ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ರೋಗಿಗಳಿಗೆ ಪ್ಲಾಸ್ಮಾ ಥೆರಪಿಗೆ ಕೇಂದ್ರ ಸರ್ಕಾರದಿಂದ ಅನುಮತಿ ಸಿಕ್ಕಿದ್ದು, ನಾಳೆ ಮೊದಲ ರೋಗಿಗೆ ಪ್ಲಾಸ್ಮಾ ಥೆರಪಿ ನಡೆಸಲಾಗುತ್ತದೆ ಎಂದು ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದು, ‘ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಇದಾಗಲಿದೆ’ ಎಂದು ತಿಳಿಸಿದ್ದಾರೆ.
ಇಂದು ಕೇಂದ್ರದ ಆರೋಗ್ಯ ಸಚಿವರೊಂದಿಗೆ ವಿಡಿಯೋ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ಕಾಣಿಸಿಕೊಂಡರೆ ಆತಂಕ ಪಡುವ ಅಗತ್ಯ ಇಲ್ಲ. ಬಹಳ ಜನ ಕೊರೊನಾ ಸೋಂಕು ದೃಢಪಟ್ಟರೆ ಕಳಂಕ ಎಂದು ತಿಳಿದುಕೊಂಡಿದ್ದಾರೆ. ಕೊರೊನಾ ಸಹ ಬೇರೆ ವೈರಸ್ ಥರ ಒಂದು ವೈರಸ್. ಅದರಿಂದ ಸಹಜ ಜ್ವರ ಹೇಗೆ ಬರುತ್ತೋ ಇದೂ ಕೂಡಾ ಹಾಗೆ. ಶೇ.97 ಕೊರೊನಾ ಸೋಂಕಿತರು ವಾಸಿಯಾಗಿದ್ದಾರೆ ಎಂದು ಸುಧಾಕರ್ ಹೇಳಿದರು.
Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?
ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...








