ಕೊರೊನಾದಿಂದ ಚೇತರಿಸಿಕೊಂಡ ನಂತರ ಮೊದಲ ಬಾರಿಗೆ ಸಭೆ ನಡೆಸಿದ ರಮೇಶ್ ಜಾರಕಿಹೊಳಿ
ಬೆಳಗಾವಿ : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೊರೊನಾದಿಂದ ಚೀತರಿಸಿಕೊಂಡು ಕ್ವಾರಂಟೈನ್ ನಿಂದ ಆಚೆ ಬಂದಿದ್ದಾರೆ. ಗೋಕಾಕ್ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ರಮೇಶ್ ಜಾರಕಿಹೊಳಿ ಭಾಗಿಯಾಗಿದ್ದರು. ಸಿಡಿ ಪ್ರಕರಣದಲ್ಲಿ ಸಿಲುಕಿದ್ದ ರಮೇಶ್ ಜಾರಕಿಹೊಳಿ ಪ್ರಕರಣದ ವಿಚಾರಣೆ ನಡೆಯುರತ್ತಿರುವಾಗಲೇ ಕೋವಿಡ್ ಪಾಸಿಟಿವ್ ನಿಂದ ಕ್ವಾರಂಟೈನ್ ಆಗಿದ್ದರು. ಇದೀಗ ಮೊದಲ ಬಾರಿಗೆ ಸಭೆ ನಡೆಸಿದ್ದಾರೆ.
ಕೊವಿಡ್-19 ನಿಯಂತ್ರಣ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳ ಜೊತೆಗೆ ಶಾಸಕ ರಮೇಶ್ ಜಾರಕಿಹೊಳಿ ಸಭೆ ನಡೆಸಿದ್ಧಾರೆ. ಗ್ರಾಮೀಣ ಭಾಗದ ಜನ ಸಿಟಿಗೆ ಬರದಂತೆ ಸಿಟಿ ಜನ ಗ್ರಾಮೀಣ ಭಾಗಕ್ಕೆ ಹೋಗದಂತೆ ಎಚ್ಚರವಹಿಸಿ ಮುಂದಿನ 14 ದಿನಗಳಲ್ಲಿ ಕೊರೊನಾ ಚೈನ್ ಬ್ರೇಕ್ ಮಾಡಲು ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.








