ಕೊರೋನಾ ರೋಗಲಕ್ಷಣವುಳ್ಳವರಿಗೆ ಕೋವಿಡ್ ಪರೀಕ್ಷೆ ನಡೆಸದೆ ಚಿಕಿತ್ಸೆ ನೀಡಿದರೆ ವೈದ್ಯರ ಮೇಲೆ ಕಠಿಣ ಕ್ರಮ – ಉಡುಪಿ ಡಿಸಿ
ಕೊರೊನಾವೈರಸ್ ರೋಗಲಕ್ಷಣದ ರೋಗಿಗಳನ್ನು ಪರೀಕ್ಷೆಗಳಿಗೆ ಒಳಪಡಿಸದೆ ಸ್ಥಳೀಯವಾಗಿ ಚಿಕಿತ್ಸೆ ನೀಡುತ್ತಿರುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಖಾಸಗಿ ವೈದ್ಯರಿಗೆ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಜನರ ಸಂಖ್ಯೆ ಹೆಚ್ಚುತ್ತಿದೆ. ಕೊರೋನಾ ಸೋಂಕಿತ ವ್ಯಕ್ತಿಗಳನ್ನು ಕೊನೆಯ ಕ್ಷಣದಲ್ಲಿ ಆಸ್ಪತ್ರೆಗೆ ದಾಖಲಿಸಲಾಗುತ್ತಿರುವುದು ಕಂಡು ಬಂದಿದೆ. ಸಾರ್ವಜನಿಕರು ಆರಂಭದಲ್ಲಿ ಸ್ಥಳೀಯ ಕ್ಲಿನಿಕ್ ಅಥವಾ ವೈದ್ಯರನ್ನು ಭೇಟಿ ಮಾಡುತ್ತಾರೆ. ಜ್ವರ, ಶೀತ ಮತ್ತು ಕೆಮ್ಮು ಇತ್ಯಾದಿಗಳಿಗೆ ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ಇದು ಕೊರೊನಾವೈರಸ್ ಲಕ್ಷಣಗಳಾಗಿವೆ. ಪರಿಸ್ಥಿತಿ ಗಂಭೀರವಾದ ಮೇಲೆ ಅವರು ಆಸ್ಪತ್ರೆಗಳಿಗೆ ಬರುತ್ತಾರೆ. ಗಂಭೀರ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡುವುದು ಕಷ್ಟ. ಇದು ಜನರ ಸಾವಿಗೆ ಕಾರಣವಾಗುತ್ತದೆ ಎಂದು ಡಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆರಂಭದಲ್ಲಿಯೇ ರೋಗಲಕ್ಷಣಗಳು ಕಾಣಿಸಿಕೊಂಡಾಗ ಕೊರೊನಾವೈರಸ್ ಪರೀಕ್ಷೆಗೆ ಒಳಪಡಿಸುವುದು ಸೂಕ್ತವಾಗಿದೆ. ಸೋಂಕು ಮೊದಲೇ ಪತ್ತೆಯಾದರೆ ಚಿಕಿತ್ಸೆ ನೀಡುವುದು ಸುಲಭ. ಇದರಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚು. ಸರಿಯಾದ ಔಷಧಿ ಸಿಗದಿದ್ದರೆ ರೋಗಲಕ್ಷಣಗಳು ತೀವ್ರವಾಗುತ್ತವೆ. ಒಟಿಸಿ ಟ್ಯಾಬ್ಲೆಟ್ಗಳು ತಾತ್ಕಾಲಿಕ ಪರಿಹಾರವನ್ನು ಮಾತ್ರ ನೀಡುತ್ತದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನುಮುಂದೆ ಕೊರೋನವೈರಸ್ ರೋಗಲಕ್ಷಣಗಳು ಕಂಡುಬಂದರೆ, ಅಂತಹ ರೋಗಿಗಳನ್ನು ಪರೀಕ್ಷೆಗೆ ಒಳಗಾಗುವಂತೆ ವೈದ್ಯರು ಸೂಚಿಸಬೇಕು. ಯಾವುದೇ ಪ್ರಕರಣಗಳಿಗೆ ಸ್ಥಳೀಯವಾಗಿ ಚಿಕಿತ್ಸೆ ನೀಡಿದರೆ ಮತ್ತು ನಂತರ ಗಂಭೀರವಾಗಿ ರೋಗಿಯು ಮೃತಪಟ್ಟರೆ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಎಚ್ಚರಿಸಿದ್ದಾರೆ.

ಎಚ್ಚರಿಕೆ – ದೇಶಾದ್ಯಂತ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ನಮ್ಮ ಮತ್ತು ನಮ್ಮ ಕುಟುಂಬದ ಆರೋಗ್ಯ ನಮ್ಮ ಕೈಯಲ್ಲಿದೆ. ಇದು ಸಾಕ್ಷಾಟಿವಿ ಕಳಕಳಿ.
ಕೊರೋನಾ ಸಮಯದಲ್ಲಿ ಬೆಳ್ಳುಳ್ಳಿ ರಸ ಕುಡಿಯುವುದರಿಂದ ಸಿಗುವ ಪ್ರಯೋಜನಗಳು#Saakshatv #healthtips #garlicjuice https://t.co/Yoi4u1aizs
— Saaksha TV (@SaakshaTv) May 17, 2021
ಮಕ್ಕಳಲ್ಲಿ ಕೊರೋನಾ ರೋಗಲಕ್ಷಣಗಳನ್ನು ಗುರುತಿಸುವುದು ಹೇಗೆ? ಮನೆಯಲ್ಲೇ ಇದಕ್ಕೆ ಚಿಕಿತ್ಸೆ ಸಾಧ್ಯವೇ?#Saakshatv #healthtips #covid19 https://t.co/PkLhSe8YP0
— Saaksha TV (@SaakshaTv) May 20, 2021
ನಾಲಿಗೆಯಲ್ಲಿ ತುರಿಕೆ ಮತ್ತು ಒಣಗುವಿಕೆ? ಇದು ಕೂಡ ಹೊಸ ಕೋವಿಡ್ -19 ರೋಗಲಕ್ಷಣವೆಂದಿದ್ದಾರೆ ಬೆಂಗಳೂರು ವೈದ್ಯರು !#NewCovid19 https://t.co/rF6LZLF5UV
— Saaksha TV (@SaakshaTv) May 17, 2021
ಆರೋಗ್ಯಕರ ದೊಡ್ಡಪತ್ರೆ ಬಜ್ಜಿ#Saakshatv #cookingrecipe #doddapatrebajji https://t.co/mb4nPfEZGe
— Saaksha TV (@SaakshaTv) May 17, 2021
#Doctors #Covidpatients








