ರೆಮ್ ಡಿಸಿವರ್ ಕಾಳದಂಧೆ – ಗ್ರಾಹಕರ ಸೋಗಿನಲ್ಲಿ ಹೋಗಿ ಆರೋಪಿಗಳನ್ನ ಹಿಡಿದ ಪೊಲೀಸರು
ಬೆಂಗಳೂರು : ದೇಶದಲ್ಲಿ ಕೋವಿಡ್ 2ನೇ ಅಲೆ ಭೀತಿಗೆ ಜನ ತತ್ತರಿಸಿ ಹೋಗಿದ್ದಾರೆ. ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಕೊರೊನಾ ಔಷಧಿ ರೆಮ್ ಡಿಸಿವರ್ ಕಾಳದಂಧೆ ಶುರುವಾಗಿದೆ.. ಕೆಲ ಕಿಡಿಗೇಡಿಗಳು ಇಂತಹ ಸಮಯದಲ್ಲಿಯೂ ಮಸದಿಂದ ದುಡ್ಡು ಸಂಪಾದನೆ ಮಾಡುವ ದಾರಿ ಹುಡುಕಿಕೊಂಡಿದ್ದಾರೆ. ರೆಮ್ ಸಿವರ್ ಗಳ ಕಾಳದಂಧೆ ನಡೆಸುತ್ತಿದ್ದಾರೆ. ಅಂತೆಯೇ ಕೇರಳಾದಿಂದ ರೆಮ್ಡಿಸಿವೀರ್ ತಂದು ಬೆಂಗಳೂರಿನಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡ್ತಿದ್ದ ಮೂವರನ್ನ ಬಸವೇಶ್ವರ ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಂಜೀವ್ ಕುಮಾರ್ (32) ಪ್ರತೀಕ್ (37) ಹಾಗೂ ಅಭಿಜಿತ್ (20) ಬಂಧಿತ ಆರೋಪಿಗಳಾಗಿದ್ದಾರೆ. ದಂಧೆಯ ಬಗ್ಗೆ ಮಾಹಿತಿ ಪಡೆದು ಗ್ರಾಹಕರ ಸೋಗಿನಲ್ಲಿ ಸಂಪರ್ಕಿಸಿದ್ದ ಪೊಲೀಸರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ಸ್ಪೆಕ್ಟರ್ ಎರ್ರಿಸ್ವಾಮಿ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆದಿದೆ. ಇವರು ಖರೀದಿಗಾರರ ಸೋಗಿನಲ್ಲಿ ಹೋಗಿದ್ದ ಪೊಲೀಸ್ ತಂಡದ ಬಳಿ 1 ವಯಲ್ ಇಂಜೆಕ್ಷನ್ ಗೆ 10 ಸಾವಿರ ರೂ ಡಿಮ್ಯಾಂಡ್ ಮಾಡಿ ಅಭಿಜಿತ್ ಎಂಬಾತನ ಬಳಿ ಇಂಜೆಕ್ಷನ್ ಕಲೆಕ್ಟ್ ಮಾಡುವಂತೆ ತಿಳಿಸಿದ್ದರು ಎನ್ನಲಾಗಿದೆ. ಇಂಜೆಕ್ಷನ್ ಪಡೆಯುವ ನೆಪದಲ್ಲಿ ತೆರಳಿ ಮೂವರೂ ಆರೋಪಿಗಳ ಬಂಧಿಸಿದ್ದಾರೆ ಪೊಲೀಸರು.. ಬಳಿಕ ಬಂಧಿತರಿಂದ 25 ವಯಲ್ಸ್ ರೆಮ್ಡಿಸಿವೀರ್ ವಶಕ್ಕೆ ಪಡೆದಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








