ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸಾ ವಿಭಾಗ ಅಭಿವೃದ್ಧಿ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

admin by admin
June 1, 2021
in Newsbeat, State, ರಾಜ್ಯ
dr sudhakar saakshatv bengaluru
Share on FacebookShare on TwitterShare on WhatsappShare on Telegram

ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸಾ ವಿಭಾಗ ಅಭಿವೃದ್ಧಿ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

dr sudhakar saakshatv bengaluruಬೆಂಗಳೂರು, ಕೋವಿಡ್ ಮೂರನೇ ಅಲೆಗೆ ಮುನ್ನೆಚ್ಚರಿಕೆಯಾಗಿ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸಾ ವಿಭಾಗ ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Related posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

August 11, 2026
varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

August 11, 2026

ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಆಕ್ಸಿಜನ್ ಘಟಕಗಳನ್ನು ಪ್ರತಿ ತಾಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆಗಳಲ್ಲಿ ಆರಂಭಿಸಲಾಗುತ್ತಿದೆ. ಜೊತೆಗೆ ಎಲ್ಲ ಜಿಲ್ಲಾಸ್ಪತ್ರೆಯಲ್ಲಿ 70-80 ಹಾಸಿಗೆಗಳ ಸೌಲಭ್ಯದ ಮಕ್ಕಳ ಚಿಕಿತ್ಸಾ ವಿಭಾಗ ಮಾಡಿ, ಅದಕ್ಕೆ ಬೇಕಾದ ಮಕ್ಕಳ ತಜ್ಞರು, ನರ್ಸಿಂಗ್ ಸ್ಟಾಫ್ ಅನ್ನು ಹೆಚ್ಚುವರಿಯಾಗಿ ಪಡೆಯಲು ತೀರ್ಮಾನಿಸಲಾಗಿದೆ. 20 ಹಾಸಿಗೆಯ ಮಕ್ಕಳ ವಿಭಾಗವಿದ್ದರೆ ಅದನ್ನು 80 ಹಾಸಿಗೆಗೆ ಏರಿಸಲಾಗುವುದು. ಎಂಬಿಬಿಎಸ್ ವೈದ್ಯರು, ತಾಂತ್ರಿಕ ಸಿಬ್ಬಂದಿಗೆ ಮಕ್ಕಳಿಗೆ ಚಿಕಿತ್ಸೆ ನೀಡಲು ರಾಜೀವ್ ಗಾಂಧಿ ಆರೋಗ್ಯ ವಿವಿಯಿಂದ ತರಬೇತಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಎರಡನೇ ಅಲೆಯಲ್ಲಿ ಬಂದ ರೂಪಾಂತರಿ ವೈರಾಣು ಪತ್ತೆಗೆ, 5 ವೈದ್ಯಕೀಯ ಕಾಲೇಜು ಹಾಗೂ ಆರೋಗ್ಯ ಇಲಾಖೆಯಡಿಯ ಮಂಗಳೂರು ವೆನ್ ಲಾಕ್ ಹಾಗೂ ವಿಜಯಪುರ ಆಸ್ಪತ್ರೆ ಸೇರಿ ಒಟ್ಟು 7 ಕಡೆ ಜೀನೋಮಿಕ್ ಲ್ಯಾಬ್ ಗಳನ್ನು ಆರಂಭಿಸಲಾಗುವುದು. ವೈರಾಣು ಸ್ವಭಾವ ಅಧ್ಯಯನ ಮಾಡಿ ಅದಕ್ಕೆ ಬೇಕಾದ ಚಿಕಿತ್ಸೆಯನ್ನು ಇಲ್ಲಿ ತೀರ್ಮಾನಿಸಲಾಗುವುದು ಎಂದರು.

ಮುಖ್ಯಮಂತ್ರಿಗಳಿಂದ ತೀರ್ಮಾನ

ಲಾಕ್ ಡೌನ್ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು ಯಾವ ಬಗೆಯ ಲಾಕ್ ಡೌನ್ ಮಾಡಬೇಕು ಹಾಗೂ ಹೇಗೆ ಹಂತಹಂತವಾಗಿ ನಿರ್ಬಂಧ ಸಡಿಲಿಸಬೇಕೆಂದು ತೀರ್ಮಾನಿಸುತ್ತಾರೆ. ಕೋವಿಡ್ ಪಾಸಿಟಿವಿಟಿ ದರ ಶೇ.5 ಕ್ಕಿಂತ ಕಡಿಮೆ ಹಾಗೂ ಪ್ರಕರಣಗಳ ಸಂಖ್ಯೆ 5 ಸಾವಿರಕ್ಕಿಂತ ಇಳಿಕೆಯಾದರೆ ನಿರ್ಬಂಧ ಸಡಿಲಿಸಬಹುದು ಎಂದು ತಾಂತ್ರಿಕ ಸಲಹಾ ಸಮಿತಿಯ ವರದಿಯಲ್ಲಿ ಹೇಳಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ಆದರೆ ಅನೇಕ ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಅಧಿಕವಿದೆ. ಆದ್ದರಿಂದ ಎಚ್ಚರಿಕೆ ವಹಿಸಬೇಕು ಎಂದರು.

1.64 ಲಕ್ಷ ಕೋವ್ಯಾಕ್ಸಿನ್ ಲಸಿಕೆ ಡೋಸ್ ರಾಜ್ಯಕ್ಕೆ ಬಂದಿದೆ. ಇದನ್ನು ಬಳಸಿ 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡಲಾಗುತ್ತಿದೆ. ಜೂನ್ ಮೊದಲ ವಾರದೊಳಗೆ ಬಾಕಿ ಉಳಿದವರಿಗೆ ಲಸಿಕೆ ನೀಡಲಾಗುವುದು ಎಂದು ತಿಳಿಸಲಾಗಿತ್ತು. ಅದರಂತೆ ಲಸಿಕಾಕರಣ ನಡೆಸಲಾಗುವುದು. ಮುಂದೆ ಲಸಿಕೆ ದೊರೆತಂತೆ, 18-44 ವರ್ಷದವರಿಗೆ ಲಸಿಕೆ ನೀಡಲಾಗುವುದು ಎಂದರು.

dr sudhakar saakshatv bengaluruಔಷಧಿ ಪಡೆಯಲು ಕ್ರಮ

ಬ್ಲ್ಯಾಕ್ ಫಂಗಸ್ ಕಣ್ಣಿಗೆ ತಲುಪಿದ ನಂತರ ಕಣ್ಣು ತೆಗೆಯಬೇಕಾಗಬಹುದು. ಅದು ಮಿದುಳಿಗೆ ತಲುಪದಿರಲು ಈ ರೀತಿ ಮಾಡಲಾಗುತ್ತದೆ. ಔಷಧಿ ಕೊರತೆ ಇದೆ ಎಂಬ ಕಾರಣಕ್ಕೆ ಇಂತಹ ತೀರ್ಮಾನ ಕೈಗೊಳ್ಳುವುದಿಲ್ಲ. ಇದು ಔಷಧಿ ಕೊರತೆಯಿಂದಾದ ಸಮಸ್ಯೆಯಲ್ಲ. ಬ್ಲ್ಯಾಕ್ ಫಂಗಸ್ ರೋಗಿಗೆ ಚಿಕಿತ್ಸೆ ನೀಡುವ ಬಗ್ಗೆ ದಂತವೈದ್ಯರು, ನೇತ್ರತಜ್ಞರು ಪರೀಕ್ಷಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಆದರೆ ಇದಕ್ಕೆ ಬೇಕಾದ ಔಷಧಿ ಅವಶ್ಯಕತೆಗೆ ಅನುಗುಣವಾಗಿ ಸಿಗುತ್ತಿಲ್ಲ. ಈ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚಿಸಿ ಹೆಚ್ಚಿನ ಔಷಧಿ ಪಡೆಯಲು ಕ್ರಮ ವಹಿಸಲಾಗಿದೆ ಎಂದರು.

ಕೋವಿಡ್ ನಿಂದ ಗುಣಮುಖರಾದ ಇಬ್ಬರು ಮಕ್ಕಳಿಗೆ ಕವಾಸಕಿ ಸೋಂಕು ಬಂದಿರುವ ಸಾಧ್ಯತೆ ಇದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ. ಇದಕ್ಕೆ ಸಾಮಾಜಿಕ ಹಿನ್ನೆಲೆ, ಪೌಷ್ಠಿಕ ಆಹಾರದ ಕೊರತೆ ಕೂಡ ಕಾರಣ. ಈ ಮಕ್ಕಳ ಚಿಕಿತ್ಸೆಗೆ ಹೆಚ್ಚು ಗಮನಹರಿಸಲು ಸೂಚಿಸಲಾಗಿದೆ. ಹಾಗೆಯೇ ಈ ಸೋಂಕು ಏಕೆ ಬಂದಿದೆ ಎಂಬ ಬಗ್ಗೆಯೂ ಮಾಹಿತಿ ಪಡೆಯಲಾಗುತ್ತಿದೆ ಎಂದರು.

ಸಚಿವರು ಹೇಳಿದ ಇತರೆ ಅಂಶಗಳು

19 ವರ್ಷದವರಿಗೂ ಮಕ್ಕಳ ತಜ್ಞರೇ ಚಿಕಿತ್ಸೆ ನೀಡಬೇಕು. ಈ ವಯೋಮಾನದವರು ಸಮಸ್ಯೆ ಬಂದಾಗ ಮಕ್ಕಳ ತಜ್ಞರ ಬಳಿ ತೋರಿಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಕೂಡ ಹೇಳಿದೆ. ಈ ಬಗ್ಗೆ ಹೆಚ್ಚು ಪ್ರಚಾರ ಮಾಡಬೇಕಿದೆ.

ಮೂರನೇ ಅಲೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂಕಿ ಅಂಶಗಳನ್ನು ರಾಜ್ಯ ಸರ್ಕಾರ ಮುಚ್ಚಿಡುವ ಪ್ರಮೇಯವೇ ಇಲ್ಲ. ವಿರೋಧಪಕ್ಷದ ನಾಯಕರು ಮಾಹಿತಿ ಕೇಳಿದಾಗಲೂ ಒದಗಿಸಲಾಗಿದೆ.

ಮೂರನೇ ಅಲೆ ಈಗಲೇ ಬಂದಿದೆ ಎಂದು ಹೇಳಲಾಗುವುದಿಲ್ಲ. ಈಗ ಇನ್ನೂ ಎರಡಲೇ ಅಲೆ ಇದೆ. ಮಕ್ಕಳ ಮೇಲೆ ಆದಷ್ಟು ಎಚ್ಚರಿಕೆಯಿಂದ ನಿಗಾ ವಹಿಸಬೇಕು.

ಲಸಿಕೆಯನ್ನು ಬೇರೆ ಕಡೆ ನೀಡುತ್ತಿರುವುದರ ಬಗ್ಗೆ ಮಾಹಿತಿ ಇಲ್ಲ. ಆದರೆ ನೋಂದಾಯಿಸಿಕೊಂಡವರಿಗೆ ಲಸಿಕೆ ನಿರಾಕರಿಸಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ.

Tags: #cmbsy#saakshatvbengaluruCovid19covidindiacovidkarnatakadistrict hospitalsDr. K SudhakarHealth and Medical Education Minister Dr.K.Sudhakarkarnataka
ShareTweetSendShare
Join us on:

Related Posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

by admin
August 11, 2026
0

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ 'ಸ್ಲಮ್ ಡಾಗ್' ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್; ‌ಪವರ್‌ಫುಲ್ ಅಧಿಕಾರಿ 'ಗೌರಿ ಹೆಗ್ಡೆ' ಪಾತ್ರದಲ್ಲಿ ಟಬು!...

varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

by admin
August 11, 2026
0

ಅಷ್ಟ ಐಶ್ವರ್ಯ ಪಡೆಯಲು ತಾಂತ್ರಿಕ ಪರಿಹಾರ ಅಷ್ಟ ಲಕ್ಷ್ಮಿ ನಾಣ್ಯಗಳು ಶುಕ್ರವಾರ ಮಹಾಲಕ್ಷ್ಮಿ ದೇವಿಗೆ ಶುಭ ದಿನ. ಆ ಶುಕ್ರವಾರ ಬರುವ ಶುಕ್ರ ಹೊರೆಯ ಸಮಯದಲ್ಲಿ ನಾವು...

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram