ಮೇ 30 ರವರೆಗೂ ಲಾಕ್ ಡೌನ್ ಮುಂದುವರೆಸಬೇಕು : ಉಮೇಶ್ ಕತ್ತಿ Lockdown
ಬಾಗಲಕೋಟೆ : ರಾಜ್ಯದಲ್ಲಿ ಕೊರೊನಾವನ್ನು ಹತ್ತಿಕ್ಕಲು ಮೇ 30 ರವರೆಗೂ ಲಾಕ್ ಡೌನ್ ಮುಂದುವರೆಸಬೇಕು ಎಂದು ಸಚಿವ ಉಮೇಶ್ ಕತ್ತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಲಾಕ್ ಡೌನ್ ವಿಸ್ತರಣೆ ಮಾಡುವ ಬಗ್ಗೆ ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಒಬ್ಬ ಸಚಿವನಾಗಿ ಮೂವತ್ತು ಜನ ಸಚಿವರು ಏನು ಹೇಳುತ್ತಾರೊ ಅದನ್ನೇ ಹೇಳುತ್ತೇನೆ.
ಲಾಕ್ಡೌನ್ ಮುಂದುವರೆಸುವುದು ಸೂಕ್ತ. ನಮ್ಮ ಜಿಲ್ಲೆಯ ಹುಕ್ಕೇರಿಯಲ್ಲಿ ಜನರೇ ಖುದ್ದಾಗಿ ಲಾಕ್ ಡೌನ್ ಮಾಡುತ್ತಿದ್ದಾರೆ. ಅದಕ್ಕೆ ಪೊಲೀಸರು ಸಹಕಾರ ಕೊಡುತ್ತಿದ್ದಾರೆ.
ಸರ್ಕಾರವೇ ಎಲ್ಲವನ್ನೂ ಮಾಡೋದಕ್ಕೆ ಆಗೋದಿಲ್ಲ. ಜನರು ಕೈಜೋಡಿಸಿ ಖುದ್ದಾಗಿ ಲಾಕ್ ಡೌನ್ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಇನ್ನು ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಬಗ್ಗೆ ಮಾತನಾಡಿ, ಗ್ರಾಮೀಣ ಭಾಗದ ಸೊಂಕಿನ ಬಗ್ಗೆ ಡಿಸಿ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇವೆ.
ಹೋಮ್ ಕ್ವಾರಂಟೈನ್ ಯಾವ ರೀತಿ ಮಾಡಬೇಕು. ಸೋಂಕಿತರನ್ನು ಎಲ್ಲಿಗೆ ಸ್ಥಳಾಂತರ ಮಾಡಬೇಕೆಂದು ಚರ್ಚೆ ಮಾಡುತ್ತೇವೆ ಎಂದರು.