳಿಗೆ ಬೀಗa








