ಗಮನಿಸಿ : ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳು ಮೇ 23 ವರೆಗೆ ಬಂದ್
ಬೆಂಗಳೂರು: ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ರಾಜ್ಯದಲ್ಲಿಯೂ ಕೊರೊನಾ ಪ್ರಕರಣಗಳು ಮತ್ತು ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಲಾಕ್ಡೌನ್ ಮಾಡಲಾಗಿದೆ. ಈ ನಡುವೆ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿದ್ದ ಸಬ್ ರಿಜಿಸ್ಟ್ರಾರ್ ಕಚೇರಿಗಳನ್ನು ಕೂಡ ಮೇ 23ರವರೆಗೆ ಬಂದ್ ಮಾಡಲು ಸರ್ಕಾರ ನಿರ್ಧರಿಸಿದೆ.
ಇಂದಿನಿಂದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳನ್ನು ಬಂದ್ ಮಾಡುವ ತೀರ್ಮಾನ ಕೈಗೊಂಡಿದೆ ಸರ್ಕಾರ. ಹೀಗಾಗಿ ರಾಜ್ಯದಲ್ಲಿನ ಎಲ್ಲಾ ಉಪನೋಂದಣಿ ಕಚೇರಿ ಮತ್ತು ಜಿಲ್ಲಾ ನೋಂದಣಿ ಕಚೇರಿಗಳು ಮೇ 23 ರವರೆಗೆ ಬಾಗಿಲು ಮುಚ್ಚಿರಲಿದೆ. ಈ ನಡುವೆ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿ ಹಾಜರಿರಲು ಸೂಚನೆ ನೀಡಿದೆ.