ಇನ್ನೂ 40 ಕೋಟಿ ಭಾರತೀಯರಿಗೆ ಕರೊನಾ ಕಂಟಕ – ವರದಿಯಿಂದ ಆಘಾತಕಾರಿ ವಿಚಾರ ಬಹಿರಂಗ
ನವದೆಹಲಿ: ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಇದೀಗ ಮತ್ತೊಂದು ಆಘಾತಕಾರಿ ವಿಚಾರ ಬಹಿರಂಗವಾಗಿದೆ.. ಮಕ್ಕಳು ಸೇರಿದಂತೆ ಭಾರತೀಯ ಜನಸಂಖ್ಯೆಯ ಮೂರನೇ ಎರಡರಷ್ಟು ಜನರು ಕರೊನಾ ವಿರುದ್ಧ ಪ್ರತಿಕಾಯಗಳನ್ನು ಅಭಿವೃದ್ಧಿಪಡಿಸಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇನ್ನೂ 40 ಕೋಟಿ ಜನರಿಗೆ ಕರೊನಾದ ಅಪಾಯವಿದೆ ಎಂದು ತಿಳಿಸಲಾಗಿದೆ. ರಾಷ್ಟ್ರೀಯ ಸೀರೋಸರ್ವೆಯ ನಾಲ್ಕನೇ ಸುತ್ತಿನ ವರದಿಯಲ್ಲಿ ಈ ವಿಷಯ ಬಯಲಾಗಿದೆ. ಈ ಸುತ್ತಿನಲ್ಲಿ ಮಕ್ಕಳನ್ನೂ ಪರಿಗಣಿಸಿ ಸಮೀಕ್ಷೆ ನಡೆಸಲಾಗಿದೆ. 6-17 ವರ್ಷ ವಯಸ್ಸಿನ ಮಕ್ಕಳಲ್ಲಿ ಶೇಕಡಾ 50 ಕ್ಕಿಂತ ಹೆಚ್ಚು ಮಕ್ಕಳು ಕೋವಿಡ್ -19 ಗೆ ಒಡ್ಡಿಕೊಂಡಿದ್ದಾರೆ ಮತ್ತು ಅದರ ವಿರುದ್ಧ ಪ್ರತಿಕಾಯಗಳನ್ನು ಅಭಿವೃದ್ಧಿಪಡಿಸಿದ್ದಾರೆ ಎಂದು ಸಮೀಕ್ಷೆಯ ವರದಿ ತಿಳಿಸಿದೆ.
ಇನ್ನೂ 45-60 ವರ್ಷ ವಯಸ್ಸಿನ ಶೇ. 77.6 ಜನರಲ್ಲಿ ಪ್ರತಿಕಾಯ ಕಂಡುಬಂದಿದೆ. ನಂತರ 60 ವರ್ಷಕ್ಕಿಂತ ಮೇಲ್ಪಟ್ಟ ಶೇ. 76.7 ಜನರಲ್ಲಿ ಮತ್ತು 18-44 ವರ್ಷ ವಯಸ್ಸಿನವ ಶೇ. 66.7 ಜನರಲ್ಲಿ ಪ್ರತಿಕಾಯಗಳು ಕಾಣಿಸಿದೆ. ಈ ಸಮೀಕ್ಷೆಯಲ್ಲಿ, ಮಕ್ಕಳನ್ನು ಎರಡು ವಯಸ್ಸಿನ ಗುಂಪುಗಳಾಗಿ ವಿಂಗಡಿಸಲಾಗಿತ್ತು. 6-9 ವರ್ಷ ಎನ್ನುವ ಒಂದು ಗುಂಪು ಹಾಗೂ 10-17 ವರ್ಷದೊಳಗಿನ ಮಕ್ಕಳ ಎರಡನೇ ಗುಂಪನ್ನು ಪರಿಗಣಿಸಲಾಗಿತ್ತು. ಅದರಲ್ಲಿ 6-9 ವರ್ಷಗಳ ವಿಭಾಗದಲ್ಲಿ ಶೇ. 57.2 ಮಕ್ಕಳಲ್ಲಿ ಮತ್ತು 10-17 ವರ್ಷಗಳ ವಿಭಾಗದಲ್ಲಿ ಶೇ.61.6 ಮಕ್ಕಳಲ್ಲಿ ಪ್ರತಿಕಾಯ ಕಾಣಿಸಿಕೊಂಡಿದೆ.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ವಿಶ್ವಾದ್ಯಂತ ಕೊರೊನಾ ವೈರಸ್ , ರೂಪಾಂತರ ತಳಿಗಳ ಹಾವಳಿಯ ನಡುವೆ ಕೊರೊನಾ ಲಸಿಕೆ ಅಭಿಯಾನವೂ ಹೆಚ್ಚಾಗಿದೆ.. ಈ ನಡುವೆ ಅನೇಕ ಲಸಿಕೆಗಳ ಬಗ್ಗೆ ಹಲವಾರು ಗೊಂದಲಗಳಿದ್ದು, ಅದ್ರಲ್ಲಿ ಚೀನೀಯ ಲಸಿಕೆಯೂ ಒಂದಾಗಿದೆ.. ಈ ನಡುವೆ ಅನೇಕರಿಗೆ ಇನ್ನೂವರೆಗೂ ಯಾವುದೇ ಲಸಿಕೆ ಮೇಲೂ ನಂಬಿಕೆ ಬಂದಿಲ್ಲ.. ಅಡ್ಡಪರಿಣಾಮಗಳಾಗಬಹುದಾದ ಆತಂಕದಲ್ಲೇ ಲಸಿಕೆ ಪಡೆಯೋದಕ್ಕೆ ಹಿಂದೂ ಮುಂದು ನೋಡ್ತಿದ್ದಾರೆ..ಇದೇ ಪರಿಸ್ಥಿ ಬಾರತದಲ್ಲೂ ಇದೆ.
2008ರ ಮುಂಬೈ ಮೇಲಿನ ಉಗ್ರರ ದಾಳಿ ಪ್ರಕರಣದ ಆರೋಪಿ ರಾಣಾ ಭಾರತಕ್ಕೆ ಹಸ್ತಾಂತರ: ಅಮೆರಿಕಾ
ಕೊರೊನಾ ತವರಲ್ಲಿ ಹೊಸ ರೈಲು – ಗಂಟೆಗೆ 600 ಕಿ.ಮೀ ವೇಗದಲ್ಲಿ ಸಾಗುವ ಟ್ರೈನ್..!
ಮತ್ತೆ ಭಾರತಕ್ಕೆ ರೀ ಎಂಟ್ರಿ ಕೊಡಲಿದ್ಯಾ ಟಿಕ್ ಟಾಕ್..?
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








