ಕೇಂದ್ರ ಸಚಿವ ಸಂಪುಟ ಪುನಾರಚಣೆ Union Cabinet : ಸದಾನಂದಗೌಡ ರಾಜೀನಾಮೆ
ನವದೆಹಲಿ : ಇಂದು ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗಲಿದ್ದು, ಸಚಿವರಾದ ಡಿವಿ ಸದಾನಂದಗೌಡ, ಸಂತೋಷ್ ಗಂಗ್ವಾರ್, ರಮೇಶ್ ಪೋಖ್ರಿಯಾಲ್ ‘ನಿಶಾಂಕ್’ ಮತ್ತು ದೇಬಶ್ರೀ ಚೌಧರಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಂತೋಷ್ ಗಂಗ್ವಾರ್ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರೆ ರಮೇಶ್ ಪೋಕ್ರಿಯಾಲ್ ಶಿಕ್ಷಣ ಸಚಿವರಾಗಿದ್ದರು. ಸದಾನಂದ ಗೌಡರು ರಾಸಾಯನಿಕ ಮತ್ತು ಗೊಬ್ಬರ ಸಚಿವರಾಗಿದ್ದರು.
ಇನ್ನು ಕರ್ನಾಟಕದ ಸಂಸದರಾದ ಎ ನಾರಾಯಣಸ್ವಾಮಿ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಕೇಂದ್ರ ಸಚಿವ ಸಂಪುಟ ಸೇರುವ ಅದೃಷ್ಠ ಒಲಿದು ಬಂದಿದೆ ಎಂದು ಮೂಲಗಳು ತಿಳಿಸಿವೆ. ಸದಾನಂದಗೌಡ ಅವರ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಅವರಿಗೆ ಚಾನ್ಸ್ ಸಿಕ್ಕಿದೆ.