ಶಿರಾಡಿ ಘಾಟ್ ನಲ್ಲಿ ಭೂ ಕುಸಿತ : ಸಂಚಾರ ನಿರ್ಬಂಧ
ಚಿಕ್ಕಮಗಳೂರು : ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕಿಸುವ ಶಿರಾಡಿ ಘಾಟ್ ನಲ್ಲಿ ಭೂ ಕುಸಿತ ಉಂಟಾಗಿದ್ದು, ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಜಿಲ್ಲೆಯಲ್ಲಿ ವರ್ಷಧಾರೆ ಹಿನ್ನಲೆಯಲ್ಲಿ ಸಕಲೇಶಪುರದಿಂದ ಮಂಗಳೂರು ಸಂಪರ್ಕಿಸುವ ಶಿರಾಡಿಘಾಟಿಯ ದೋಣಿಗಲ್ ಸಮೀಪ ರಸ್ತೆ ಕುಸಿದಿದೆ.
ರಸ್ತೆಯ ಮಧ್ಯಭಾಗದಲ್ಲಿ ಬಿರುಕು ಬಿದ್ದಿದ್ದು, ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಇನ್ನು ಶಿರಾಡಿ ಘಾಟ್ ನಲ್ಲಿ ಭೂಕುಸಿತ ಉಂಟಾದ ಕಾರಣ ಚಾರ್ಮಾಡಿ ಘಾಟಿನಲ್ಲಿ ವಾಹನ ದಟ್ಟನೆ ಅಧಿಕವಾಗಿದೆ.








