ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಆನೆಗಳ ಹತ್ಯೆಗೆ ಪರವಾನಗಿ ನೀಡಿದ ಸರ್ಕಾರ..!

admin by admin
February 12, 2020
in International, Newsbeat
Share on FacebookShare on TwitterShare on WhatsappShare on Telegram

ಮಾನವ ಮತ್ತು ವನ್ಯಜೀವಿಗಳ ಸಂಘರ್ಷ ತಡೆಗಟ್ಟಲು ಇಲ್ಲೊಂದು ದೇಶ ವನ್ಯಜೀವಿಗಳ ಮಾರಣಹೋಮಕ್ಕೆ ಮುಂದಾಗಿ ಕಾನೂನು ಜಾರಿಗೊಳಿಸಿದೆ. ಹೌದು, ಕಗ್ಗತ್ತಲೆಯ ಕಾಡು ಎಂದೇ ಖ್ಯಾತಿ ಪಡೆದಿರುವ ಆಫ್ರಿಕಾದಲ್ಲಿ ವನ್ಯಜೀವಿಗಳು ಹೇರಳವಾಗಿದೆ. ಅದಕ್ಕೆ ಪ್ರಮುಖ ಕಾರಣ ಅಲ್ಲಿನ ಪರಿಸರ. ಇತ್ತೀಚೆಗೆ ಆಫ್ರಿಕಾದ ಬೋಟ್ಸ್ವಾನಾ ದೇಶದಲ್ಲಿ ಆನೆಗಳು ಹಾಗೂ ಜನರ ನಡುವೆ ಸಂಘರ್ಷ ತಾರಕಕ್ಕೇರಿದ್ದು. ಇದನ್ನ ತಡೆಗಟ್ಟುವ ನಿಟ್ಟಿನಲ್ಲಿ ಅಲ್ಲಿ ಸರ್ಕಾರ ಆನೆಗಳ ಕೊಲ್ಲಲು ಅನುಮತಿ ನೀಡಿದೆ.

ಜಗತ್ತಿನಲ್ಲಿಯೇ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ದೇಶವಾದ ಬೋಟ್ಸ್ವಾನಾದಲ್ಲಿ ಆನೆ-ಮಾನವ ನಡುವಿನ ಸಂಘರ್ಷ ದೊಡ್ಡ ತಲೆನೋವುವಾಗಿದೆ. ಹೀಗಾಗಿ ಇದರ ನಿವಾರಣೆಗೆ ಮುಂದಾಗಿರುವ ಬೋಟ್ಸ್ವಾನಾ ಸರ್ಕಾರ ಆನೆಗಳ ಹತ್ಯೆಯ ಮೇಲೆ ಹೇರಿದ್ದ ನಿಷೇಧವನ್ನು ತೆರವುಗೊಳಿಸಿ, ಇದೀಗಾ ಆನೆಗಳ ಹತ್ಯೆಗೆ ಪರವಾನಗಿ ನೀಡಲು ಹರಾಜು ಪ್ರಕ್ರಿಯೆ ನಡೆಸಿದೆ.

Related posts

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

August 4, 2026
ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

August 4, 2026

ಆನೆಗಳ ಉಪಟಳ ತಡೆಯಲು ಸುಮಾರು 70 ಆನೆಗಳ ಹತ್ಯೆಗೆ ಅಲ್ಲಿನ ಸರ್ಕಾರ ಪರವಾನಗಿ ನೀಡಿದೆ. ಆನೆಗಳ ಹತ್ಯೆಯ ಮೇಲೆ ಐದು ವರ್ಷಗಳ ನಿಷೇಧ ಹೇರಲಾಗಿತ್ತು. ಅದನ್ನು ಅಧ್ಯಕ್ಷ ಮೊಕ್‍ಗ್ವೀಟ್ಸಿ ಮಸಿಸಿ ಸರ್ಕಾರ ತೆರವುಗೊಳಿಸಿ, ಇದೀಗಾ ಆನೆಗಳ ಮಾರಣಹೋಮಕ್ಕೆ ಆದೇಶ ನೀಡಿದ್ದಾರೆ.

ಪ್ರಾಣಿ ಮತ್ತು ಮನುಷ್ಯರ ನಡುವಿನ ಸಂಘರ್ಷವನ್ನು ನಿಯಂತ್ರಣಕ್ಕೆ ತರಲು ಆನೆಗಳ ಹತ್ಯೆ ಅತ್ಯಗತ್ಯವಾಗಿದೆ. ಆನೆಗಳಿಂದಾಗಿ ರೈತರು ತಮ್ಮ ಬೆಳೆಗಳನ್ನು ಕಳೆದುಕೊಂಡು ನಷ್ಟ ಅನುಭವಿಸಬೇಕಾಗಿದೆ. ಅಲ್ಲದೆ ಆನೆಗಳ ದಾಳಿಯಿಂದ ಸಾಕಷ್ಟು ಜನರು ಬಲಿಯಾಗಿದ್ದಾರೆ. ಹಾಗೇ ಬೋಟ್ಸ್ವಾನಾದ ಹಳ್ಳಿಗಳಲ್ಲಿ ಆನೆಗಳ ಕಾಟದಿಂದ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಆನೆಗಳು ಹಳ್ಳಿಗಳಿಗೆ ನುಗ್ಗದಂತೆ ತಡೆಯಲು ಅವುಗಳನ್ನು ಕೊಲ್ಲುವುದು ಸೂಕ್ತ ಪರಿಹಾರವಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟಾರೆ ಆಫ್ರಿಕಾದ ಕೆಲ ದೇಶಗಳಲ್ಲಿ ಆನೆಗಳ ಸಂಖ್ಯೆ ಇಳಿಮುಖವಾಗಿದೆ. ಆದರೆ ಜಿಂಬಾಬ್ವೆ ಮತ್ತು ಬೋಟ್ಸ್ವಾನಾಗಳಲ್ಲಿ ಆನೆಗಳ ಸಂಖ್ಯೆ ಮಿತಿ ಮೀರಿದೆ. ಬೋಟ್ಸ್ವಾನಾದಲ್ಲಿ 1,30,000ಕ್ಕೂ ಅಧಿಕ ಆನೆಗಳಿವೆ. 1990ರ ವೇಳೆ ಇಲ್ಲಿ 80,000 ಆನೆಗಳ ಸಂಖ್ಯೆ ಇತ್ತು. ಇದೀಗಾ ಆನೆಗಳ ಸಂಖ್ಯೆ ಅಧಿಕವಾಗಿದೆ. ಹೀಗಾಗಿ ಬೇಟೆ ನಿಯಂತ್ರಿತ ಪ್ರದೇಶಗಳಲ್ಲಿ ಆನೆಗಳನ್ನು ಕೊಲ್ಲಲು ಪರವಾನಗಿಗಳನ್ನು ನೀಡಲಾಗಿದೆ. ಹೀಗಾಗಿ ಹರಾಜು ಪ್ರಕ್ರಿಯೆಯಲ್ಲಿ ಏಳು ಪರವಾನಗಿಯನ್ನ ನೀಡಲಾಗಿದೆ. ಒಂದೊಂದು ಪರವಾನಗಿ ತಲಾ ಹತ್ತು ಆನೆಗಳ ಹತ್ಯೆಗೆ ಅವಕಾಶ ನೀಡುತ್ತದೆ. ಬೋಟ್ಸ್ವಾನಾದಲ್ಲಿ ನೋಂದಣಿ ಮಾಡಿಕೊಂಡಿರುವ ಕಂಪೆನಿಗಳಿಗೆ ಈಗಾಗಲೇ ಪರವಾನಗಿ ನೀಡಲಾಗಿದ್ದು, 2020ರಲ್ಲಿ 272 ಆನೆಗಳನ್ನು ಕೊಲ್ಲಲು ಸರ್ಕಾರ ನಿರ್ದೇಶಿಸಿದೆ.

ಆಫ್ರಿಕಾದ ಬೋಟ್ಸ್ವಾನಾಕ್ಕೆ ಪ್ರವಾಸೋದ್ಯಮ ಪ್ರಮುಖ ಆದಾಯದ ಮೂಲ. ಆನೆಗಳ ಛಾಯಾಚಿತ್ರ ತೆಗೆಯಲು 2.5 ಮಿಲಿಯನ್ ವಿದೇಶಿ ಪ್ರವಾಸಿಗರು ಬೋಟ್ಸ್ವಾನಾಕ್ಕೆ ಭೇಟಿ ನೀಡಿದ್ದಾರೆ. ದೇಶದ ಶೇ 11.5 ಪ್ರವಾಸೋದ್ಯಮ ಜಿಡಿಪಿಗೆ ಭಾರಿ ಕೊಡುಗೆ ನೀಡಿದೆ. 76,000 ಉದ್ಯೋಗಗಳನ್ನು ಸೃಷ್ಟಿಮಾಡಿದೆ. ಬೋಟ್ಸ್ವಾನಾಕ್ಕೆ ಇಲ್ಲಿನ ಆನೆಗಳು ವಾಣಿಜ್ಯಾತ್ಮಕ ಲಾಭವನ್ನೂ ನೀಡುತ್ತದೆ. ಆದರೆ ಆನೆಗಳ ಹತ್ಯೆ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Tags: AfricaBotswanaElephants
ShareTweetSendShare
Join us on:

Related Posts

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

by Shwetha
August 4, 2026
0

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ...

ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

by Shwetha
August 4, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ 19 ನೂತನ ಸಚಿವರ ಸೇರ್ಪಡೆಯಾಗಿದೆ. ಆದರೆ ಹಿರಿಯ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ...

ಪೊಲೀಸ್ ನೇಮಕಾತಿ ಗೊಂದಲ- 25 ದಿನ ಉಪವಾಸ ಕೂರಲಿ, ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಪೊಲೀಸ್ ನೇಮಕಾತಿ ಗೊಂದಲ- 25 ದಿನ ಉಪವಾಸ ಕೂರಲಿ, ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

by Shwetha
August 4, 2026
0

ಬೆಂಗಳೂರು: ಪೊಲೀಸ್ ನೇಮಕಾತಿ ಪರೀಕ್ಷೆಯ ಗೊಂದಲಗಳ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನೀಡಿರುವ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಪರೀಕ್ಷಾ ಅಕ್ರಮ...

ಚಾಮುಂಡೇಶ್ವರಿಗೆ ಮಡಿಲಕ್ಕಿ ಸೇವೆ ಸಲ್ಲಿಸಿದ ಶಾಸಕ ಇಕ್ಬಾಲ್ ಹುಸೇನ್

ಚಾಮುಂಡೇಶ್ವರಿಗೆ ಮಡಿಲಕ್ಕಿ ಸೇವೆ ಸಲ್ಲಿಸಿದ ಶಾಸಕ ಇಕ್ಬಾಲ್ ಹುಸೇನ್

by Shwetha
August 4, 2026
0

ರಾಮನಗರದ ಐತಿಹಾಸಿಕ ಚಾಮುಂಡೇಶ್ವರಿ ಕರಗ ಮಹೋತ್ಸವಕ್ಕೆ ಶಾಸಕ ಇಕ್ಬಾಲ್ ಹುಸೇನ್ ಚಾಲನೆ ನೀಡಿದ್ದಾರೆ. ಕರಗ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ದೇವಿಗೆ ಮಡಿಲಕ್ಕಿ ಸೇವೆ ಸಲ್ಲಿಸಿ ವಿಶೇಷ ಪೂಜೆ...

ಇಡಿ ಕಳುಹಿಸಿ ತನಿಖೆ ಮಾಡಿಸಿ- ದಾಖಲೆ ತೋರಿಸಲು ನಾನು ಸಿದ್ಧ ಮೋದಿ ಸಿದ್ಧರಾ? ನನ್ನ ದಾಖಲೆ ನೋಡಿ ನಿಮ್ಮ ಪದವಿ ತೋರಿಸಿ ಎಂದ ಅಭೀಜಿತ್ ದೀಪ್ಕೆ

ಇಡಿ ಕಳುಹಿಸಿ ತನಿಖೆ ಮಾಡಿಸಿ- ದಾಖಲೆ ತೋರಿಸಲು ನಾನು ಸಿದ್ಧ ಮೋದಿ ಸಿದ್ಧರಾ? ನನ್ನ ದಾಖಲೆ ನೋಡಿ ನಿಮ್ಮ ಪದವಿ ತೋರಿಸಿ ಎಂದ ಅಭೀಜಿತ್ ದೀಪ್ಕೆ

by Shwetha
August 4, 2026
0

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಯ ಕುರಿತಾದ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭೀಜಿತ್ ದೀಪ್ಕೆ ಅವರು ಪ್ರಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram