ಕೇಂದ್ರ ಆಯುಷ್ ಸಚಿವಾಲಯದಿಂದ ಮಕ್ಕಳಿಗಾಗಿ ವಿಶೇಷ ಮಾರ್ಗಸೂಚಿ
ಕೊರೋನಾ ಮೂರನೇ ಅಲೆಯ ಹಿನ್ನೆಲೆಯಲ್ಲಿ ಪ್ರತಿ ಹಂತದಲ್ಲೂ ಸಿದ್ಧತೆಗಳನ್ನು ಪ್ರಾರಂಭಿಸಲಾಗುತ್ತಿದೆ. ಮಕ್ಕಳಿಗಾಗಿ ಕೇಂದ್ರ ಆಯುಷ್ ಸಚಿವಾಲಯ ವಿಶೇಷ ಮಾರ್ಗಸೂಚಿ ಹೊರಡಿಸಿದೆ. ಇದರಲ್ಲಿ, ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹೆಚ್ಚಿನ ಒತ್ತು ನೀಡಲಾಗಿದೆ.
ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನ ಶಿಶುವೈದ್ಯ ಡಾ.ಎಸ್.ರಾಜಗೋಪಾಲ್ ಅವರು ತಮ್ಮ ವಿಶೇಷ ಸಂಭಾಷಣೆಯಲ್ಲಿ ಮಕ್ಕಳಲ್ಲಿ ಕೊರೋನಾ ಕಂಡು ಬರುವ ಸಾಧ್ಯತೆ ಕಡಿಮೆ ಇದ್ದರೂ, ಇದಕ್ಕಾಗಿ ವಿಶೇಷ ಕಿಟ್ ತಯಾರಿಸಲಾಗಿದ್ದು, ಇದು ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ.

ಡಾ ಎಸ್ ರಾಜಗೋಪಾಲ್ ಅವರ ಮಾರ್ಗಸೂಚಿಯ ಪ್ರಕಾರ, ಮಕ್ಕಳನ್ನು ವಯಸ್ಸಿನ ಪ್ರಕಾರ ವರ್ಗೀಕರಿಸಲಾಗಿದೆ.
ಇದರಲ್ಲಿ 10 ರಿಂದ 15, 5 ರಿಂದ 10 ಮತ್ತು ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ವಯಸ್ಸಿನ ಪ್ರಕಾರ ಔಷಧಿಯ ಡೋಸೇಜ್ ನೀಡುವಂತೆ ಕೇಳಿಕೊಳ್ಳಲಾಗಿದೆ.
ವಯಸ್ಕರಂತೆ ಮಕ್ಕಳಿಗೂ ಆಯುರ್ವೇದ ಔಷಧಿ ಅಳವಡಿಸಿಕೊಳ್ಳಲು ತಿಳಿಸಲಾಗಿದೆ ಎಂದು ಡಾ.ರಾಜಗೋಪಾಲ್ ಹೇಳಿದ್ದಾರೆ. ಇದರ ಅಡಿಯಲ್ಲಿ ಮಕ್ಕಳ ಪೋಷಕರಿಗೆ ಆಯುರ್ವೇದ ಔಷಧಿಗಳನ್ನು ವಿಶೇಷವಾಗಿ ಬಳಸುವಂತೆ ತಿಳಿಸಲಾಗಿದೆ. ಇದರೊಂದಿಗೆ ಮಕ್ಕಳಿಗೆ ಉಗುರು ಬಿಸಿ ನೀರನ್ನು ನೀಡುವಂತೆ ಸೂಚಿಸಲಾಗಿದೆ.
ಆಯುಷ್ ಸಚಿವಾಲಯದ ಮಾರ್ಗಸೂಚಿಗಳಲ್ಲಿ ಮಕ್ಕಳ ನಡವಳಿಕೆಯನ್ನು ಸಹ ಗಮನಿಸಲು ತಿಳಿಸಲಾಗಿದೆ ಎಂದು ಡಾ.ರಾಜಗೋಪಾಲ್ ಹೇಳಿದ್ದಾರೆ. ಮಕ್ಕಳಲ್ಲಿ ಜ್ವರ ಮಾತ್ರ ಕಾಣಿಸಿಕೊಳ್ಳುತ್ತದೆ ಎಂದು ವರದಿಯಾಗಿಲ್ಲ. ಇದ್ದಕ್ಕಿದ್ದಂತೆ, ಮಕ್ಕಳ ಚಟುವಟಿಕೆ ಸ್ವಲ್ಪ ಕಡಿಮೆಯಾದಂತೆ ಅನಿಸಿದರೂ ಸಹ ವೈದ್ಯರನ್ನು ಸಂಪರ್ಕಿಸಲು ಕೇಳಿಕೊಳ್ಳಲಾಗಿದೆ.
ಈ ಮಾರ್ಗಸೂಚಿಯಲ್ಲಿ ಸಾಸಿವೆ ಎಣ್ಣೆಯ ಬಳಕೆಯನ್ನು ಕಡ್ಡಾಯಗೊಳಿಸಲಾಗಿದೆ. ಈ ತೈಲವು ಕೊರೋನಾ ಸೋಂಕಿನ ವಿರುದ್ಧ ಗುರಾಣಿಯಂತೆ ಕಾರ್ಯನಿರ್ವಹಿಸುತ್ತದೆ ಎಂದು ಹೇಳಲಾಗುತ್ತಿದೆ. ಇದು ವೈರಸ್ ಸೋಂಕನ್ನು ಮೂಗಿಗೆ ಪ್ರವೇಶಿಸುವುದನ್ನು ತಡೆಯುತ್ತದೆ. ಈ ಎಣ್ಣೆಯನ್ನು ಪ್ರತಿದಿನ ಬಳಸಲು ಮಕ್ಕಳಿಗೆ ತಿಳಿಸಲಾಗಿದೆ.
ಕೊರೋನಾ ಸೋಂಕಿನ ಸಂದರ್ಭದಲ್ಲಿ ರೋಗಿಗಳನ್ನು ಸಾಮಾನ್ಯವಾಗಿ ಕ್ವಾರಂಟೈನ್ ಗೆ ಕಳುಹಿಸಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಮಕ್ಕಳು ಪ್ರತ್ಯೇಕವಾಗಿದ್ದರೆ, ಅವರು ತುಂಬಾ ಮಾನಸಿಕ ಪರಿಣಾಮವನ್ನು ಅನುಭವಿಸಬೇಕಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಮಕ್ಕಳನ್ನು ನೋಡಿಕೊಳ್ಳಲು ವಿಶೇಷ ಗಮನ ಹರಿಸಲಾಗಿದೆ. ಇದಕ್ಕಾಗಿ ಪೋಷಕರಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದೆ.

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
ಕೊತ್ತಂಬರಿ ರಸ ತಯಾರಿಸುವ ವಿಧಾನ ಮತ್ತು ಅದರ ಪ್ರಯೋಜನಗಳು#corianderjuice #saakshatv #healthtips https://t.co/HALRYUPZdb
— Saaksha TV (@SaakshaTv) June 16, 2021
ಮನೆಯಲ್ಲೇ ಸುಲಭವಾಗಿ ತಯಾರಿಸಿ ಬಟರ್ ನಾನ್#Saakshatv #cookingrecipe #homemade #butter https://t.co/x2exmxmjuH
— Saaksha TV (@SaakshaTv) June 16, 2021
ಪ್ಯಾನ್ ಕಾರ್ಡ್ ಕಳೆದುಹೋಗಿದೆಯೇ? ಹಾಗಿದ್ದರೆ ಅದನ್ನು ಸುಲಭವಾಗಿ ಡೌನ್ಲೋಡ್ ಮಾಡುವ ವಿಧಾನ ಇಲ್ಲಿದೆ#download #pancard https://t.co/dseCciimAf
— Saaksha TV (@SaakshaTv) June 17, 2021
ಏನಿದು ವೇತನ (Salary) ಖಾತೆ? ಇದರ ಪ್ರಯೋಜನಗಳೇನು?#salaryaccount https://t.co/LCCPGdQUTA
— Saaksha TV (@SaakshaTv) June 16, 2021
#MinistryofAYUSH #newguidelines







