ಮೃಗಾಲಯಗಳ ರಕ್ಷಣೆಗೆ ನಿಂತ ಡಿ ಬಾಸ್ – ಪ್ರಾಣಿಗಳನ್ನ ದತ್ತು ಪಡೆಯುವಂತೆ ಮನವಿ
ಬೆಂಗಳೂರು : ಕೊರೊನಾ ಲಾಕ್ ಡೌನ್ ನಿಂದಾಗಿ ಕೇವಲ ಮನುಷ್ಯರು ಮಾತ್ರವೇ ಸಂಕಷ್ಟಕ್ಕೆ ಸಿಲುಕಿಲ್ಲ. ಪ್ರಾಣಿಗಳ ರಕ್ಷಣೆಯೂ ಅನಿವಾರ್ಯತೆಯಾಗಿದೆ.. ಲಾಕ್ ಡೌನ್ ಸಮಯದಲ್ಲಿ ರಾಜ್ಯದ 9 ಮೃಗಾಲಯಗಳು ಸಂಕಷ್ಟದಲ್ಲಿವೆ. ಪ್ರವಾಸಿಗರ ಹಣದಿಂದ ಮೃಗಾಲಯದ ಬಹುತೇಕ ಖರ್ಚು ಸಾಗುತ್ತಿತ್ತು. ಆದರೀಗ ಮೃಗಾಲಯಗಳು ಕಷ್ಟದಲ್ಲಿವೆ. ಇದೀಗ ಪ್ರಾಣಿ ಪಕ್ಷಿ, ಮರ ಗಿಡಗಳ ಮೇಲೆ ಅಪಾರ ಪ್ರೀತಿ ಹೊಂದಿರುವ ಸ್ಯಾಂಡಲ್ ವುಡ್ ನ ಡಿ ಬಾಸ್ ಸಂಕಷ್ಟದಲ್ಲಿರುವ ಪ್ರಾಣಿ, ಪಕ್ಷಿಗಳ ನೆರವಿಗೆ ನಿಂತಿದ್ದಾರೆ.
ಅಲ್ಲದೇ ಪ್ರಾಣಿಪಕ್ಷಿಗಳನ್ನು ಉಳಿಸಿ ಬೆಳಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಕರ್ನಾಟಕದಲ್ಲಿ ಸುಮಾರು 9 ಮೃಗಾಲಯಗಳಿದ್ದು, ಕೊರೊನಾದಿಂದ ಸಂಕಷ್ಟದಲ್ಲಿವೆ. ಪ್ರಾಣಿಗಳನ್ನು ದತ್ತು ಪಡೆಯುವ ಮೂಲಕ ನೆರವಾಗಿ ಎಂದು ಕೇಳಿಕೊಂಡಿದ್ದಾರೆ. ಈ ಬಗ್ಗೆ ವಿಡಿಯೋ ಮೂಲಕ ದರ್ಶನ್ ಮಾಹಿತಿ ಹಂಚಿಕೊಂಡಿದ್ದಾರೆ.
‘ಕೋವಿಡ್ ಅನ್ನೋ ಮಹಾಮಾರಿ ಒಂದೂವರೆ ವರ್ಷದಿಂದ ಇಡೀ ನಮ್ಮ ದೇಶದಾದ್ಯಂತ ಎಲ್ಲರಿಗೂ ತೊಂದರೆ ಕೊಟ್ಟಿದೆ. ಮಾನವ ಕುಲಕ್ಕೆ ಎಷ್ಟೋ ತೊಂದರೆ ಆಗಿದೆಯೋ ಅಷ್ಟೇ ತೊಂದರೆ ಪ್ರಾಣಿ ಸಂಕುಲಕ್ಕೂ ಆಗಿದೆ. ಕರ್ನಾಟಕದಲ್ಲಿ 9 ಮೃಗಾಲಯಗಳಿವೆ. ಸುಮಾರು 5 ಸಾವಿರಕ್ಕೂ ಹೆಚ್ಚು ಪ್ರಾಣಿಗಳಿವೆ.’ ದಯವಿಟ್ಟು ಪ್ರಾಣಿಗಳನ್ನು ದತ್ತು ಪಡೆಯಿರಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಹುಲಿಗೆ 1 ಲಕ್ಷ ರೂ, ಅನೆಗೆ 1.75 ಲಕ್ಷ ರೂ. ‘ಒಂದು ಹಕ್ಕಿಗೆ 1 ಸಾವಿರ, ಹುಲಿಗೆ 1 ಲಕ್ಷ, ಆನೆಗೆ 1.75 ಲಕ್ಷ ಆಗುತ್ತೆ. ಈ ಹಣವನ್ನು ಒಂದು ವರ್ಷಕ್ಕೆ ಕೊಡಬೇಕು. ದಯಮಾಡಿ ಈ ಪ್ರಾಣಿ ಸಂಕುಲವನ್ನು ಉಳಿಸಲು, ಮೃಗಾಲಯಗಳನ್ನು ಬೆಳಸಲಿಕ್ಕೆ ಎಲ್ಲರೂ ಕೈ ಜೋಡಿಸಿ. ಕೋವಿಡ್ ನಲ್ಲಿ ಎಲ್ಲರೂ ಒಂದಾಗೋಣ’ ಎಂದು ಮನವಿ ಮಾಡಿದ್ದಾರೆ.
https://twitter.com/i/status/1401079527242027012







