ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹೆಣ್ಮಕ್ಳೇ ಸ್ಟ್ರಾಂಗ್ ಗುರು : ಸ್ತ್ರಿ ಶಕ್ತಿಗೆ ಕೊರೊನಾ ಸಲಾಂ

Mahesh M Dhandu by Mahesh M Dhandu
July 12, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಹೆಣ್ಮಕ್ಳೇ ಸ್ಟ್ರಾಂಗ್ ಗುರು : ಸ್ತ್ರಿ ಶಕ್ತಿಗೆ ಕೊರೊನಾ ಸಲಾಂ

ಸ್ತ್ರೀ ಶಕ್ತಿ ಸ್ವರೂಪಿ. ಹೆಣ್ಣು ಅಬಲೆ ಅಲ್ಲ, ಸಬಲೆ ಎಂದು ಹಿರಿಯರು ಸುಮ್ಮನೇ ಹೇಳಿಲ್ಲ. ಇತ್ತೀಚಿನ ಸಂಶೋಧನೆಯು ಈ ಮಾತನ್ನು ಗಟ್ಟಿಗೊಳಿಸುತ್ತಿವೆ. ಅನಾರೋಗ್ಯಕ್ಕೀಡದಾಗ ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚು ರೋಗನಿರೋಧಕ ಶಕ್ತಿ ಕಾಣಿಸುತ್ತದೆ ಎಂದು ಅಧ್ಯಯನಗಳು ತಿಳಿಸಿವೆ. ಇತ್ತೀಚಿನ ಹೆಮ್ಮಾರಿ ಕೊರೊನಾ ಕೂಡ ಮಹಿಳೆಯರ ಮೇಲೆ ಹೆಚ್ಚು ಪರಿಣಾಮ ಬೀರಿಲ್ಲ ಎಂದು ಯುಎಸ್ ನ ಯೇಲ್ ವಿಶ್ವವಿದ್ಯಾಲಯ ಆಶ್ರಯದಲ್ಲಿ ನಡೆದ ಸಂಶೋಧನೆಯಲ್ಲಿ ತಿಳಿದು ಬಂದಿದೆ.

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

ಕೊರೊನಾ ವೈರಸ್ ಸೋಂಕಿಗೆ ಒಳಗಾದಾಗ ದೇಹದ ರೋಗನಿರೋಧಕ ವ್ಯವಸ್ಥೆಯು ಪ್ರತಿಕ್ರಿಯಿಸುವ ವಿಧಾನವು ಹೆಣ್ಣು ಮತ್ತು ಗಂಡಿನಲ್ಲಿ ವಿಭಿನ್ನವಾಗಿರುತ್ತದೆ ಎಂದು ಸಂಶೋಧಕರು ಹೇಳುತ್ತಿದ್ದಾರೆ. ಹಾಗೆ ಕೊರೊನಾ ಸೋಂಕಿತ ಮಹಿಳೆಯರಿಗಿಂತ ಪುರುಷರಲ್ಲಿ ರೋಗಲಕ್ಷಣಗಳು ಹೆಚ್ಚಿರುತ್ತವೆ. ಅಲ್ಲದೆ ಸಾವಿನ ಪ್ರಮಾಣವೂ ಹೆಚ್ಚಿದೆ ಎಂದು ಅಧ್ಯಯನ ತಿಳಿಸಿದೆ.

ಕೋವಿಡ್ ರೋಗಿಗಳಲ್ಲಿ ಮಹಿಳೆಯರಿಗೆ ಹೋಲಿಸಿದರೆ ಪುರುಷರಲ್ಲಿ ಕೈನುರೊನಿಕ್ ಆಸಿಡ್ ಪ್ರಮಾಣ ಹೆಚ್ಚಿರುವುದಾಗಿ ಸಂಶೋಧನೆಯಲ್ಲಿ ತಿಳಿದುಬಂದಿದೆ. ಈ ಆಸಿಡ್ ಎಲ್-ಟ್ರಿಪ್ಟೋಪಾನ್ ಎಂಬ ಅಮೈನೋ ಆಮ್ಲ ಎಂಬ ಜೀವಕ್ರಿಯೆಯಲ್ಲಿ ಉತ್ಪತ್ತಿಯಾಗುವ ಮೆಟಾಬೊಲೈಟ್ ಆಗಿದೆ. ಈ ಆಮ್ಲವು ನಿಯಾಸಿನ್ ಎಂಬ ಪೋಷಕಾಂಶದ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ಆಸಿಡ್ ನ ಮಟ್ಟವು ಹೆಚ್ಚಾಗಿದ್ದರೆ, ರೋಗದ ತೀವ್ರತೆಯು ಹೆಚ್ಚು ಎಂದು ಪರಿಗಣಿಸಲಾಗುತ್ತದೆ.

immune

ಇನ್ನು ಈ ಅಧ್ಯಯನಕ್ಕಾಗಿ 22 ಮಹಿಳೆಯರು ಮತ್ತು 17 ಪುರುಷ ಕೋವಿಡ್ ಪೀಡಿತರಿಂದ ರಕ್ತದ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ. ತರುವಾಯ, 20 ಮಂದಿ ಸೋಂಕು ರಹಿತರ ಮಾದರಿಗಳಿಗೆ ಹೋಲಿಸಿ ಅಧ್ಯಯನ ಮಾಡಲಾಗಿದೆ. ಈ ಸಂಶೋಧನೆಯಲ್ಲಿ ಸುಮಾರು 75 ಚಯಾಪಚಯ ಗಳನ್ನು ವಿಜ್ಞಾನಿಗಳು ಗಮನಿಸಿದ್ದಾರೆ. ಇವುಗಳಲ್ಲಿ, 17 ಚಯಾಪಚಯ ಗಳು ಕೊರೊನಾ ಕಾಯಿಲೆಗೆ ಸಂಬಂಧಿಸಿವೆ, ಇದರಲ್ಲಿ ಕೈನುರೆನಿಕ್ ಆಸಿಡ್ ಪುರುಷ ರೋಗಿಗಳಲ್ಲಿ ಹೆಚ್ಚಿನಮಟ್ಟದಲ್ಲಿರುವುದು ಕಂಡುಬಂದಿದೆ.

ಮಹಿಳೆಯರಲ್ಲಿ ಟಿ ಸೆಲ್ಸ್ ಹೆಚ್ಚು..

ಕೋವಿಡ್ ಸೋಂಕಿಗೆ ಒಳಗಾದ ಪುರುಷ ರೋಗಿಗಳಿಗೆ ಹೋಲಿಸಿದರೆ ಮಹಿಳಾ ರೋಗಿಗಳಲ್ಲಿ ಟಿ ಸೆಲ್ಸ್ ಕ್ರಿಯಾತ್ಮಕತೆ ಹೆಚ್ಚಾಗಿದೆ ಎಂದು ಯೇಲ್ ವಿಶ್ವವಿದ್ಯಾಲಯದ ಸಂಶೋಧನೆಯಲ್ಲಿ ತಿಳಿದುಬಂದಿದೆ.
ಈ ಟಿ ಸೆಲ್ಸ್ ಮಾನವ ದೇಹದ ರೋಗನಿರೋಧಕ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವು ಬಿ ಸೆಲ್ಸ್ ನಂತೆ ಪ್ರತಿಕಾಯಗಳನ್ನು ಉತ್ಪಾದಿಸುವುದಿಲ್ಲ, ಆದರೆ ನೇರವಾಗಿ ಹೊಸ್ಟ್ ಕಣಗಳನ್ನು ನಾಶ ಮಾಡುತ್ತವೆ. ಇದೇ ಸಮಯದಲ್ಲಿ, ಇತರ ರೋಗನಿರೋಧಕ ಕೋಶಗಳು ಸಕ್ರಿಯಗೊಳಿಸುತ್ತವೆ. ವಯಸ್ಸಾದಂತೆ ಪುರುಷ ಕೋವಿಡ್ ರೋಗಿಗಳಲ್ಲಿ ಈ ಟಿ ಸೆಲ್ ಪ್ರತಿಕ್ರಿಯೆ ಕಡಿಮೆಯಾಗುತ್ತಿದೆ, ಆದರೆ ಮಹಿಳಾ ರೋಗಿಗಳಲ್ಲಿ ವಯಸ್ಸಿನ ಸಂಬಂಧವಿಲ್ಲದೇ ಟಿ ಸೆಲ್ ಕ್ರಿಯಾತ್ಮಕವಾಗುತ್ತದೆ ಎಂದು ಅಧ್ಯಯನವು ಹೇಳಿದೆ. ಇನ್ನು ಸಂಶೋಧನೆಗಾಗಿ 98 ಪುರುಷ, ಮಹಿಳಾ ರೋಗಿಗಳಿಂದ ಮಾದರಿಗಳನ್ನು ಸಂಗ್ರಹಿಸಲಾಗಿತ್ತು.

immune

ಇಮ್ಯೂನಿಟಿ ರೆಸ್ಪಾನ್ಸ್ ಹೆಚ್ಚು

ವೈರಸ್, ಬ್ಯಾಕ್ಟೀರಿಯಾಗಳಿಂದ ಉಂಟಾಗುವ ರೋಗಗಳನ್ನು ಎದುರಿಸುವ ರೋಗನಿರೋಧಕ ಪ್ರತಿಕ್ರಿಯೆಯು ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚು ಎಂದು ಅಧ್ಯಯನಗಳಿಂದ ತಿಳಿದುಬಂದಿದೆ. ಇದಕ್ಕೆ ಕಾರಣ ಎಕ್ಸ್ ಕ್ರೋಮೋಸೋಮ್ ಗಳು. ಮಹಿಳೆಯರಲ್ಲಿ ಎಕ್ಸ್ ಎಕ್ಸ್ ಅನ್ನೋ ಎರಡು ಕ್ರೋಮೋಸೋಮ್ ಗಳು ಇರುತ್ತವೆ.
ಪುರುಷರಲ್ಲಿ ಒಂದು ಎಕ್ಸ್, ಒಂದು ವೈ ಕ್ರೋಮೋಸೋಮ್ ಎಂಬ ಎರಡು ಕ್ರೋಮೋಸೋಮ್ ಇರುವುದು ಗೊತ್ತಿರುವ ವಿಚಾರವೇ..! ಆದ್ರೆ ಮಹಿಳೆಯಲ್ಲಿರುವ ಡಬಲ್ ಎಕ್ಸ್ ಕ್ರೋಮೋಸೋಮ್ ಅವರಲ್ಲಿ ಬಲವಾದ ರೋಗನಿರೋಧಕ ಪ್ರತಿಕ್ರಿಯೆಗೆ ಕಾರಣವಾಗಿದೆ ಎಂದು ಸೈಂಟಿಸ್ಟ್ಸ್ ಅಭಿಪ್ರಾಯಪಟ್ಟಿದ್ದಾರೆ.

ಇದಲ್ಲದೆ, ಮಹಿಳೆಯರಲ್ಲಿ ಬಿಡುಗಡೆಯಾಗುವ ಈಸ್ಟ್ರೋಜನ್ ಮತ್ತು ಪ್ರೊಜೆಸ್ಟರಾನ್ ಹಾರ್ಮೋನುಗಳು ರೋಗನಿರೋಧಕ ಪ್ರತಿಕ್ರಿಯೆಯನ್ನು ಉತ್ತೇಜಿಸುತ್ತವೆ.. ಫ್ಲೂ ಲಸಿಕೆಗಳನ್ನು ತೆಗೆದುಕೊಂಡ ನಂತರ ಫ್ಲೂ ವೈರಸ್ ಗೆ ಒಳಗಾಗಿದ್ದ ಮಹಿಳೆಯರಲ್ಲಿ ಪುರುಷರಿಗಿಂತ ಎರಡು ಪಟ್ಟು ಪ್ರತಿಕಾಯಗಳು ರಿಲೀಸ್ ಆಗಿವೆ.

Tags: Corona VirusimmuneYale University of the US
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram