ತೈಲ ಬೆಲೆ ಏರಿಕೆ : ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
ಬೆಳಗಾವಿ : ದೇಶದಲ್ಲಿ ಪದೇ ಪದೇ ತೈಲ ಬೆಲೆ ಏರಿಕೆ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.
ಪೆಟ್ರೋಲ್ ಬಂಕಿನಲ್ಲಿ ಗ್ರಾಹಕರಿಗೆ ಪೆಟ್ರೋಲ್ ಹಾಕುವ ಮೂಲಕ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಿಂಡಲಗಾ ರಸ್ತೆಯಲ್ಲಿರುವ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಲಾಗಿದೆ.
ಈ ವೇಳೆ ಸುದ್ದಗಾರರೊಂದಿಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ದೇಶದ ಪ್ರಜೆಗಳ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ತಲುಪುತ್ತಿದ್ದರೆ ಇತ್ತ ಪ್ರಧಾನಿ ನರೇಂದ್ರ ಮೋದಿ ಆಪ್ತರಾದ ಮುಕೇಶ್ ಅಂಬಾನಿ ಹಾಗೂ ಅದಾನಿ ಅವರಷ್ಟೇ ಶ್ರೀಮಂತರಾಗುತ್ತಿದ್ದಾರೆ.
35 ರೂ.ಗೆ ಆಮದು ಆಗುವ ತೈಲ ಬೆಲೆಯನ್ನು ದೇಶದಲ್ಲಿ ಒಂದು ಲೀಟರ್ ಗೆ ನೂರರಂತೆ ಮಾರಟ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.
ತೈಲದ ಹೆಸರಲ್ಲಿ ಮೋದಿ ಸರ್ಕಾರ ಲೂಟಿ ಹೊಡೆಯುತ್ತಿದೆ. ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ತೈಲ ಬೆಲೆ 50 ರೂ.ಗಿಂತ ಕಡಿಮೆ ಇತ್ತು.
ಬಿಜೆಪಿ ಸರ್ಕಾರದಿಂದ ಜನಸಾಮಾನ್ಯರ ಪರಿಸ್ಥಿತಿ ಸುಧಾರಿಸುವುದಿಲ್ಲ. ಸಾಮಾನ್ಯರೇ ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.










