ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಗುರುವಾರ ನಿರ್ಧಾರ lockdown
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಆರ್ಭಟವನ್ನು ಮುಂದುವರೆಸಿದೆ.
ನಗರ ಭಾಗದಲ್ಲಿ ಸೋಂಕು ಕಡಿಮೆ ಆದಂತೆ ಇದ್ದರೂ ಕೂಡ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಸದ್ಯ ರಾಜ್ಯದಲ್ಲಿ ವಿಧಿಸಿರುವ ಜನತಾ ಲಾಕ್ ಡೌನ್ ಅನ್ನು ವಿಸ್ತರಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಸರ್ಕಾರದ ಸಚಿವರು ಕೂಡ ಲಾಕ್ ಡೌನ್ ವಿಸ್ತರಣೆಗೆ ಒಲವು ತೋರಿಸುತ್ತಿದ್ದಾರೆ.
ವಿಪಕ್ಷಗಳು ಕೂಡ ಲಾಕ್ ಡೌನ್ ವಿಸ್ತರಣೆ ಮಾಡುವಂತೆ ಸಲಹೆ ನೀಡಿವೆ.
ಈ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಸಿಎಂ ಲಾಕ್ ಡೌನ್ ವಿಸ್ತರಣೆ ಬಗ್ಗೆ ಚರ್ಚಿಸಲು ಗುರುವಾರ ಸಚಿವ ಸಂಪುಟ ಸಭೆ ಕರೆದಿದ್ದಾರೆ ಎಂದು ತಿಳಿದುಬಂದಿದೆ.
ಈ ವೇಳೆ ಲಾಕ್ ಡೌನ್ ವಿಸ್ತರಣೆ, ಪ್ಯಾಕೇಜ್ ಘೋಷಣೆ ಮಾಡುವ ಕುರಿತು ಅಂತಿಮ ತೀರ್ಮಾನ ಮಾಡುವ ಸಾಧ್ಯತೆ.










