ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ರೋಗಿಗಳಿಗೆ ಪ್ಲಾಸ್ಮಾ ಥೆರಪಿಗೆ ಕೇಂದ್ರ ಸರ್ಕಾರದಿಂದ ಅನುಮತಿ ಸಿಕ್ಕಿದ್ದು, ನಾಳೆ ಮೊದಲ ರೋಗಿಗೆ ಪ್ಲಾಸ್ಮಾ ಥೆರಪಿ ನಡೆಸಲಾಗುತ್ತದೆ ಎಂದು ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದು, ‘ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಇದಾಗಲಿದೆ’ ಎಂದು ತಿಳಿಸಿದ್ದಾರೆ.
ಇಂದು ಕೇಂದ್ರದ ಆರೋಗ್ಯ ಸಚಿವರೊಂದಿಗೆ ವಿಡಿಯೋ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ಕಾಣಿಸಿಕೊಂಡರೆ ಆತಂಕ ಪಡುವ ಅಗತ್ಯ ಇಲ್ಲ. ಬಹಳ ಜನ ಕೊರೊನಾ ಸೋಂಕು ದೃಢಪಟ್ಟರೆ ಕಳಂಕ ಎಂದು ತಿಳಿದುಕೊಂಡಿದ್ದಾರೆ. ಕೊರೊನಾ ಸಹ ಬೇರೆ ವೈರಸ್ ಥರ ಒಂದು ವೈರಸ್. ಅದರಿಂದ ಸಹಜ ಜ್ವರ ಹೇಗೆ ಬರುತ್ತೋ ಇದೂ ಕೂಡಾ ಹಾಗೆ. ಶೇ.97 ಕೊರೊನಾ ಸೋಂಕಿತರು ವಾಸಿಯಾಗಿದ್ದಾರೆ ಎಂದು ಸುಧಾಕರ್ ಹೇಳಿದರು.
ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ
ರಾಜ್ಯ ರಾಜಕಾರಣದಲ್ಲಿ ಈಗ ವಾಗ್ಯುದ್ಧದ ಪರ್ವ ಶುರುವಾಗಿದೆ. ಉಮರ್ ಖಾಲಿದ್ ವಿಚಾರವಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್...








