ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹಾವೇರಿ ಜಿಲ್ಲೆಯಲ್ಲಿ ಮರಣ ಪ್ರಮಾಣ ಆತಂಕಕಾರಿ : ಸಚಿವ ಸುಧಾಕರ್‌

admin by admin
May 21, 2021
in Newsbeat, State, ರಾಜ್ಯ
minister dr sudhakar minister basavaraj bommayi saakshatv
Share on FacebookShare on TwitterShare on WhatsappShare on Telegram

ಹಾವೇರಿ ಜಿಲ್ಲೆಯಲ್ಲಿ ಮರಣ ಪ್ರಮಾಣ ಆತಂಕಕಾರಿ : ಸಚಿವ ಸುಧಾಕರ್‌ – ಹೆಚ್ಚಿನ ವೈದ್ಯ ಸೌಲಭ್ಯ ಇಲ್ಲದಿರುವುದರಿಂದ ಜಾಗೃತೆಯಿಂದ ಕೆಲಸ ಮಾಡಬೇಕು

minister dr sudhakar minister basavaraj bommayi saakshatvಹಾವೇರಿ : ಜಿಲ್ಲೆಯಲ್ಲಿ ಉತ್ತಮ ಮಟ್ಟದ ಆರೋಗ್ಯ ವ್ಯವಸ್ಥೆ ಇಲ್ಲದ ಕಾರಣಕ್ಕೆ ಕೋವಿಡ್‌ ನಿಯಂತ್ರಣದಲ್ಲಿ ಜಿಲ್ಲಾಡಳಿತ ಜವಾಬ್ದಾರಿಯುತವಾಗಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಎಚ್ಚರಿಕೆ ನೀಡಿದ್ದಾರೆ.

Related posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

August 11, 2026
varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

August 11, 2026

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್‌ ನಿಯಂತ್ರಣ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ಹಾವೇರಿ ಜಿಲ್ಲೆ ಮರಣ ಪ್ರಮಾಣದ ಸರಾಸರಿಯಲ್ಲಿ ಮೊದಲ ಸ್ಥಾನದಲ್ಲಿರುವುದು ಆತಂಕಕಾರಿ ವಿಷಯ ಎಂದರು.

ಸದ್ಯ ಸೋಂಕಿತರ ಸಂಖ್ಯೆ ಕಡಿಮೆ ಇದ್ದರೂ ಸಾವಿನ ಪ್ರಮಾಣ ರಾಜ್ಯದ ಸರಾಸರಿಗೆ ಹೋಲಿಸಿದಾಗ ಹೆಚ್ಚಿದೆ. ಹೀಗಾಗಿ ಹರಡುವಿಕೆ ಮತ್ತು ಸಾವಿನ ಪ್ರಮಾಣ ನಿಯಂತ್ರಣಕ್ಕೆ ಒತ್ತು ನೀಡಬೇಕು. ಸೋಂಕಿತರು ಪತ್ತೆ ಆದ ತಕ್ಷಣ ಅವರನ್ನು ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ದಾಖಲು ಮಾಡಬೇಕು. ಸದ್ಯ ಜಿಲ್ಲೆಯಲ್ಲಿ ಸಕ್ರೀಯ ಪ್ರಕರಣಗಳು ೧೮೩೬ ಇದೆ. ಈ ಪೈಕಿ ಹೋಮ್‌ ಐಸೊಲೇಶನ್‌ ನಲ್ಲಿ ೬೧೩ ಮಂದಿ ಇದ್ದಾರೆ. ಇಂದು ೨೦೯ ಡಿಸ್ಚಾರ್ಜ್‌, ಏಳು ಸಾವಿನ ಪ್ರಕರಣ ವರದಿಯಾಗಿದೆ ಎಂದು ವಿವರಿಸಿದರು.

minister dr sudhakar minister basavaraj bommayi saakshatvಬೇಗ ಸ್ಥಳಾಂತರಿಸಿ
ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಮನೆಯಲ್ಲೇ ಇರುವ ಸೋಂಕಿತರನ್ನು ಆದಷ್ಟು ಬೇಗ ಸ್ಥಳಾಂತರಿಸಿ ಹಾರೈಕೆ ನೀಡಬೇಕು. ಟೆಸ್ಟಿಂಗ್‌, ಟ್ರಾಕಿಂಗ್‌, ಟ್ರೀಟ್‌ಮೆಂಟ್‌ ಸೂತ್ರವನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಂಡು ಸಾವಿನ ಪ್ರಮಾಣ ತಡೆಯಲಿ ಕ್ರಮವಹಿಸಬೇಕು. ಸೋಂಕಿತರ ಸಂಪರ್ಕಿತರು ಮತ್ತು ಐಎಲ್‌ಐ ಹಾಗೂ ಸಾರಿ ಪ್ರಕರಣಗಳ ಟೆಸ್ಟಿಂಗ್‌ ಕಡ್ಡಾಯಗೊಳಿಸಬೇಕು. ಇದರಿಂದ ಆರಂಭದಲ್ಲೇ ಸೋಂಕನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಸಾಧ್ಯ ಎಂದು ಕಿವಿಮಾತು ಹೇಳಿದರು.
೩೬ ಗಂಟೆಯೊಳಗೆ ಟೆಸ್ಟ್‌ಗಳ ಪರೀಕ್ಷಾ ವರದಿ ನೀಡಬೇಕು. ಇದರಿಂದ ಸೋಂಕಿತರಿಗೆ ಆರಂಭದಿಂದಲೇ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ. ೬ ತಾಲ್ಲೂಕು ಆಸ್ಪತ್ರೆಗಳಲ್ಲಿ ಎಲ್ಲಿ ಆಕ್ಸಿಜನ್‌ ಹಾಸಿಗೆ ಮತ್ತು ವೆಂಟಿಲೇಟರ್‌ ಕೊರತೆ ಇದ್ದರೆ ತಕ್ಷಣ ಪರ್ಯಾಯ ವ್ಯವಸ್ಥೆ ಮಾಡಬೇಕು. ಕೊರತೆ ಇದ್ದಲ್ಲಿ ತಕ್ಷಣ ಒದಗಿಸಲು ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು.

minister dr sudhakar minister basavaraj bommayi saakshatvಶೀಘ್ರ ನೇಮಕ

ಜಿಲ್ಲಾ ಆಸ್ಪತ್ರೆಯಲ್ಲಿ ೨೨ ವೆಂಟಿಲೇಟರ್‌ಗಳು ಕೆಲಸ ಮಾಡುತ್ತಿಲ್ಲ. ತಾಲ್ಲೂಕು ಆಸ್ಪತ್ರೆಯಲ್ಲಿ ಇರುವ ಐದು ವೆಂಟಿಲೇಟರ್‌ ಪೈಕಿ ನಾಲ್ಕು ಕೆಲಸ ಮಾಡುತ್ತಿಲ್ಲ ಎಂದು ಇದೀಗ ತಿಳಿಸಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಕೊರತೆ ಇರುವ ತಜ್ಞರು ಮತ್ತು ವೈದ್ಯರ ಹುದ್ದೆಗಳನ್ನು ಒಂದು ವಾರದಲ್ಲಿ ನೇಮಕ ಮಾಡಲಾಗುವುದು. ಜಿಲ್ಲೆಗೆ ಬೇಕಾದ ಔಷಧಗಳ ವಿವರಗಳನ್ನು ಔಷಧ ಸಾಫ್ಟ್‌ವೇರ್‌ನಲ್ಲಿ ದಾಖಲು ಮಾಡಬೇಕು. ಇಲ್ಲದಿದ್ದರೆ ನಿಮಗೆ ಸರಿಯಾದ ಸಮಯಕ್ಕೆ ಔಷಧಗಳು ಸಿಗುವುದಿಲ್ಲ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಆಕ್ಸಿಜನ್‌ ಕಾನ್ಸ್‌ಟ್ರೇಟರ್ಸ್‌ ಇನ್ನೂ ೨೫ ರಿಂದ ೩೦ ಕಳುಹಿಸಿಕೊಡಲಾಗುವುದು. ಕೊರತೆ ಇರುವ ಔಷಧಗಳನ್ನು ತಕ್ಷಣವೇ ರವಾನೆ ಮಾಡಲು ಸೂಚನೆ ಕೊಡಲಾಗಿದೆ. ಬ್ಲಾಕ್‌ ಫಂಗಸ್‌ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಚಿಕಿತ್ಸೆ ನೀಡಲು ಇಂಜೆಕ್ಷನ್‌ ಕಳುಹಿಸಿಕೊಡಲಾಗುವುದು. ಇಎನ್‌ಟಿ ತಜ್ಞರ ಸಮಿತಿ ರಚಿಸಿ ಅವರಿಂದ ಸಮಗ್ರ ದೃಷ್ಟಿಕೋನದ ಚಿಕಿತ್ಸಾ ವಿಧಾನವನ್ನು ಮಾರ್ಗಸೂಚಿಯಲ್ಲಿ ನೀಡಿರುವಂತೆ ಚಿಕಿತ್ಸೆ ಕೊಡುವ ವ್ಯವಸ್ಥೆ ಅಳವಡಿಸಿಕೊಳ್ಳಬೇಕು ಎಂದರು.

minister dr sudhakar minister basavaraj bommayi saakshatvಲಸಿಕೆ ವಿತರಣೆ ತ್ವರಿತಗೊಳಿಸಿ

ಲಸಿಕಾ ವಿತರಣೆಯಲ್ಲಿ ಇದುವರೆಗೆ ೧,೭೧,೧೪೭ ಜನರಿಗೆ ನೀಡಲಾಗಿದೆ. ಜಿಲ್ಲಾ ಉಗ್ರಾಣದಲ್ಲಿ ೩೬೩೦ ಡೋಸ್‌ ದಾಸ್ತಾನು ಇದೆ. ೧೧,೩೯೦ಡೋಸ್‌ ಜಿಲ್ಲೆಯಲ್ಲಿ ಹಂಚಿಕೆ ಆಗಿರುವ ದಾಸ್ತಾನು ಇದೆ. ಮೊದಲ ಮತ್ತು ಎರಡನೇ ಡೋಸ್‌ಗೆ ದೊಡ್ಡ ಅಂತರ ಇದೆ. ಅದನ್ನು ಸರಿಪಡಿಸಬೇಕು. ಜಿಲ್ಲಾಡಳಿತ ಪ್ರತಿದಿನ ಮಾಧ್ಯಮಗಳ ಮೂಲಕ ಲಸಿಕೆ ವಿತರಣೆ, ಚಿಕಿತ್ಸಾ ವಿಧಾನ, ಸಿಸಿಸಿಗಳಲ್ಲಿ ಊಟ ಮತ್ತು ಹಾರೈಕೆ ವಿಷಯಗಳ ಬಗ್ಗೆ ಮಾಹಿತಿ ಮತ್ತು ವಿಡಿಯೋಗಳನ್ನು ನೀಡುವುದರಿಂದ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಿ ಎಂದು ಕಿವಿಮಾತು ಹೇಳಿದರು.

ಹತ್ತು ಮೆಟ್ರಿಕ್‌ ಟನ್‌ ಆಕ್ಸಿಜನ್‌ ಸರಿಯಾಗಿ ಬಳಕೆ ಮಾಡಬೇಕು. ಆಗ ಯಾವುದೇ ಕೊರತೆ ಆಗುವುದಿಲ್ಲ. ಆಕ್ಸಿಜನ್‌ ಬಳಕೆ ವಿಷಯದಲ್ಲಿ ಜವಾಬ್ದಾರಿಯಿಂದ ಬಳಸಬೇಕು. ಪ್ರತಿ ರೋಗಿಗೆ ನೀಡುತ್ತಿರುವ ಆಕ್ಸಿಜನ್‌ ಬಗ್ಗೆ ಪ್ರತಿದಿನ ಆಡಿಟ್‌ ಮಾಡಬೇಕು. ವ್ಯರ್ಥ ಆಗದಂತೆ ಎಚ್ಚರವಹಿಸಬೇಕು ಎಂದರು.

ಆಸ್ಪತ್ರೆ, ಮೆಡಿಕಲ್‌ ಕಾಲೇಜು ಸ್ಥಳ ಪರಿಶೀಲನೆ
ಕೋವಿಡ್‌ ಪರಿಶೀಲನಾ ಸಭೆಗೂ ಮೊದಲು ಸುಧಾಕರ್‌ ಅವರು ಉಸ್ತುವಾರಿ ಸಚಿವರಾದ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಸಂಸದರಾದ ಶಿವಕುಮಾರ್‌ ಉದಾಸಿ ಹಾಗೂ ಜಿಲ್ಲೆಯ ಶಾಸಕರು ಮತ್ತು ಅಧಿಕಾರಿಗಳು ಜಿಲ್ಲಾ ಆಸ್ಪತ್ರೆಗೆ ಮತ್ತು ನೂತನ ಮೆಡಿಕಲ್‌ ಕಾಲೇಜು ನಿರ್ಮಾಣದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

Tags: #cmbsy#home minister basavaraj bommai#saakshatvCovid indiacovid karnatakaCovid19haverihealth minister dr.sudhakarkarnataka
ShareTweetSendShare
Join us on:

Related Posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

by admin
August 11, 2026
0

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ 'ಸ್ಲಮ್ ಡಾಗ್' ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್; ‌ಪವರ್‌ಫುಲ್ ಅಧಿಕಾರಿ 'ಗೌರಿ ಹೆಗ್ಡೆ' ಪಾತ್ರದಲ್ಲಿ ಟಬು!...

varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

by admin
August 11, 2026
0

ಅಷ್ಟ ಐಶ್ವರ್ಯ ಪಡೆಯಲು ತಾಂತ್ರಿಕ ಪರಿಹಾರ ಅಷ್ಟ ಲಕ್ಷ್ಮಿ ನಾಣ್ಯಗಳು ಶುಕ್ರವಾರ ಮಹಾಲಕ್ಷ್ಮಿ ದೇವಿಗೆ ಶುಭ ದಿನ. ಆ ಶುಕ್ರವಾರ ಬರುವ ಶುಕ್ರ ಹೊರೆಯ ಸಮಯದಲ್ಲಿ ನಾವು...

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram