ಎಸ್ಬಿಐ ನಿಂದ 5 ಲಕ್ಷ ರೂಪಾಯಿಗಳ ಕೋವಿಡ್ ಪರ್ಸನಲ್ ಲೋನ್! ಇದಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಎಸ್ಬಿಐ ತನ್ನ ಗ್ರಾಹಕರಿಗೆ ವಿಶೇಷ ಕೊಡುಗೆಯನ್ನು ತಂದಿದೆ. ಈ ಯೋಜನೆಯಲ್ಲಿ ಬ್ಯಾಂಕ್ 5 ಲಕ್ಷ ರೂಪಾಯಿಗಳ ವೈಯಕ್ತಿಕ ಸಾಲವನ್ನು ಗ್ರಾಹಕರಿಗೆ ಅಗ್ಗದ ಬಡ್ಡಿ ದರದಲ್ಲಿ ನೀಡುತ್ತಿದೆ. ದೇಶಾದ್ಯಂತ ಕೊರೋನಾ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ಎಸ್ಬಿಐ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಬ್ಯಾಂಕ್ ಇದಕ್ಕೆ ಕೋವಿಡ್ ಪರ್ಸನಲ್ ಲೋನ್ ಎಂದು ಹೆಸರಿಸಿದೆ. ಈ ಸಾಲಕ್ಕೆ ಸಂಬಂಧಿಸಿದಂತೆ ಅತ್ಯಂತ ಮುಖ್ಯವಾದ ವಿಷಯವೆಂದರೆ ಇದಕ್ಕಾಗಿ ನೀವು ಯಾವುದೇ ರೀತಿಯ ಭದ್ರತೆಯನ್ನು ಒದಗಿಸುವ ಅಗತ್ಯವಿಲ್ಲ.

ಕೊರೋನಾ ಬಿಕ್ಕಟ್ಟಿನಲ್ಲಿ ತಮ್ಮ ಪ್ರೀತಿಪಾತ್ರರ ಚಿಕಿತ್ಸೆಗೆ ಹಣದ ಸಮಸ್ಯೆಯಾಗಬಾರದು ಎಂಬುದನ್ನು ಗಮನದಲ್ಲಿಟ್ಟುಕೊಂಡು ಬ್ಯಾಂಕ್ ಈ ವಿಶೇಷ ಹೆಜ್ಜೆ ಇಟ್ಟಿದೆ.
ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಕಾರ, ಸಂಬಳ ಪಡೆಯುವವರು, ಸಂಬಳ ಪಡೆಯದವರು ಮತ್ತು ಪಿಂಚಣಿದಾರರು ಕೋವಿಡ್ -19 ಸೋಂಕಿನ ಚಿಕಿತ್ಸೆಗಾಗಿ 25 ಸಾವಿರ ರೂ.ಗಳಿಂದ 5 ಲಕ್ಷ ರೂ.ವರೆಗಿನ ವೈಯಕ್ತಿಕ ಸಾಲವನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ.
ಬಡ್ಡಿ ಎಷ್ಟು ಇರುತ್ತದೆ?
ಈ ಸಾಲವನ್ನು ಮರುಪಾವತಿಸಲು ಬ್ಯಾಂಕ್ ಗ್ರಾಹಕರಿಗೆ 5 ವರ್ಷಗಳ ಅವಧಿ ನೀಡುತ್ತಿದೆ. ಈ ಸಾಲದ ಮೇಲೆ ಬ್ಯಾಂಕ್ ಗ್ರಾಹಕರಿಗೆ ಶೇ 8.5 ರಷ್ಟು ಬಡ್ಡಿ ವಿಧಿಸುತ್ತದೆ. ಅದೇ ಸಮಯದಲ್ಲಿ, ಅಸುರಕ್ಷಿತ ವೈಯಕ್ತಿಕ ಸಾಲಗಳ ಬಡ್ಡಿದರಗಳು 10 ರಿಂದ 16 ಪ್ರತಿಶತದವರೆಗೆ ಇರುತ್ತವೆ.
ಎಸ್ಬಿಐ ಮುಖ್ಯಸ್ಥ ದಿನೇಶ್ ಖಾರಾ ಮತ್ತು ಭಾರತೀಯ ಬ್ಯಾಂಕುಗಳ ಸಂಘದ ಅಧ್ಯಕ್ಷ ರಾಜ್ ಕಿರಣ್ ರಾಯ್ ನಡುವೆ ಭಾನುವಾರ ಮಹತ್ವದ ಸಭೆ ನಡೆದಿದ್ದು, ಈ ನಿರ್ಧಾರ ಕೈಗೊಳ್ಳಲಾಗಿದೆ. ಕೋವಿಡ್ ವೈಯಕ್ತಿಕ ಸಾಲವನ್ನು ಈಗಾಗಲೇ ಸಾರ್ವಜನಿಕ ವಲಯದ ಬ್ಯಾಂಕುಗಳು ಅನುಮೋದಿಸಿವೆ. ಈ ಸಾಲವು ಸಂಬಳ ಪಡೆಯುವ ಮತ್ತು ಸಂಬಳ ಪಡೆಯದ ವ್ಯಕ್ತಿಗಳಿಗೆ ಲಭ್ಯವಿರುತ್ತದೆ.
ಈ ರೀತಿಯಾಗಿ ನೀವು ಸಾಲ ತೆಗೆದುಕೊಳ್ಳಬಹುದು
ಆಸ್ಪತ್ರೆಯ ಬಿಲ್ ಅನ್ನು ಬ್ಯಾಂಕಿನಲ್ಲಿ ತೋರಿಸುವ ಮೂಲಕ ನೀವು ಈ ಸಾಲವನ್ನು ತೆಗೆದುಕೊಳ್ಳಬಹುದು. ನಿಮ್ಮ ಪಾವತಿಯ ಸ್ಥಿತಿ ಮತ್ತು ಸಾಮರ್ಥ್ಯವನ್ನು ಪರಿಗಣಿಸಿ ಬ್ಯಾಂಕ್ ನಿಮಗೆ ಸಾಲವನ್ನು ನೀಡುತ್ತದೆ. ಇದಲ್ಲದೆ, ಕೊರೋನಾ ರೋಗಿಯ ಚಿಕಿತ್ಸೆಯ ವೆಚ್ಚದ ಅಂದಾಜು ಮೊತ್ತವನ್ನು ತಿಳಿಸುವ ಮೂಲಕ ನೀವು ಈ ಸೌಲಭ್ಯವನ್ನು ಪಡೆಯಬಹುದು. ಚಿಕಿತ್ಸೆ ವೆಚ್ಚದ ಬಿಲ್ ಅನ್ನು ತೆಗೆದುಕೊಂಡು ಬ್ಯಾಂಕಿನಲ್ಲಿ ಸಾಲಕ್ಕೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದರಲ್ಲಿ ಬ್ಯಾಂಕುಗಳು 25 ಸಾವಿರದಿಂದ 5 ಲಕ್ಷ ರೂಪಾಯಿಗಳವರೆಗೆ ಸಾಲ ನೀಡಬಹುದು. ಆದಾಗ್ಯೂ, ಸಾಲವನ್ನು ಅನುಮೋದಿಸಲು ಮತ್ತು ತಿರಸ್ಕರಿಸಲು ಬ್ಯಾಂಕಿಗೆ ಹಕ್ಕಿದೆ.

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
https://twitter.com/SaakshaTv/status/1398104898575740931?s=19
https://twitter.com/SaakshaTv/status/1398437021916532742?s=19
ಉಡುಪಿ – ಕೋರ್ಟ್ ಮೆಟ್ಟಿಲೇರಿದ ಅಪ್ರಾಪ್ತ ಬಾಲಕನಿಗೆ ಸನ್ಯಾಸ ದೀಕ್ಷೆ#Udupi #Shiroormutt https://t.co/0e2wwvp7Wk
— Saaksha TV (@SaakshaTv) May 29, 2021
https://twitter.com/SaakshaTv/status/1398467199170400268?s=19
ತೊಂಡೆಕಾಯಿ ಬಜ್ಜಿ#Saakshatv #cookingrecipe #thondekayibajji https://t.co/pfPteVFxqX
— Saaksha TV (@SaakshaTv) May 29, 2021
#SBI #coronatreatment








