ಶತಕದತ್ತ ಪೆಟ್ರೋಲ್ | ಸುಂಕ ವಿನಾಯಿತಿ ಪ್ರಸ್ತಾಪ ಇಲ್ಲ ಎಂದ ಸಿಎಂ
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಸುಂಕದ ವಿನಾಯಿತಿ ಕುರಿತು ಯಾವುದೇ ಪ್ರಸ್ತಾಪವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಕೊರೊನಾ ಸಂಕಷ್ಟದ ಮಧ್ಯೆ ದೇಶದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಗಗನಕ್ಕೇರುತ್ತಿದೆ. ಅದರಂತೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಸಾರ್ವಕಾಲಿಕ ದಾಖಲೆ ಬರೆದಿದ್ದು, 98.19 ರೂಪಾಯಿಯಷ್ಟಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಪೆಟ್ರೋಲ್ ಬೆಲೆ ಶತಕ ಬಾರಿಸಲಿದೆ.
ಈ ಕುರಿತಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಸುದ್ದಿಗಾರರು ಪ್ರಶ್ನಿಸಿದ್ದು, ಈ ವೇಳೆ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯದಿಂದ ಸುಂಕ ವಿನಾಯಿತಿಯ ಪ್ರಸ್ತಾಪ ಇಲ್ಲ. ಆ ರೀತಿಯ ಯಾವುದೇ ವಿಚಾರ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಲಾಕ್ ಡೌನ್ ಸಡಿಲಿಕೆ ಬಗ್ಗೆ ಮಾತನಾಡಿ, ಮಹಾರಾಷ್ಟ್ರ ಮಾದರಿಯಲ್ಲಿ ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಯಾವ ವಿನಾಯಿತಿ ಕೊಡಬೇಕು ಎಂದು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.









